AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ತುರ್ತು ಸುದ್ದಿಗೋಷ್ಠಿ ಕರೆದ ಮಾಜಿ ಸಿಎಂ ಸಿದ್ದರಾಮಯ್ಯ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮಾ.03) ಬೆಳಗಾವಿಯಲ್ಲಿ ದಿಢೀರ್ ಸುದ್ದಿಗೋಷ್ಠಿ ಕರೆದಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಇಂದು ತುರ್ತು ಸುದ್ದಿಗೋಷ್ಠಿ ಕರೆದ ಮಾಜಿ ಸಿಎಂ ಸಿದ್ದರಾಮಯ್ಯ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಸಿದ್ದರಾಮಯ್ಯ
ರಮೇಶ್ ಬಿ. ಜವಳಗೇರಾ
|

Updated on: Mar 03, 2023 | 8:03 AM

Share

ಬೆಳಗಾವಿ: ಪ್ರಜಾಧ್ವನಿ ಯಾತ್ರೆ ಕೈಗೊಂಡಿರುವ ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ಉತ್ತರ ಕರ್ನಾಟಕದಲ್ಲಿ ಭರ್ಜರಿ ಮತಬೇಟೆ ಮಾಡುತ್ತಿದ್ದಾರೆ. ಇದರ ಮಧ್ಯೆ ಸಿದ್ದರಾಮಯ್ಯ ಇಂದು ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ. ಇಂದು (ಮಾ.03) ಬೆಳಗ್ಗೆ 11ಕ್ಕೆ ಬೆಳಗಾವಿಯಲ್ಲಿ ಸಿದ್ದರಾಮಯ್ಯ ದಿಢೀರ್ ಸುದ್ದಿಗೋಷ್ಠಿ ಕರೆದಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಈ ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಬಿಜೆಪಿ ಶಾಸಕ ಪುತ್ರನ ಕಚೇರಿಯಲ್ಲಿ ಲೋಕಾಯುಕ್ತ ದಾಳಿ ಅಂತ್ಯ, ಐವರ ಬಂಧನ, ಕಾರ್ಯಚರಣೆ ವೇಳೆ ಏನೇನು ಸಿಕ್ತು? ಇಲ್ಲಿದೆ ಮಾಹಿತಿ

ಬಿಜೆಪಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಪುತ್ರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ​ ಬಲೆಗೆ ಬಿದ್ದಿರುವ ಬಗ್ಗೆ ಪ್ರಸ್ತಾಪಿಸುವ ಸಾಧ್ಯತೆಗಳಿವೆ. ಈಗಾಗಲೇ 40 ಪರ್ಸೆಂಟ್ ಆರೋಪಗಳನ್ನು ಮಾಡಿದ್ದ ಕಾಂಗ್ರೆಸ್, ಇದಕ್ಕೆ ಸಾಕ್ಷಿ ಎಂಬಂತೆ ಶಾಸಕರ ಪುತ್ರ ಲಂಚ ಸ್ವೀಕರಿಸುತ್ತಿರುವಾಗ ಲೋಕಾಯುಕ್ತಗೆ ಸಿಕ್ಕಿಬಿದ್ದಿದ್ದು, ಇದನ್ನೇ ಕಾಂಗ್ರೆಸ್​ ಮತ್ತೊಂದು ಚುನಾವಣಾ ಅಸ್ತ್ರವಾಗಿ ಬಳಸಿಕೊಳ್ಳವ ಪ್ಲಾನ್ ಮಾಡಿದೆ. ಸಿದ್ದರಾಮಯ್ಯ ಸುದ್ದಿಗೋಷ್ಠಿ ಕರೆದಿದ್ದು ಯಾಕೆ..? ಸುದ್ದಿಗೋಷ್ಠಿಯಲ್ಲಿ ಏನ್​ ಬಾಂಬ್​ ಸಿಡಿಸುತ್ತಾರೆ? ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ.

ಡಿಕೆ ಶಿವಕುಮಾರ್ ಹೇಳಿದ್ದೇನು?

ಇನ್ನು ಈ ಬಗ್ಗೆ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಇಷ್ಟು ದಿನ ಭ್ರಷ್ಟಾಚಾರಕ್ಕೆ ಸಾಕ್ಷಿ ಕೇಳುತ್ತಿದ್ದರು. ಈಗ ಲೋಕಾಯುಕ್ತದವರೇ ಕೊಟ್ಟಿದ್ದಾರೆ. ಈಗ ಯಾರು ರಾಜೀನಾಮೆ ಕೊಡ್ತಾರೆ? ಸಿಎಂ ಕೊಡ್ತಾರಾ? ಸಚಿವರು ಕೊಡ್ತಾರಾ? ನಿಗಮ-ಮಂಡಲಿ ಅಧ್ಯಕ್ಷರು ಕೊಡ್ತಾರಾ? ಎಂದು ಪ್ರಶ್ನಿಸಿದರು.

ನಮ್ಮ ಸಿಎಂ ಬೊಮ್ಮಾಯಿ ಎಲ್ಲದಕ್ಕೂ ಸಾಕ್ಷಿ ಕೇಳುತ್ತಿದ್ದರು. ಕೆಂಪಣ್ಣ 40%, ಮಠಾಧೀಶರು 30%, ವಿಶ್ವನಾಥ್ 20% ಅಂದರು. ಹಿಂದೆ ನಾನು, ಸಿದ್ದರಾಮಯ್ಯ ವಿಧಾನಸೌಧದಲ್ಲಿ ಧರಣಿ ಮಾಡಿದಾಗ ಗೋಡೆ ಬಡಿದೆವು. ಯಾವ ಗೋಡೆ ಕಂಬ ಮುಟ್ಟಿದರೂ ಕಾಸು ಕಾಸು ಅಂತ ಕೇಳಿಸುತ್ತಿತ್ತು. ಎಲ್ಲಿ ನೋಡಿದರೂ ಲಂಚ ಲಂಚ ಎನ್ನುತ್ತಿವೆ. ಮುಖ್ಯಮಂತ್ರಿಗಳು ರಾಜೀನಾಮೆ ಕೊಟ್ಟರೆ ಆ ಸ್ಥಾನಕ್ಕೆ ಗೌರವ. ಲೋಕಾಯುಕ್ತ ಅಧಿಕಾರಿಗಳೇ ಸಾಕ್ಷಿ ಕೊಟ್ಟಿದ್ದಾರೆ. 10, 20 ಲಕ್ಷಕ್ಕೆಲ್ಲಾ ಇಡಿ, ಐಟಿಯವರು ಬರುತ್ತಾರೆ. ಸಿಎಂ‌ ಕೂಡಲೇ ರಾಜೀನಾಮೆ‌ ಕೊಡಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್​​ನಿಂದ ಚನ್ನಗಿರಿಯಲ್ಲಿ ಪ್ರತಿಭಟನೆ

ಬಿಜೆಪಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಅವರ ಪುತ್ರನ ಮೇಲೆ ಲೋಕಾಯುಕ್ತ ದಾಳಿಯನ್ನೇ ಅಸ್ತ್ರವಾಗಿಸಲು ಕಾಂಗ್ರೆಸ್ ಮುಂದಾಗಿದೆ. ಸಿಎಂ 40 % ಕಮಿಷನ್ ಆರೋಪಕ್ಕೆ ಸಾಕ್ಷಿ ಕೇಳುತ್ತಿದ್ದರು. ಈಗ ಲೋಕಾಯುಕ್ತ ಅಧಿಕಾರಿಗಳೇ ಸಾಕ್ಷಿ ನೀಡಿದ್ದಾರೆ. ಶಾಸಕನ ಪುತ್ರನ ಬಳಿ ಸಿಕ್ಕ ನೋಟಿನ ಕಂತೆಗಳೇ ಸಾಕ್ಷಿ. ಇದಕ್ಕಿಂತ ಸಾಕ್ಷಿ ಬೇಕಾ ಎಂದು ಚನ್ನಗಿರಿ ಕಾಂಗ್ರೆಸ್​ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ಜಿಲ್ಲೆಯ ಚನ್ನಗಿರಿಯ ಕಾಂಗ್ರೆಸ್ ‌ಮುಖಂಡರು ಇಂದು 11 ಗಂಟೆಗೆ ತಾಲ್ಲೂಕು ಕಾಂಗ್ರೆಸ್​‌ನಿಂದ ಪ್ರತಿಭಟನೆ ನಡೆಯಲಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ