ವಿಧಾನಮಂಡಲ ಅಧಿವೇಶನ ಮೊಟಕುಗೊಳಿಸಿ ಪ್ರಜಾಪ್ರಭುತ್ವ ಮೌಲ್ಯಗಳ ಬಗ್ಗೆ ಪಾಠ: ಸಿದ್ದರಾಮಯ್ಯ ಆಕ್ರೋಶ

Siddaramaiah: ಆಪರೇಷನ್ ಕಮಲ ಎಂಬ ಅನೈತಿಕ ರಾಜಕೀಯದ ಮೂಲಕ ಸಂಸದೀಯ ಪ್ರಜಾಪ್ರಭುತ್ವದ ಬುನಾದಿ ಬುಡಮೇಲು ಮಾಡಿದ ರಾಜ್ಯ ಬಿಜೆಪಿ ಸದಸ್ಯರಿಗೆ ಪ್ರಜಾಪ್ರಭುತ್ವ ಮೌಲ್ಯಗಳು ಹಾಗೂ ಸಂಸದೀಯ ಮೌಲ್ಯಗಳ ಕುರಿತು ಚರ್ಚಿಸುವ ನೈತಿಕತೆ ಇಲ್ಲ: ಸಿದ್ದರಾಮಯ್ಯ ಟ್ವೀಟ್

ವಿಧಾನಮಂಡಲ ಅಧಿವೇಶನ ಮೊಟಕುಗೊಳಿಸಿ ಪ್ರಜಾಪ್ರಭುತ್ವ ಮೌಲ್ಯಗಳ ಬಗ್ಗೆ ಪಾಠ: ಸಿದ್ದರಾಮಯ್ಯ ಆಕ್ರೋಶ
ಸಿದ್ದರಾಮಯ್ಯ
Follow us
| Updated By: ganapathi bhat

Updated on:Sep 24, 2021 | 5:57 PM

ಬೆಂಗಳೂರು: ನಿಯಮಾವಳಿಯಂತೆ ಕಲಾಪ ನಡೆಸದೆ ಸ್ಪೀಕರ್​ರಿಂದ ಪಾಠ ಹೇಳಲಾಗಿದೆ. ವಿಧಾನಮಂಡಲ ಅಧಿವೇಶನವನ್ನು ನಿಯಮಾವಳಿಯಂತೆ ನಡೆಸದೇ, ರಾಜ್ಯ ಬಿಜೆಪಿ ಸರ್ಕಾರ ಅಧಿವೇಶನವನ್ನು ಮೊಟಕುಗೊಳಿಸಿ, ಸರ್ಕಾರ ಲೋಕಸಭಾಧ್ಯಕ್ಷರನ್ನ ಕರೆಸಿ ಪಾಠ ಮಾಡಿಸುತ್ತಿದೆ ಎಂದು ಲೋಕಸಭಾ ಸ್ಪೀಕರ್​ ಓಂ ಬಿರ್ಲಾ ಭಾಷಣಕ್ಕೆ ಟ್ವೀಟ್​ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಜಾಪ್ರಭುತ್ವ, ಸಂಸದೀಯ ಮೌಲ್ಯಗಳ ಬಗ್ಗೆ ಪಾಠ ಮಾಡಿಸುತ್ತಿರುವುದು ಪ್ರಹಸನದಂತೆ ಕಾಣಿಸುತ್ತಿದೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಜನಪ್ರತಿನಿಧಿಗಳ ಪಾಲಿನ ಪವಿತ್ರ ಕ್ಷೇತ್ರ ವಿಧಾನಸಭೆ. ಅಂತಹ ವಿಧಾನಸಭೆಯಲ್ಲಿ ಶಾಸಕರಲ್ಲದವರಿಗೂ ಪ್ರವೇಶ ನೀಡಿ, ಸಾರ್ವಜನಿಕ ವೇದಿಕೆ ಮಾಡಿದ ಅಪಕೀರ್ತಿಗೆ ಸಿಎಂ, ವಿಧಾನಸಭಾಧ್ಯಕ್ಷರು ಅಪಕೀರ್ತಿಗೆ ಭಾಜನರಾಗಿದ್ದಾರೆ. ಇಂದಿನ ಈ ಘಟನೆಯನ್ನು ಇತಿಹಾಸ ಎಂದಿಗೂ ಕ್ಷಮಿಸಲ್ಲ. ಬಿಜೆಪಿ ಪ್ರಜಾಪ್ರಭುತ್ವದ ವಿರೋಧಿ ಎಂದು ಟ್ವೀಟ್​ ಮೂಲಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ಆಪರೇಷನ್ ಕಮಲ ಎಂಬ ಅನೈತಿಕ ರಾಜಕೀಯದ ಮೂಲಕ ಸಂಸದೀಯ ಪ್ರಜಾಪ್ರಭುತ್ವದ ಬುನಾದಿ ಬುಡಮೇಲು ಮಾಡಿದ ರಾಜ್ಯ ಬಿಜೆಪಿ ಸದಸ್ಯರಿಗೆ ಪ್ರಜಾಪ್ರಭುತ್ವ ಮೌಲ್ಯಗಳು ಹಾಗೂ ಸಂಸದೀಯ ಮೌಲ್ಯಗಳ ಕುರಿತು ಚರ್ಚಿಸುವ ನೈತಿಕತೆ ಇಲ್ಲ ಎಂದು ಕಟುವಾಗಿ ಸಿದ್ದರಾಮಯ್ಯ ಟ್ವೀಟ್ ಮಾಡಿ, ವಿರೋಧ ವ್ಯಕ್ತಪಡಿಸಿದ್ದಾರೆ.

ವಿಧಾನಸಭೆಯ ಕಾರ್ಯವಿಧಾನ/ನಡವಳಿಕೆಯ ನಿಯಮದಂತೆ ವರ್ಷದಲ್ಲಿ ಕನಿಷ್ಠ 60 ದಿನ ಅಧಿವೇಶನ ನಡೆಸಬೇಕಾಗುತ್ತದೆ. ಇಲ್ಲಿಯ ವರೆಗೆ ಈ ವರ್ಷ ಅಧಿವೇಶನ ನಡೆದಿರುವುದು 30 ದಿನ ಮಾತ್ರ. ಈ ವೈಫಲ್ಯ ಮುಚ್ಚಿಟ್ಟುಕೊಂಡು ಯಾವ ಮುಖ ಹೊತ್ತು ಲೋಕಸಭಾಧ್ಯಕ್ಷರಿಂದ ಪಾಠ ಕೇಳುತ್ತಿರಿ ಶಾಸಕರೇ? ಎಂದು ಬಿಜೆಪಿ ಶಾಸಕರಿಗೆ ಸಿದ್ದರಾಮಯ್ಯ ಪ್ರಶ್ನೆ ಕೇಳಿದ್ದಾರೆ. #BJPAgainst Democracy ಎಂಬ ಹ್ಯಾಷ್ ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿದ್ದಾರೆ.

ಅಷ್ಟೇ ಅಲ್ಲದೆ, ಬೆಲೆ ಏರಿಕೆ, ಇಂಧನ ದರ, ಜಿಎಸ್​ಟಿ, ರಾಷ್ಟ್ರೀಯ ಶಿಕ್ಷಣ ನೀತಿ, ರೈತರ ಹೋರಾಟದ ಬಗ್ಗೆಯೂ 12 ಟ್ವೀಟ್​ಗಳನ್ನು ಮಾಡಿರುವ ಸಿದ್ದರಾಮಯ್ಯ, ಸದನದ ಒಳಗೆ ನಮ್ಮ ಬಾಯಿ ಮುಚ್ಚಿಸಿರಬಹುದು. ಆದರೆ, ನಾವು ಹೋರಾಟವನ್ನು ಬೀದಿಗೆ ಕೊಂಡೊಯ್ಯುತ್ತೇವೆ. ಅಕ್ಟೋಬರ್ 2 ರಿಂದ ರಾಜ್ಯಾದ್ಯಂತ ಪ್ರತಿಭಟನೆ ಆರಂಭಿಸಿ, ಬೆಲೆ ಇಳಿಕೆ ಆಗುವವರೆಗೂ ಹೋರಾಟ ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Om Birla: ಪ್ರಜಾಪ್ರಭುತ್ವ ವ್ಯವಸ್ಥೆ ಸದೃಢಗೊಳಿಸಲು ಶ್ರಮಿಸಿದ ಕನ್ನಡಿಗರಿಗೆ ನಾನು ಕೃತಜ್ಞ: ವಿಧಾನಮಂಡಲದಲ್ಲಿ ಓಂ ಬಿರ್ಲಾ

ಇದನ್ನೂ ಓದಿ: ಓಂ ಬಿರ್ಲಾರಿಂದ ಜಂಟಿ ಅಧಿವೇಶನ: ಬಿಜೆಪಿಯಿಂದ ಕೆಟ್ಟ ಸಂಪ್ರದಾಯ; ಕಾರ್ಯಕ್ರಮ ಬಹಿಷ್ಕಾರಕ್ಕೆ ಕಾಂಗ್ರೆಸ್ ನಿರ್ಧಾರ

Published On - 5:50 pm, Fri, 24 September 21

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು