AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ನಾಯಕರೇ ಈ ರೀತಿ ಮಾಡಿದರೆ ಹೇಗೆ? ಘಟನೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗಿದೆ: ವಿಎಸ್ ಉಗ್ರಪ್ಪಗೆ ಸಿದ್ದರಾಮಯ್ಯ ಎಚ್ಚರಿಕೆ

Siddaramaiah: ಹಿರಿಯ ನಾಯಕರೇ ಈ ರೀತಿಯಾಗಿ ಮಾಡಿದರೆ ಹೇಗೆ? ಎಂದು ಸಿದ್ದರಾಮಯ್ಯ ಉಗ್ರಪ್ಪ ಬಳಿ ಪ್ರಶ್ನೆ ಮಾಡಿದ್ದಾರೆ. ಸಿದ್ದರಾಮಯ್ಯಗೆ ಉಗ್ರಪ್ಪ ವಿವರಣೆಯನ್ನು ನೀಡಿದ್ದಾರೆ. ಆದರೆ, ಸಿಡಿಮಿಡಿಯಲ್ಲೇ ಸಿದ್ದರಾಮಯ್ಯ ಮಾತು ಮುಗಿಸಿದ್ದಾರೆ ಎಂದು ತಿಳಿದುಬಂದಿದೆ.

ಹಿರಿಯ ನಾಯಕರೇ ಈ ರೀತಿ ಮಾಡಿದರೆ ಹೇಗೆ? ಘಟನೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗಿದೆ: ವಿಎಸ್ ಉಗ್ರಪ್ಪಗೆ ಸಿದ್ದರಾಮಯ್ಯ ಎಚ್ಚರಿಕೆ
ಸಿದ್ದರಾಮಯ್ಯ
Follow us
TV9 Web
| Updated By: ganapathi bhat

Updated on:Oct 13, 2021 | 10:54 PM

ಬೆಂಗಳೂರು: ಕಾಂಗ್ರೆಸ್ ನಾಯಕ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕುರಿತು ಕಾಂಗ್ರೆಸ್ ಹಿರಿಯ ನಾಯಕ ವಿ.ಎಸ್. ಉಗ್ರಪ್ಪ ಹಾಗೂ ಸಲೀಂ ಮಾತನಾಡಿರುವ ವಿಚಾರ ಕರ್ನಾಟಕ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರು ಟೀಕೆ, ವ್ಯಂಗ್ಯಗಳ ಸುರಿಮಳೆಗೈದಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಕೂಡ ಇಬ್ಬರ ಘಟನೆ ಹಾನಿ ಉಂಟುಮಾಡಿದೆ. ಈ ಹಿನ್ನೆಲೆಯಲ್ಲಿ ವಿ.ಎಸ್. ಉಗ್ರಪ್ಪಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಸಂಜೆ ಸಿದ್ದರಾಮಯ್ಯಗೆ ವಿ.ಎಸ್. ಉಗ್ರಪ್ಪ ಕರೆ ಮಾಡಿದ್ದರು. ಇದೇ ವೇಳೆ, ಸಿದ್ದರಾಮಯ್ಯ ಉಗ್ರಪ್ಪ ನಡೆಗೆ ಅಸಮಾಧಾನ ವ್ಯಕ್ತಪಡಿಸಿರುವುದು ತಿಳಿದುಬಂದಿದೆ. ಸಂಜೆ 6 ಗಂಟೆ ಸುಮಾರಿಗೆ ಉಗ್ರಪ್ಪ ಕರೆ ಮಾಡಿದ್ದರು. ಘಟನೆ ಕುರಿತು ವಿವರ ನೀಡಲು ಉಗ್ರಪ್ಪ ಮುಂದಾಗಿದ್ದರು ಎಂದು ಮಾಹಿತಿ ಲಭ್ಯವಾಗಿದೆ. ಈ ವೇಳೆ ಉಗ್ರಪ್ಪರಿಗೆ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಈ ರೀತಿಯ ಘಟನೆಗಳು ಒಳ್ಳೆಯದಲ್ಲ ಎಂದು ಎಚ್ಚರಿಕೆ ನೀಡಿರುವುದು ತಿಳಿದುಬಂದಿದೆ.

ಈ ಘಟನೆಯಿಂದಾಗಿ ಪಕ್ಷಕ್ಕೆ ಡ್ಯಾಮೇಜ್ ಆಗಿದೆ. ಇದರಿಂದ ನಾಯಕರು ಮುಜುಗರ ಎದುರಿಸುವಂತಾಗಿದೆ. ಹಿರಿಯ ನಾಯಕರೇ ಈ ರೀತಿಯಾಗಿ ಮಾಡಿದರೆ ಹೇಗೆ? ಎಂದು ಸಿದ್ದರಾಮಯ್ಯ ಉಗ್ರಪ್ಪ ಬಳಿ ಪ್ರಶ್ನೆ ಮಾಡಿದ್ದಾರೆ. ಸಿದ್ದರಾಮಯ್ಯಗೆ ಉಗ್ರಪ್ಪ ವಿವರಣೆಯನ್ನು ನೀಡಿದ್ದಾರೆ. ಆದರೆ, ಸಿಡಿಮಿಡಿಯಲ್ಲೇ ಸಿದ್ದರಾಮಯ್ಯ ಮಾತು ಮುಗಿಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಏನೂ ಹೇಳಬೇಡ ಸುಮ್ನಿರಪ್ಪ, ಸ್ಪಷ್ಟನೆ ನೀಡುವುದಕ್ಕೆ ಮುಂದಾದ ಉಗ್ರಪ್ಪ ವಿರುದ್ಧ ಡಿಕೆ ಶಿವಕುಮಾರ್ ಉಗ್ರ ರೂಪ!

ಇದನ್ನೂ ಓದಿ: Congress: ರಾಜಕಾರಣದಲ್ಲಿ ಚಪ್ಪಲಿ ಎಸೆಯೋರು, ಜಯಕಾರ ಹಾಕೋರು ಇರ್ತಾರೆ: ಸಲೀಂ-ಉಗ್ರಪ್ಪ ಹೇಳಿಕೆಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ

Published On - 10:29 pm, Wed, 13 October 21

VIDEO: ಕೊನೆಯ ಎಸೆತದಲ್ಲಿ ಸಿಕ್ಸ್​... ದಾಖಲೆಯ ರನ್ ಚೇಸ್​..!
VIDEO: ಕೊನೆಯ ಎಸೆತದಲ್ಲಿ ಸಿಕ್ಸ್​... ದಾಖಲೆಯ ರನ್ ಚೇಸ್​..!
ಗರ್ಭವತಿಯಾದ ಹೆಣ್ಣಿನ ಸಂತೋಷ ಕುಟುಂಬಕ್ಕೆ ಸರ್ವಶುಭಮಂಗಳ ಹೇಗೆ?
ಗರ್ಭವತಿಯಾದ ಹೆಣ್ಣಿನ ಸಂತೋಷ ಕುಟುಂಬಕ್ಕೆ ಸರ್ವಶುಭಮಂಗಳ ಹೇಗೆ?
Daily Horoscope: ಈ ರಾಶಿಯವರು ಆತುರದಲ್ಲಿ ಏನನ್ನಾದರೂ ಮಾಡಲು ಹೋಗದಿರಿ
Daily Horoscope: ಈ ರಾಶಿಯವರು ಆತುರದಲ್ಲಿ ಏನನ್ನಾದರೂ ಮಾಡಲು ಹೋಗದಿರಿ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ