AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮ್ಮಿಶ್ರ ಸರ್ಕಾರ ಏಕೆ ಬಿತ್ತು ಎಂದು ಎಲ್ಲರಿಗೂ ಗೊತ್ತಿದೆ; ಹೆಚ್​ಡಿ ಕುಮಾರಸ್ವಾಮಿಗೆ ಸತೀಶ್ ಜಾರಕಿಹೊಳಿ ತಿರುಗೇಟು

ಸಮ್ಮಿಶ್ರ ಸರ್ಕಾರ ಪತನವಾಗಿ ಮತ್ತೊಂದು ಸರ್ಕಾರ ಬಂದಿದೆ. ಸಮ್ಮಿಶ್ರ ಸರ್ಕಾರ ಏಕೆ ಬಿತ್ತು ಎಂದು ಎಲ್ಲರಿಗೂ ಗೊತ್ತಿದೆ. ಸಮ್ಮಿಶ್ರ ಸರ್ಕಾರ ಪತನವಾಗಿರುವ ಬಗ್ಗೆ ಈಗ ಚರ್ಚೆ ಮಾಡುವುದು ಸರಿಯಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಸಮ್ಮಿಶ್ರ ಸರ್ಕಾರ ಏಕೆ ಬಿತ್ತು ಎಂದು ಎಲ್ಲರಿಗೂ ಗೊತ್ತಿದೆ; ಹೆಚ್​ಡಿ ಕುಮಾರಸ್ವಾಮಿಗೆ ಸತೀಶ್ ಜಾರಕಿಹೊಳಿ ತಿರುಗೇಟು
ಸತೀಶ್ ಜಾರಕಿಹೊಳಿ
TV9 Web
| Edited By: |

Updated on:Oct 14, 2021 | 3:25 PM

Share

ಹಾವೇರಿ: ವಿರೋಧ ಪಕ್ಷದ ಸ್ಥಾನಕ್ಕಾಗಿ ಸಿದ್ದರಾಮಯ್ಯ ನಮ್ಮ ಸರ್ಕಾರವನ್ನು ಬೀಳಿಸಿದರು ಎಂಬ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ, ಸಮ್ಮಿಶ್ರ ಸರ್ಕಾರ ಪತನವಾಗಿ ಮತ್ತೊಂದು ಸರ್ಕಾರ ಬಂದಿದೆ. ಸಮ್ಮಿಶ್ರ ಸರ್ಕಾರ ಏಕೆ ಬಿತ್ತು ಎಂದು ಎಲ್ಲರಿಗೂ ಗೊತ್ತಿದೆ. ಸಮ್ಮಿಶ್ರ ಸರ್ಕಾರ ಪತನವಾಗಿರುವ ಬಗ್ಗೆ ಈಗ ಚರ್ಚೆ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಹಾವೇರಿ ಜಿಲ್ಲೆ ಹಾನಗಲ್‌ನಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ, ಹೆಚ್​​ಡಿ ಕುಮಾರಸ್ವಾಮಿ ಅವರ ಆರೋಪಕ್ಕೆ ಸಿದ್ದರಾಮಯ್ಯ ಉತ್ತರ ನೀಡಿದ್ದಾರೆ. ಕಾಂಗ್ರೆಸ್ ಮುಳುಗುವ ಹಡಗು ಎಂಬ ಆರೋಪದ ವಿಚಾರವಾಗಿ ಬಿಜೆಪಿಯ ಆರೋಪಕ್ಕೆ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ. ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಏನಾಗಿದೆ?, ಬಿಜೆಪಿಯವರ ಪರಿಸ್ಥಿತಿ ಏನಾಗಿದೆ? ಎಂದು ಸತೀಶ್ ಜಾರಕಿಹೊಳಿ ಪ್ರಶ್ನಿಸಿದ್ದಾರೆ. ಯಾರನ್ನೂ ಯಾರೂ ಮುಳುಗಿಸುವುದಕ್ಕೆ ಆಗುವುದಿಲ್ಲ. ಮತದಾರರು ಎಲ್ಲವನ್ನೂ ತೀರ್ಮಾನ ಮಾಡುತ್ತಾರೆ ಎಂದು ಹೇಳಿದ್ದಾರೆ.

ಮಂಗಳವಾರ ಸಿದ್ದರಾಮಯ್ಯನವರ ವಿರುದ್ಧ ವಾಗ್ದಾಳಿ ನಡೆಸಿದ್ದ ಹೆಚ್​ಡಿ ಕುಮಾರಸ್ವಾಮಿ, ಸರ್ಕಾರ ಬೀಳುತ್ತಿದೆ ಬನ್ನಿ ಎಂದು ಕರೆದರೂ ಕುಮಾರಸ್ವಾಮಿ ಬರಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು. ಸಿದ್ದರಾಮಯ್ಯ ಅದ್ಯಾವ ನಂಬರ್​ಗೆ ಫೋನ್ ಮಾಡಿದ್ದರೋ ಎಂಬುದರ ಮಾಹಿತಿ ನೀಡಲಿ. ನಾನೇ ಗೃಹ ಸಚಿವ ಪರಮೇಶ್ವರ್​ಗೆ ಫೋನ್ ಮಾಡಿದ್ದೆ. ಅವರೇ ನನಗೆ ಆರಾಮಾಗಿ ಬನ್ನಿ, ಏನೂ ಆಗುವುದಿಲ್ಲ ಎಂದಿದ್ದರು. ಆದರೆ, ಸಿದ್ದರಾಮಯ್ಯ ನನ್ನ ಸರ್ಕಾರವನ್ನು ಬೀಳಿಸುವ ಹುನ್ನಾರ ಮಾಡುತ್ತಿದ್ದಾರೆ ಎಂಬುದು ನನಗೆ ಗೊತ್ತಿತ್ತು. ಈ ಸರ್ಕಾರ ನಡೆಯುತ್ತದೋ ಇಲ್ಲವೋ ಎಂಬುದನ್ನು ಸಿದ್ದರಾಮಯ್ಯ ಹೇಳಿದ್ದನ್ನು ನಾನೇ ನೋಡಿದ್ದೇನೆ ಎಂದು ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದರು.

ಇದನ್ನೂ ಓದಿ: ಕಾಂಗ್ರೆಸ್ ಬುಡಕ್ಕೆ ಬೆಂಕಿ ಇಡುವುದು ಸಿದ್ದರಾಮಯ್ಯನವರೇ! ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ

ಬಿಜೆಪಿಗೆ ಹೋಗುವಂತೆ ನಮಗೆ ಸಿದ್ದರಾಮಯ್ಯ ಹೇಳಿರಲಿಲ್ಲ; ಕುಮಾರಸ್ವಾಮಿಗೆ ಎಸ್.ಟಿ. ಸೋಮಶೇಖರ್ ತಿರುಗೇಟು

Published On - 3:24 pm, Thu, 14 October 21

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು