Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್ ವರಿಷ್ಠ ದೇವೇಗೌಡರದು ಮಂಗನ್ಯಾಯ; ವೀರಪ್ಪ ಮೊಯ್ಲಿ ಟೀಕೆ

ರಾಜ್ಯ ಬಿಜೆಪಿಗೆ ಈಗ ಜೆಡಿಎಸ್​ನ ಹೆಚ್​​ಡಿ ಕುಮಾರಸ್ವಾಮಿ ವಕ್ತಾರರಾಗಿದ್ದಾರೆ ಎಂದು ವ್ಯಂಗ್ಯವಾಡಿದ ಮೊಯ್ಲಿ, ಬಿಜೆಪಿಗೆ ಇದುವರೆಗೂ ಪ್ರತಿಪಕ್ಷ ನಾಯಕನ ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಇರುವ ಬಿಜೆಪಿ ಅಧ್ಯಕ್ಷ ಅತಂತ್ರರಾಗಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಜೆಡಿಎಸ್ ವರಿಷ್ಠ ದೇವೇಗೌಡರದು ಮಂಗನ್ಯಾಯ; ವೀರಪ್ಪ ಮೊಯ್ಲಿ ಟೀಕೆ
ವೀರಪ್ಪ ಮೊಯ್ಲಿ & ಹೆಚ್​ಡಿ ದೇವೇಗೌಡ
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: Ganapathi Sharma

Updated on: Sep 07, 2023 | 8:23 PM

ಚಿಕ್ಕಬಳ್ಳಾಪುರ, ಸೆಪ್ಟೆಂಬರ್ 7: ಕರ್ನಾಟಕದಲ್ಲಿ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡರದು (HD Deve Gowda) ಮಂಗನ್ಯಾಯವಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಿಎಂ ವೀರಪ್ಪ ಮೊಯ್ಲಿ (Veerappa Moily) ಟೀಕಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ ಅವರು (ಜೆಡಿಎಸ್​ನವರು) ಗೆಲ್ಲಲಿಲ್ಲ. ನಮ್ಮನ್ನೂ ಗೆಲ್ಲುವುದಕ್ಕೆ ಬಿಡಲಿಲ್ಲ. ದೇವೇಗೌಡರು ಈಗ ಇಂಡಿಯಾ ಒಕ್ಕೂಟದ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ. ಜೆಡಿಎಸ್ ವರತು ಪಡಿಸಿ ದೇಶದಲ್ಲಿ ಎಲ್ಲಾ ಪಕ್ಷ, ವಿಪಕ್ಷಗಳು ಒಗ್ಗಟ್ಟಾಗಿವೆ ಎಂದು ಹೇಳಿದರು.

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಮನಸ್ಸು ಪ್ರಧಾನಿ ನರೇಂದ್ರ ಮೋದಿ ಕಡೆಗೆ ಇದೆ. ರಾಜ್ಯದಲ್ಲಿ ಜೆಡಿಎಸ್​​ಗೆ ಬಹುಮತ ಸಿಗುವುದಿಲ್ಲ. ಹೀಗಾಗಿ ಬಿಜೆಪಿ ಕಡೆ ವಾಲಿದ್ದಾರೆ ಎಂದು ಮೊಯ್ಲಿ ಟೀಕಿಸಿದರು.

ರಾಜ್ಯ ಬಿಜೆಪಿಗೆ ಈಗ ಜೆಡಿಎಸ್​ನ ಹೆಚ್​​ಡಿ ಕುಮಾರಸ್ವಾಮಿ ವಕ್ತಾರರಾಗಿದ್ದಾರೆ ಎಂದು ವ್ಯಂಗ್ಯವಾಡಿದ ಮೊಯ್ಲಿ, ಬಿಜೆಪಿಗೆ ಇದುವರೆಗೂ ಪ್ರತಿಪಕ್ಷ ನಾಯಕನ ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಇರುವ ಬಿಜೆಪಿ ಅಧ್ಯಕ್ಷ ಅತಂತ್ರರಾಗಿದ್ದಾರೆ. ಈಗ ಅಮೃತ ಉಂಡವನೇ ಬದುಕುವುದಿಲ್ಲ. ಇನ್ನು ವಿಷ ಉಂಡವನು ಬದುಕುತ್ತಾನೆಯೇ? ಬಿಜೆಪಿಯವರು ವಿಷ ಉಣ್ಣುತ್ತಿದ್ದಾರೆ. ದೇಶಶದಲ್ಲಿ ಜನರನ್ನು ಹಕ್ಕುಗಳನ್ನು ಕಸಿದು ಅಧಿಕಾರ ನಡೆಸುತ್ತಿದ್ದಾರೆ. ಎದುರಾಳಿಗಳ ಮೇಲೆ ನರೇಂದ್ರ ಮೋದಿ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: ಮತ್ತೊಂದು ವಿವಾದಿತ ಹೇಳಿಕೆ; ಪ್ರಧಾನಿ ಮೋದಿಯನ್ನು ಮೊಹಮ್ಮದ್ ಅಲಿ ಜಿನ್ನಾ ಜತೆ ಹೋಲಿಸಿದ ವೀರಪ್ಪ ಮೊಯ್ಲಿ

ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಇದೆ. ಜಮ್ಮು ಕಾಶ್ಮಿರದಿಂದ ಕನ್ಯಾಕುಮಾರಿ ವರೆಗೂ ಅಘೋಷಿತ ಎಮರ್ಜೆನ್ಸಿ ಇದೆ. ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ಅದನ್ನು ಕಿತ್ತು ಹಾಕಬೇಕು ಎಂದು ಮೊಯ್ಲಿ ಕರೆ ನೀಡಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ