AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮಾಹಿತಿ ಪ್ರಕಾರ ಬಸವರಾಜ ಬೊಮ್ಮಾಯಿ 6 ತಿಂಗಳ ಸಿಎಂ: ಹೊಸ ಬಾಂಬ್ ಸಿಡಿಸಿದ ಸತೀಶ್ ಜಾರಕಿಹೊಳಿ

ಬಿಜೆಪಿಯಲ್ಲೂ ಯಡಿಯೂರಪ್ಪ ಬಣ, ಆರ್​ಎಸ್​ಎಸ್​ ಬಣ ಎಂದು ಇದೆ. ಎಲ್ಲ ಪಕ್ಷದಲ್ಲೂ ಗುಂಪುಗಳಿವೆ. ನಮ್ಮ ಪಕ್ಷದಲ್ಲೂ ಗುಂಪುಗಳಿವೆ. ಹಾಗಂತ ನಾವು ಮುಳುಗಿ ಹೋಗಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಾನು ಸಿ.ಎಮ್ ರೇಸ್ ನಲ್ಲಿ‌ ಇಲ್ಲ. ಪಕ್ಷ ಕಟ್ಟೋ ರೇಸ್ ನಲ್ಲಿ ಇದ್ದೇನೆ ಎಂದು ಸತೀಶ್ ತಿಳಿಸಿದ್ದಾರೆ.

ನಮ್ಮ ಮಾಹಿತಿ ಪ್ರಕಾರ ಬಸವರಾಜ ಬೊಮ್ಮಾಯಿ 6 ತಿಂಗಳ ಸಿಎಂ: ಹೊಸ ಬಾಂಬ್ ಸಿಡಿಸಿದ ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ
TV9 Web
| Edited By: |

Updated on: Feb 02, 2022 | 4:40 PM

Share

ಕೊಪ್ಪಳ: ನಮ್ಮ ಮಾಹಿತಿ ಪ್ರಕಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 6 ತಿಂಗಳ ಸಿಎಂ ಆಗಿದ್ದಾರೆ. ಸಿಎಂ ಬೊಮ್ಮಾಯಿಗೆ 6 ತಿಂಗಳ ಅವಕಾಶ ಕೊಟ್ಟಿದ್ದಾರೆ. ಸಿಎಂ ಮಾಡುವಾಗಲೇ 6 ತಿಂಗಳು ಎಂದು ಹೇಳಿದ್ದಾರೆ. ಷರತ್ತು ಹಾಕಿ ಪ್ರಮಾಣವಚನಕ್ಕೆ ಅವಕಾಶ ಕೊಟ್ಟಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಈ ಬಾರಿಯೂ ಮೂವರು ಸಿಎಂಗಳು ಆಗಲಿದ್ದಾರೆ ಎಂದು ಕೊಪ್ಪಳದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.

ಇದೇ ವೇಳೆ ಕಾಂಗ್ರೆಸ್‌ನಲ್ಲಿ ಯಾವುದೇ ಬಣಗಳು ಇಲ್ಲ. ಸಿಎಂ ಆಗುವ ಸಾಮರ್ಥ್ಯ ನಾಲ್ಕೈದು ನಾಯಕರಿಗಿದೆ. ನನ್ನನ್ನು ಬಿಟ್ಟು ನಮ್ಮಲ್ಲಿ 4-5 ನಾಯಕರಿಗೆ ಸಾಮರ್ಥ್ಯವಿದೆ ಎಂದು ಕಾಂಗ್ರೆಸ್ ಅಧಿಕಾರ, ಮುಖ್ಯಮಂತ್ರಿ ಬಗ್ಗೆ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಶ್ರೀರಾಮುಲು ಡಿ.ಸಿ.ಎಮ್ ಬೇಡಿಕೆ ವಿಚಾರವಾಗಿ ಸತೀಶ್ ಜಾರಕಿಹೊಳಿ ಟಾಂಗ್ ನೀಡಿದ್ದಾರೆ.

ಡಿ.ಸಿ.ಎಮ್ ಆದ್ರೂ ಕೆಲಸ ಮಾಡಬಹುದು. ಡಿ.ಸಿ.ಎಮ್ ಇರದೆ ಹೋದ್ರೂ ಕೆಲಸ ಮಾಡಬಹುದು. ನಮ್ಮ ಸಮುದಾಯಕ್ಕೆ 7.5 ಮೀಸಲಾತಿ ಕೊಡ್ತೀವಿ ಎಂದು ವಾಗ್ದಾನ ಮಾಡಿದ್ರು. ಬಿಜೆಪಿ ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಮೀಸಲಾತಿ ಕೊಡ್ತೀನಿ ಎಂದಿದ್ರು. ಇದೀಗ 24 ತಿಂಗಳು ಕಳೆದಿದೆ, ಸಮಾಜ‌ ಮುಂದಿಟ್ಟು ಅಧಿಕಾರ ಪಡೆಯೋ ಗಿಮಿಕ್ ಇದು ಎಂದು ಸತೀಶ್ ಜಾರಕಿಹೊಳಿ ಟೀಕಿಸಿದ್ದಾರೆ.

ಮೀಸಲಾತಿ ಕೊಡ್ತೀನಿ ಅಂದಿದ್ದಕ್ಕೆ ಸಮಾಜ ಬಿಜೆಪಿ ಪರ ವೋಟ್ ಹಾಕಿದ್ರು. ಬಿಜೆಪಿಯಲ್ಲೂ ಯಡಿಯೂರಪ್ಪ ಬಣ, ಆರ್​ಎಸ್​ಎಸ್​ ಬಣ ಎಂದು ಇದೆ. ಎಲ್ಲ ಪಕ್ಷದಲ್ಲೂ ಗುಂಪುಗಳಿವೆ. ನಮ್ಮ ಪಕ್ಷದಲ್ಲೂ ಗುಂಪುಗಳಿವೆ. ಹಾಗಂತ ನಾವು ಮುಳುಗಿ ಹೋಗಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಾನು ಸಿ.ಎಮ್ ರೇಸ್ ನಲ್ಲಿ‌ ಇಲ್ಲ. ಪಕ್ಷ ಕಟ್ಟೋ ರೇಸ್ ನಲ್ಲಿ ಇದ್ದೇನೆ ಎಂದು ಸತೀಶ್ ತಿಳಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಅವಶ್ಯ, ಅನಿವಾರ್ಯ; ಎರಡನೇ ನಾಯಕತ್ವ ಪಕ್ಷಕ್ಕೆ ಬೇಕು: ಬಸನಗೌಡ ಪಾಟೀಲ್ ಯತ್ನಾಳ್

ಇದನ್ನೂ ಓದಿ: ಸಚಿವರ ವಿರುದ್ಧ ವರಿಷ್ಠರಿಗೆ, ಸಿಎಂಗೆ ದೂರು ಕೊಟ್ಟಿರುವುದು ನಿಜ: ರೇಣುಕಾಚಾರ್ಯ

Follow Us
Web contact
Web contact

TV9 Kannada

Read More
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ