AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ವಿವಾದಿತ ಹೇಳಿಕೆ; ಪ್ರಧಾನಿ ಮೋದಿಯನ್ನು ಮೊಹಮ್ಮದ್ ಅಲಿ ಜಿನ್ನಾ ಜತೆ ಹೋಲಿಸಿದ ವೀರಪ್ಪ ಮೊಯ್ಲಿ

ಬಿಜೆಪಿ ಎಂಬದು ನರೇಂದ್ರ ಮೋದಿ ಕೃಪಾಪೋಷಿತ ನಾಟಕ ಮಂಡಳಿ. ಬಿಜೆಪಿಯವರಿಗೆ ಸ್ವಾತಂತ್ರ್ಯಕ್ಕಾಗಿ ಮಾಡಿದ ತ್ಯಾಗ, ಹೋರಾಟ, ಬಲಿದಾನದ ರುಚಿ ಗೊತ್ತಿಲ್ಲ. ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಇದೆ. ಜಮ್ಮು ಕಾಶ್ಮಿರದಿಂದ ಕನ್ಯಾಕುಮಾರಿ ವರೆಗೂ ಅಘೋಷಿತ ತುರ್ತುಪರಿಸ್ಥಿತಿ ಇದೆ. ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ಅದನ್ನು ಕಿತ್ತು ಹಾಕಬೇಕು ಎಂದು ಮೊಯ್ಲಿ ಜನರಿಗೆ ಕರೆ ನೀಡಿದರು.

ಮತ್ತೊಂದು ವಿವಾದಿತ ಹೇಳಿಕೆ; ಪ್ರಧಾನಿ ಮೋದಿಯನ್ನು ಮೊಹಮ್ಮದ್ ಅಲಿ ಜಿನ್ನಾ ಜತೆ ಹೋಲಿಸಿದ ವೀರಪ್ಪ ಮೊಯ್ಲಿ
ವೀರಪ್ಪ ಮೊಯ್ಲಿ & ಪ್ರಧಾನಿ ಮೋದಿ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Sep 07, 2023 | 8:24 PM

Share

ಚಿಕ್ಕಬಳ್ಳಾಪುರ, ಸೆಪ್ಟೆಂಬರ್ 7: ಸನಾತನ ಧರ್ಮದ ಬಗ್ಗೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ನೀಡಿದ ಹೇಳಿಕೆಯ ನಂತರ ದೇಶದಾದ್ಯಂತ ವಿವಾದಿತ ಹೇಳಿಕೆಗಳನ್ನು ನೀಡುವುದು ಹೆಚ್ಚಾಗಿದೆ. ಈ ಮಧ್ಯೆ, ದೇಶದ ಹೆಸರನ್ನು ‘ಭಾರತ್’ ಎಂದು ಮರುನಾಮಕರಣ ಮಾಡಲಾಗುತ್ತದೆ ಎಂಬ ವರದಿಗಳ ವಿಚಾರವಾಗಿಯೂ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳ ನಾಯಕರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಇದೀಗ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ವಿರುದ್ಧ ನೇರ ವೈಯಕ್ತಿಕ ವಾಗ್ದಾಳಿ ಮಟ್ಟಕ್ಕೆ ಪ್ರತಿಪಕ್ಷಗಳ ವಿರೋಧ ಮುಂದುವರಿದಿದೆ. ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಿಎಂ ವೀರಪ್ಪ ಮೊಯ್ಲಿ (Veerappa Moily) ಅವರು ಇನ್ನೂ ಒಂದು ಹೆಜ್ಜೆ ಮುಂದಿಟ್ಟು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೊಹಮ್ಮದ್ ಅಲಿ ಜಿನ್ನಾ (Muhammad Ali Jinnah) ಜತೆ ಹೋಲಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ವೀರಪ್ಪ ಮೊಯ್ಲಿ, ಇಂಡಿಯಾ ಪದಕ್ಕೆ ಮೊಹಮ್ಮದ್ ಅಲಿ ಜಿನ್ನಾ ವಿರೋಧ ವ್ಯಕ್ತಪಡಿಸಿದ್ದರು. ಪಾಕಿಸ್ತಾನದ ಮೊಹಮ್ಮದ್ ಅಲಿ ಜಿನ್ನಾ ಪಾತ್ರವನ್ನು ಈಗ ನರೇಂದ್ರ ಮೋದಿ ನಿರ್ವಹಿಸುತ್ತಿದ್ದಾರೆ. ಇಂಡಿಯಾ ಎಂದರೆ ಅದಕ್ಕೆ ಪಾಕಿಸ್ತಾನವೂ ಸೇರುತ್ತದೆ ಎಂದು ಜಿನ್ನಾ ವಿರೋಧ ವ್ಯಕ್ತಪಡಿಸಿದ್ದರು ಎಂದು ಹೇಳಿದ್ದಾರೆ.

ಬಿಜೆಪಿ ಎಂಬದು ನರೇಂದ್ರ ಮೋದಿ ಕೃಪಾಪೋಷಿತ ನಾಟಕ ಮಂಡಳಿ. ಬಿಜೆಪಿಯವರಿಗೆ ಸ್ವಾತಂತ್ರ್ಯಕ್ಕಾಗಿ ಮಾಡಿದ ತ್ಯಾಗ, ಹೋರಾಟ, ಬಲಿದಾನದ ರುಚಿ ಗೊತ್ತಿಲ್ಲ. ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಇದೆ. ಜಮ್ಮು ಕಾಶ್ಮಿರದಿಂದ ಕನ್ಯಾಕುಮಾರಿ ವರೆಗೂ ಅಘೋಷಿತ ತುರ್ತುಪರಿಸ್ಥಿತಿ ಇದೆ. ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ಅದನ್ನು ಕಿತ್ತು ಹಾಕಬೇಕು ಎಂದು ಮೊಯ್ಲಿ ಜನರಿಗೆ ಕರೆ ನೀಡಿದರು.

ಇದನ್ನೂ ಓದಿ: ಜೆಡಿಎಸ್ ವರಿಷ್ಠ ದೇವೇಗೌಡರದು ಮಂಗನ್ಯಾಯ; ವೀರಪ್ಪ ಮೊಯ್ಲಿ ಟೀಕೆ

ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಮೊಯ್ಲಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭಗವಾನ್ ಶ್ರೀರಾಮಚಂದ್ರನಿಗೆ ಮೊಯ್ಲಿ ಹೋಲಿಸಿದರು. ಶ್ರೀರಾಮಚಂದ್ರ ಅಯೋದ್ಯೆಯಿಂದ ಶ್ರೀಲಂಕಾ ವರೆಗೂ ಪಾದಯಾತ್ರೆ ಮಾಡಿದ್ದರು. ರಾಹುಲ್ ಗಾಂಧಿ ದೇಶದಲ್ಲಿ ಪ್ರಥಮ ಭಾರಿಗೆ ಜಮ್ಮುಕಾಶ್ಮೀರದಿಂದ ಕನ್ಯಕುಮಾರಿವರೆಗೂ ಪಾದಯಾತ್ರೆ ಮಾಡಿದ್ದಾರೆ ಎಂದು ಮೊಯ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಸನಾತನ ಧರ್ಮವನ್ನು ಎಚ್‌ಐವಿ ಮತ್ತು ಕುಷ್ಠರೋಗಕ್ಕೆ ಹೋಲಿಸಿದ ಡಿಎಂಕೆ ನಾಯಕ ಎ ರಾಜಾ

ನರೇಂದ್ರ ಮೋದಿ ಅವರು ದೇಶವನ್ನು ಒಡೆದು ಹಾಕುತ್ತಿದ್ದಾರೆ. ಜಾತಿ ಮತ ಪಂಥಗಳ ಆಧಾರದಲ್ಲಿ ಒಡೆಯುತ್ತಿದ್ದಾರೆ. ಪ್ರದಾನಿ ನರೇಂದ್ರ ಮೋದಿ ಅವರನ್ನು ಕಟ್ಟಿ ಹಾಕಲು ಇಂಡಿಯಾ ಒಕ್ಕೂಟ ರಚನೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಸಿಂಧೂ, ಹಿಂದೂ ಅರೇಬಿಕ್ ಪದಗಳು; ಮೊಯ್ಲಿ

ಸಿಂಧೂ, ಹಿಂದೂ ಅರೇಬಿಕ್ ಪದಗಳು. ಇಂಡಿಯಾ ಒಕ್ಕೂಟವನ್ನು ಸಹಿಸಿಕೊಳ್ಳದ ಮೋದಿ ಇಂಡಿಯಾ ಪದವನ್ನೆ ಕಿತ್ತು ಹಾಕುತ್ತಿದ್ದಾರೆ. ಇಂಡಿಯಾ ಒಕ್ಕೂಟ ಕಂಡು ನರೇಂದ್ರ ಮೋದಿಗೆ ನಡುಕ ಬಂದಿದೆ. ಬಿಜೆಪಿಗೆ ಇತಿಹಾಸ ಗೊತ್ತಿಲ್ಲ ಹೋರಾಟ ಗೊತ್ತಿಲ್ಲ, ಬಿಜೆಪಿ ದೇಶದ ಚರೀತ್ರೆ ಗೊತ್ತಿಲ್ಲ. ಭಾರತ ಪದಕ್ಕೆ ಕಾಂಗ್ರೆಸ್ ವಿರೋಧವಿಲ್ಲ. ಆದ್ರೆ ಭರತ ಮಹಾರಾಜ ಇಡೀ ದೇಶವನ್ನು ಆಳಿಲ್ಲ ಎಂದು ಅವರು ಹೇಳಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:54 pm, Thu, 7 September 23

Follow Us
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ