AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮಾಹಿತಿ ಪ್ರಕಾರ ಬಸವರಾಜ ಬೊಮ್ಮಾಯಿ 6 ತಿಂಗಳ ಸಿಎಂ: ಹೊಸ ಬಾಂಬ್ ಸಿಡಿಸಿದ ಸತೀಶ್ ಜಾರಕಿಹೊಳಿ

ಬಿಜೆಪಿಯಲ್ಲೂ ಯಡಿಯೂರಪ್ಪ ಬಣ, ಆರ್​ಎಸ್​ಎಸ್​ ಬಣ ಎಂದು ಇದೆ. ಎಲ್ಲ ಪಕ್ಷದಲ್ಲೂ ಗುಂಪುಗಳಿವೆ. ನಮ್ಮ ಪಕ್ಷದಲ್ಲೂ ಗುಂಪುಗಳಿವೆ. ಹಾಗಂತ ನಾವು ಮುಳುಗಿ ಹೋಗಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಾನು ಸಿ.ಎಮ್ ರೇಸ್ ನಲ್ಲಿ‌ ಇಲ್ಲ. ಪಕ್ಷ ಕಟ್ಟೋ ರೇಸ್ ನಲ್ಲಿ ಇದ್ದೇನೆ ಎಂದು ಸತೀಶ್ ತಿಳಿಸಿದ್ದಾರೆ.

ನಮ್ಮ ಮಾಹಿತಿ ಪ್ರಕಾರ ಬಸವರಾಜ ಬೊಮ್ಮಾಯಿ 6 ತಿಂಗಳ ಸಿಎಂ: ಹೊಸ ಬಾಂಬ್ ಸಿಡಿಸಿದ ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ
TV9 Web
| Edited By: |

Updated on: Feb 02, 2022 | 4:40 PM

Share

ಕೊಪ್ಪಳ: ನಮ್ಮ ಮಾಹಿತಿ ಪ್ರಕಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 6 ತಿಂಗಳ ಸಿಎಂ ಆಗಿದ್ದಾರೆ. ಸಿಎಂ ಬೊಮ್ಮಾಯಿಗೆ 6 ತಿಂಗಳ ಅವಕಾಶ ಕೊಟ್ಟಿದ್ದಾರೆ. ಸಿಎಂ ಮಾಡುವಾಗಲೇ 6 ತಿಂಗಳು ಎಂದು ಹೇಳಿದ್ದಾರೆ. ಷರತ್ತು ಹಾಕಿ ಪ್ರಮಾಣವಚನಕ್ಕೆ ಅವಕಾಶ ಕೊಟ್ಟಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಈ ಬಾರಿಯೂ ಮೂವರು ಸಿಎಂಗಳು ಆಗಲಿದ್ದಾರೆ ಎಂದು ಕೊಪ್ಪಳದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.

ಇದೇ ವೇಳೆ ಕಾಂಗ್ರೆಸ್‌ನಲ್ಲಿ ಯಾವುದೇ ಬಣಗಳು ಇಲ್ಲ. ಸಿಎಂ ಆಗುವ ಸಾಮರ್ಥ್ಯ ನಾಲ್ಕೈದು ನಾಯಕರಿಗಿದೆ. ನನ್ನನ್ನು ಬಿಟ್ಟು ನಮ್ಮಲ್ಲಿ 4-5 ನಾಯಕರಿಗೆ ಸಾಮರ್ಥ್ಯವಿದೆ ಎಂದು ಕಾಂಗ್ರೆಸ್ ಅಧಿಕಾರ, ಮುಖ್ಯಮಂತ್ರಿ ಬಗ್ಗೆ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಶ್ರೀರಾಮುಲು ಡಿ.ಸಿ.ಎಮ್ ಬೇಡಿಕೆ ವಿಚಾರವಾಗಿ ಸತೀಶ್ ಜಾರಕಿಹೊಳಿ ಟಾಂಗ್ ನೀಡಿದ್ದಾರೆ.

ಡಿ.ಸಿ.ಎಮ್ ಆದ್ರೂ ಕೆಲಸ ಮಾಡಬಹುದು. ಡಿ.ಸಿ.ಎಮ್ ಇರದೆ ಹೋದ್ರೂ ಕೆಲಸ ಮಾಡಬಹುದು. ನಮ್ಮ ಸಮುದಾಯಕ್ಕೆ 7.5 ಮೀಸಲಾತಿ ಕೊಡ್ತೀವಿ ಎಂದು ವಾಗ್ದಾನ ಮಾಡಿದ್ರು. ಬಿಜೆಪಿ ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಮೀಸಲಾತಿ ಕೊಡ್ತೀನಿ ಎಂದಿದ್ರು. ಇದೀಗ 24 ತಿಂಗಳು ಕಳೆದಿದೆ, ಸಮಾಜ‌ ಮುಂದಿಟ್ಟು ಅಧಿಕಾರ ಪಡೆಯೋ ಗಿಮಿಕ್ ಇದು ಎಂದು ಸತೀಶ್ ಜಾರಕಿಹೊಳಿ ಟೀಕಿಸಿದ್ದಾರೆ.

ಮೀಸಲಾತಿ ಕೊಡ್ತೀನಿ ಅಂದಿದ್ದಕ್ಕೆ ಸಮಾಜ ಬಿಜೆಪಿ ಪರ ವೋಟ್ ಹಾಕಿದ್ರು. ಬಿಜೆಪಿಯಲ್ಲೂ ಯಡಿಯೂರಪ್ಪ ಬಣ, ಆರ್​ಎಸ್​ಎಸ್​ ಬಣ ಎಂದು ಇದೆ. ಎಲ್ಲ ಪಕ್ಷದಲ್ಲೂ ಗುಂಪುಗಳಿವೆ. ನಮ್ಮ ಪಕ್ಷದಲ್ಲೂ ಗುಂಪುಗಳಿವೆ. ಹಾಗಂತ ನಾವು ಮುಳುಗಿ ಹೋಗಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಾನು ಸಿ.ಎಮ್ ರೇಸ್ ನಲ್ಲಿ‌ ಇಲ್ಲ. ಪಕ್ಷ ಕಟ್ಟೋ ರೇಸ್ ನಲ್ಲಿ ಇದ್ದೇನೆ ಎಂದು ಸತೀಶ್ ತಿಳಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಅವಶ್ಯ, ಅನಿವಾರ್ಯ; ಎರಡನೇ ನಾಯಕತ್ವ ಪಕ್ಷಕ್ಕೆ ಬೇಕು: ಬಸನಗೌಡ ಪಾಟೀಲ್ ಯತ್ನಾಳ್

ಇದನ್ನೂ ಓದಿ: ಸಚಿವರ ವಿರುದ್ಧ ವರಿಷ್ಠರಿಗೆ, ಸಿಎಂಗೆ ದೂರು ಕೊಟ್ಟಿರುವುದು ನಿಜ: ರೇಣುಕಾಚಾರ್ಯ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್