AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್ ವರಿಷ್ಠ ದೇವೇಗೌಡರದು ಮಂಗನ್ಯಾಯ; ವೀರಪ್ಪ ಮೊಯ್ಲಿ ಟೀಕೆ

ರಾಜ್ಯ ಬಿಜೆಪಿಗೆ ಈಗ ಜೆಡಿಎಸ್​ನ ಹೆಚ್​​ಡಿ ಕುಮಾರಸ್ವಾಮಿ ವಕ್ತಾರರಾಗಿದ್ದಾರೆ ಎಂದು ವ್ಯಂಗ್ಯವಾಡಿದ ಮೊಯ್ಲಿ, ಬಿಜೆಪಿಗೆ ಇದುವರೆಗೂ ಪ್ರತಿಪಕ್ಷ ನಾಯಕನ ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಇರುವ ಬಿಜೆಪಿ ಅಧ್ಯಕ್ಷ ಅತಂತ್ರರಾಗಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಜೆಡಿಎಸ್ ವರಿಷ್ಠ ದೇವೇಗೌಡರದು ಮಂಗನ್ಯಾಯ; ವೀರಪ್ಪ ಮೊಯ್ಲಿ ಟೀಕೆ
ವೀರಪ್ಪ ಮೊಯ್ಲಿ & ಹೆಚ್​ಡಿ ದೇವೇಗೌಡ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Sep 07, 2023 | 8:23 PM

Share

ಚಿಕ್ಕಬಳ್ಳಾಪುರ, ಸೆಪ್ಟೆಂಬರ್ 7: ಕರ್ನಾಟಕದಲ್ಲಿ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡರದು (HD Deve Gowda) ಮಂಗನ್ಯಾಯವಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಿಎಂ ವೀರಪ್ಪ ಮೊಯ್ಲಿ (Veerappa Moily) ಟೀಕಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ ಅವರು (ಜೆಡಿಎಸ್​ನವರು) ಗೆಲ್ಲಲಿಲ್ಲ. ನಮ್ಮನ್ನೂ ಗೆಲ್ಲುವುದಕ್ಕೆ ಬಿಡಲಿಲ್ಲ. ದೇವೇಗೌಡರು ಈಗ ಇಂಡಿಯಾ ಒಕ್ಕೂಟದ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ. ಜೆಡಿಎಸ್ ವರತು ಪಡಿಸಿ ದೇಶದಲ್ಲಿ ಎಲ್ಲಾ ಪಕ್ಷ, ವಿಪಕ್ಷಗಳು ಒಗ್ಗಟ್ಟಾಗಿವೆ ಎಂದು ಹೇಳಿದರು.

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಮನಸ್ಸು ಪ್ರಧಾನಿ ನರೇಂದ್ರ ಮೋದಿ ಕಡೆಗೆ ಇದೆ. ರಾಜ್ಯದಲ್ಲಿ ಜೆಡಿಎಸ್​​ಗೆ ಬಹುಮತ ಸಿಗುವುದಿಲ್ಲ. ಹೀಗಾಗಿ ಬಿಜೆಪಿ ಕಡೆ ವಾಲಿದ್ದಾರೆ ಎಂದು ಮೊಯ್ಲಿ ಟೀಕಿಸಿದರು.

ರಾಜ್ಯ ಬಿಜೆಪಿಗೆ ಈಗ ಜೆಡಿಎಸ್​ನ ಹೆಚ್​​ಡಿ ಕುಮಾರಸ್ವಾಮಿ ವಕ್ತಾರರಾಗಿದ್ದಾರೆ ಎಂದು ವ್ಯಂಗ್ಯವಾಡಿದ ಮೊಯ್ಲಿ, ಬಿಜೆಪಿಗೆ ಇದುವರೆಗೂ ಪ್ರತಿಪಕ್ಷ ನಾಯಕನ ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಇರುವ ಬಿಜೆಪಿ ಅಧ್ಯಕ್ಷ ಅತಂತ್ರರಾಗಿದ್ದಾರೆ. ಈಗ ಅಮೃತ ಉಂಡವನೇ ಬದುಕುವುದಿಲ್ಲ. ಇನ್ನು ವಿಷ ಉಂಡವನು ಬದುಕುತ್ತಾನೆಯೇ? ಬಿಜೆಪಿಯವರು ವಿಷ ಉಣ್ಣುತ್ತಿದ್ದಾರೆ. ದೇಶಶದಲ್ಲಿ ಜನರನ್ನು ಹಕ್ಕುಗಳನ್ನು ಕಸಿದು ಅಧಿಕಾರ ನಡೆಸುತ್ತಿದ್ದಾರೆ. ಎದುರಾಳಿಗಳ ಮೇಲೆ ನರೇಂದ್ರ ಮೋದಿ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: ಮತ್ತೊಂದು ವಿವಾದಿತ ಹೇಳಿಕೆ; ಪ್ರಧಾನಿ ಮೋದಿಯನ್ನು ಮೊಹಮ್ಮದ್ ಅಲಿ ಜಿನ್ನಾ ಜತೆ ಹೋಲಿಸಿದ ವೀರಪ್ಪ ಮೊಯ್ಲಿ

ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಇದೆ. ಜಮ್ಮು ಕಾಶ್ಮಿರದಿಂದ ಕನ್ಯಾಕುಮಾರಿ ವರೆಗೂ ಅಘೋಷಿತ ಎಮರ್ಜೆನ್ಸಿ ಇದೆ. ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ಅದನ್ನು ಕಿತ್ತು ಹಾಕಬೇಕು ಎಂದು ಮೊಯ್ಲಿ ಕರೆ ನೀಡಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ