AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ತುರ್ತು ಸುದ್ದಿಗೋಷ್ಠಿ ಕರೆದ ಮಾಜಿ ಸಿಎಂ ಸಿದ್ದರಾಮಯ್ಯ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮಾ.03) ಬೆಳಗಾವಿಯಲ್ಲಿ ದಿಢೀರ್ ಸುದ್ದಿಗೋಷ್ಠಿ ಕರೆದಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಇಂದು ತುರ್ತು ಸುದ್ದಿಗೋಷ್ಠಿ ಕರೆದ ಮಾಜಿ ಸಿಎಂ ಸಿದ್ದರಾಮಯ್ಯ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಸಿದ್ದರಾಮಯ್ಯ
ರಮೇಶ್ ಬಿ. ಜವಳಗೇರಾ
|

Updated on: Mar 03, 2023 | 8:03 AM

Share

ಬೆಳಗಾವಿ: ಪ್ರಜಾಧ್ವನಿ ಯಾತ್ರೆ ಕೈಗೊಂಡಿರುವ ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ಉತ್ತರ ಕರ್ನಾಟಕದಲ್ಲಿ ಭರ್ಜರಿ ಮತಬೇಟೆ ಮಾಡುತ್ತಿದ್ದಾರೆ. ಇದರ ಮಧ್ಯೆ ಸಿದ್ದರಾಮಯ್ಯ ಇಂದು ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ. ಇಂದು (ಮಾ.03) ಬೆಳಗ್ಗೆ 11ಕ್ಕೆ ಬೆಳಗಾವಿಯಲ್ಲಿ ಸಿದ್ದರಾಮಯ್ಯ ದಿಢೀರ್ ಸುದ್ದಿಗೋಷ್ಠಿ ಕರೆದಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಈ ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಬಿಜೆಪಿ ಶಾಸಕ ಪುತ್ರನ ಕಚೇರಿಯಲ್ಲಿ ಲೋಕಾಯುಕ್ತ ದಾಳಿ ಅಂತ್ಯ, ಐವರ ಬಂಧನ, ಕಾರ್ಯಚರಣೆ ವೇಳೆ ಏನೇನು ಸಿಕ್ತು? ಇಲ್ಲಿದೆ ಮಾಹಿತಿ

ಬಿಜೆಪಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಪುತ್ರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ​ ಬಲೆಗೆ ಬಿದ್ದಿರುವ ಬಗ್ಗೆ ಪ್ರಸ್ತಾಪಿಸುವ ಸಾಧ್ಯತೆಗಳಿವೆ. ಈಗಾಗಲೇ 40 ಪರ್ಸೆಂಟ್ ಆರೋಪಗಳನ್ನು ಮಾಡಿದ್ದ ಕಾಂಗ್ರೆಸ್, ಇದಕ್ಕೆ ಸಾಕ್ಷಿ ಎಂಬಂತೆ ಶಾಸಕರ ಪುತ್ರ ಲಂಚ ಸ್ವೀಕರಿಸುತ್ತಿರುವಾಗ ಲೋಕಾಯುಕ್ತಗೆ ಸಿಕ್ಕಿಬಿದ್ದಿದ್ದು, ಇದನ್ನೇ ಕಾಂಗ್ರೆಸ್​ ಮತ್ತೊಂದು ಚುನಾವಣಾ ಅಸ್ತ್ರವಾಗಿ ಬಳಸಿಕೊಳ್ಳವ ಪ್ಲಾನ್ ಮಾಡಿದೆ. ಸಿದ್ದರಾಮಯ್ಯ ಸುದ್ದಿಗೋಷ್ಠಿ ಕರೆದಿದ್ದು ಯಾಕೆ..? ಸುದ್ದಿಗೋಷ್ಠಿಯಲ್ಲಿ ಏನ್​ ಬಾಂಬ್​ ಸಿಡಿಸುತ್ತಾರೆ? ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ.

ಡಿಕೆ ಶಿವಕುಮಾರ್ ಹೇಳಿದ್ದೇನು?

ಇನ್ನು ಈ ಬಗ್ಗೆ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಇಷ್ಟು ದಿನ ಭ್ರಷ್ಟಾಚಾರಕ್ಕೆ ಸಾಕ್ಷಿ ಕೇಳುತ್ತಿದ್ದರು. ಈಗ ಲೋಕಾಯುಕ್ತದವರೇ ಕೊಟ್ಟಿದ್ದಾರೆ. ಈಗ ಯಾರು ರಾಜೀನಾಮೆ ಕೊಡ್ತಾರೆ? ಸಿಎಂ ಕೊಡ್ತಾರಾ? ಸಚಿವರು ಕೊಡ್ತಾರಾ? ನಿಗಮ-ಮಂಡಲಿ ಅಧ್ಯಕ್ಷರು ಕೊಡ್ತಾರಾ? ಎಂದು ಪ್ರಶ್ನಿಸಿದರು.

ನಮ್ಮ ಸಿಎಂ ಬೊಮ್ಮಾಯಿ ಎಲ್ಲದಕ್ಕೂ ಸಾಕ್ಷಿ ಕೇಳುತ್ತಿದ್ದರು. ಕೆಂಪಣ್ಣ 40%, ಮಠಾಧೀಶರು 30%, ವಿಶ್ವನಾಥ್ 20% ಅಂದರು. ಹಿಂದೆ ನಾನು, ಸಿದ್ದರಾಮಯ್ಯ ವಿಧಾನಸೌಧದಲ್ಲಿ ಧರಣಿ ಮಾಡಿದಾಗ ಗೋಡೆ ಬಡಿದೆವು. ಯಾವ ಗೋಡೆ ಕಂಬ ಮುಟ್ಟಿದರೂ ಕಾಸು ಕಾಸು ಅಂತ ಕೇಳಿಸುತ್ತಿತ್ತು. ಎಲ್ಲಿ ನೋಡಿದರೂ ಲಂಚ ಲಂಚ ಎನ್ನುತ್ತಿವೆ. ಮುಖ್ಯಮಂತ್ರಿಗಳು ರಾಜೀನಾಮೆ ಕೊಟ್ಟರೆ ಆ ಸ್ಥಾನಕ್ಕೆ ಗೌರವ. ಲೋಕಾಯುಕ್ತ ಅಧಿಕಾರಿಗಳೇ ಸಾಕ್ಷಿ ಕೊಟ್ಟಿದ್ದಾರೆ. 10, 20 ಲಕ್ಷಕ್ಕೆಲ್ಲಾ ಇಡಿ, ಐಟಿಯವರು ಬರುತ್ತಾರೆ. ಸಿಎಂ‌ ಕೂಡಲೇ ರಾಜೀನಾಮೆ‌ ಕೊಡಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್​​ನಿಂದ ಚನ್ನಗಿರಿಯಲ್ಲಿ ಪ್ರತಿಭಟನೆ

ಬಿಜೆಪಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಅವರ ಪುತ್ರನ ಮೇಲೆ ಲೋಕಾಯುಕ್ತ ದಾಳಿಯನ್ನೇ ಅಸ್ತ್ರವಾಗಿಸಲು ಕಾಂಗ್ರೆಸ್ ಮುಂದಾಗಿದೆ. ಸಿಎಂ 40 % ಕಮಿಷನ್ ಆರೋಪಕ್ಕೆ ಸಾಕ್ಷಿ ಕೇಳುತ್ತಿದ್ದರು. ಈಗ ಲೋಕಾಯುಕ್ತ ಅಧಿಕಾರಿಗಳೇ ಸಾಕ್ಷಿ ನೀಡಿದ್ದಾರೆ. ಶಾಸಕನ ಪುತ್ರನ ಬಳಿ ಸಿಕ್ಕ ನೋಟಿನ ಕಂತೆಗಳೇ ಸಾಕ್ಷಿ. ಇದಕ್ಕಿಂತ ಸಾಕ್ಷಿ ಬೇಕಾ ಎಂದು ಚನ್ನಗಿರಿ ಕಾಂಗ್ರೆಸ್​ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ಜಿಲ್ಲೆಯ ಚನ್ನಗಿರಿಯ ಕಾಂಗ್ರೆಸ್ ‌ಮುಖಂಡರು ಇಂದು 11 ಗಂಟೆಗೆ ತಾಲ್ಲೂಕು ಕಾಂಗ್ರೆಸ್​‌ನಿಂದ ಪ್ರತಿಭಟನೆ ನಡೆಯಲಿದೆ.

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ