AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮ್ಮಿಶ್ರ ಸರ್ಕಾರ ಏಕೆ ಬಿತ್ತು ಎಂದು ಎಲ್ಲರಿಗೂ ಗೊತ್ತಿದೆ; ಹೆಚ್​ಡಿ ಕುಮಾರಸ್ವಾಮಿಗೆ ಸತೀಶ್ ಜಾರಕಿಹೊಳಿ ತಿರುಗೇಟು

ಸಮ್ಮಿಶ್ರ ಸರ್ಕಾರ ಪತನವಾಗಿ ಮತ್ತೊಂದು ಸರ್ಕಾರ ಬಂದಿದೆ. ಸಮ್ಮಿಶ್ರ ಸರ್ಕಾರ ಏಕೆ ಬಿತ್ತು ಎಂದು ಎಲ್ಲರಿಗೂ ಗೊತ್ತಿದೆ. ಸಮ್ಮಿಶ್ರ ಸರ್ಕಾರ ಪತನವಾಗಿರುವ ಬಗ್ಗೆ ಈಗ ಚರ್ಚೆ ಮಾಡುವುದು ಸರಿಯಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಸಮ್ಮಿಶ್ರ ಸರ್ಕಾರ ಏಕೆ ಬಿತ್ತು ಎಂದು ಎಲ್ಲರಿಗೂ ಗೊತ್ತಿದೆ; ಹೆಚ್​ಡಿ ಕುಮಾರಸ್ವಾಮಿಗೆ ಸತೀಶ್ ಜಾರಕಿಹೊಳಿ ತಿರುಗೇಟು
ಸತೀಶ್ ಜಾರಕಿಹೊಳಿ
TV9 Web
| Edited By: |

Updated on:Oct 14, 2021 | 3:25 PM

Share

ಹಾವೇರಿ: ವಿರೋಧ ಪಕ್ಷದ ಸ್ಥಾನಕ್ಕಾಗಿ ಸಿದ್ದರಾಮಯ್ಯ ನಮ್ಮ ಸರ್ಕಾರವನ್ನು ಬೀಳಿಸಿದರು ಎಂಬ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ, ಸಮ್ಮಿಶ್ರ ಸರ್ಕಾರ ಪತನವಾಗಿ ಮತ್ತೊಂದು ಸರ್ಕಾರ ಬಂದಿದೆ. ಸಮ್ಮಿಶ್ರ ಸರ್ಕಾರ ಏಕೆ ಬಿತ್ತು ಎಂದು ಎಲ್ಲರಿಗೂ ಗೊತ್ತಿದೆ. ಸಮ್ಮಿಶ್ರ ಸರ್ಕಾರ ಪತನವಾಗಿರುವ ಬಗ್ಗೆ ಈಗ ಚರ್ಚೆ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಹಾವೇರಿ ಜಿಲ್ಲೆ ಹಾನಗಲ್‌ನಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ, ಹೆಚ್​​ಡಿ ಕುಮಾರಸ್ವಾಮಿ ಅವರ ಆರೋಪಕ್ಕೆ ಸಿದ್ದರಾಮಯ್ಯ ಉತ್ತರ ನೀಡಿದ್ದಾರೆ. ಕಾಂಗ್ರೆಸ್ ಮುಳುಗುವ ಹಡಗು ಎಂಬ ಆರೋಪದ ವಿಚಾರವಾಗಿ ಬಿಜೆಪಿಯ ಆರೋಪಕ್ಕೆ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ. ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಏನಾಗಿದೆ?, ಬಿಜೆಪಿಯವರ ಪರಿಸ್ಥಿತಿ ಏನಾಗಿದೆ? ಎಂದು ಸತೀಶ್ ಜಾರಕಿಹೊಳಿ ಪ್ರಶ್ನಿಸಿದ್ದಾರೆ. ಯಾರನ್ನೂ ಯಾರೂ ಮುಳುಗಿಸುವುದಕ್ಕೆ ಆಗುವುದಿಲ್ಲ. ಮತದಾರರು ಎಲ್ಲವನ್ನೂ ತೀರ್ಮಾನ ಮಾಡುತ್ತಾರೆ ಎಂದು ಹೇಳಿದ್ದಾರೆ.

ಮಂಗಳವಾರ ಸಿದ್ದರಾಮಯ್ಯನವರ ವಿರುದ್ಧ ವಾಗ್ದಾಳಿ ನಡೆಸಿದ್ದ ಹೆಚ್​ಡಿ ಕುಮಾರಸ್ವಾಮಿ, ಸರ್ಕಾರ ಬೀಳುತ್ತಿದೆ ಬನ್ನಿ ಎಂದು ಕರೆದರೂ ಕುಮಾರಸ್ವಾಮಿ ಬರಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು. ಸಿದ್ದರಾಮಯ್ಯ ಅದ್ಯಾವ ನಂಬರ್​ಗೆ ಫೋನ್ ಮಾಡಿದ್ದರೋ ಎಂಬುದರ ಮಾಹಿತಿ ನೀಡಲಿ. ನಾನೇ ಗೃಹ ಸಚಿವ ಪರಮೇಶ್ವರ್​ಗೆ ಫೋನ್ ಮಾಡಿದ್ದೆ. ಅವರೇ ನನಗೆ ಆರಾಮಾಗಿ ಬನ್ನಿ, ಏನೂ ಆಗುವುದಿಲ್ಲ ಎಂದಿದ್ದರು. ಆದರೆ, ಸಿದ್ದರಾಮಯ್ಯ ನನ್ನ ಸರ್ಕಾರವನ್ನು ಬೀಳಿಸುವ ಹುನ್ನಾರ ಮಾಡುತ್ತಿದ್ದಾರೆ ಎಂಬುದು ನನಗೆ ಗೊತ್ತಿತ್ತು. ಈ ಸರ್ಕಾರ ನಡೆಯುತ್ತದೋ ಇಲ್ಲವೋ ಎಂಬುದನ್ನು ಸಿದ್ದರಾಮಯ್ಯ ಹೇಳಿದ್ದನ್ನು ನಾನೇ ನೋಡಿದ್ದೇನೆ ಎಂದು ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದರು.

ಇದನ್ನೂ ಓದಿ: ಕಾಂಗ್ರೆಸ್ ಬುಡಕ್ಕೆ ಬೆಂಕಿ ಇಡುವುದು ಸಿದ್ದರಾಮಯ್ಯನವರೇ! ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ

ಬಿಜೆಪಿಗೆ ಹೋಗುವಂತೆ ನಮಗೆ ಸಿದ್ದರಾಮಯ್ಯ ಹೇಳಿರಲಿಲ್ಲ; ಕುಮಾರಸ್ವಾಮಿಗೆ ಎಸ್.ಟಿ. ಸೋಮಶೇಖರ್ ತಿರುಗೇಟು

Published On - 3:24 pm, Thu, 14 October 21

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ