AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್ ವರಿಷ್ಠ ದೇವೇಗೌಡರದು ಮಂಗನ್ಯಾಯ; ವೀರಪ್ಪ ಮೊಯ್ಲಿ ಟೀಕೆ

ರಾಜ್ಯ ಬಿಜೆಪಿಗೆ ಈಗ ಜೆಡಿಎಸ್​ನ ಹೆಚ್​​ಡಿ ಕುಮಾರಸ್ವಾಮಿ ವಕ್ತಾರರಾಗಿದ್ದಾರೆ ಎಂದು ವ್ಯಂಗ್ಯವಾಡಿದ ಮೊಯ್ಲಿ, ಬಿಜೆಪಿಗೆ ಇದುವರೆಗೂ ಪ್ರತಿಪಕ್ಷ ನಾಯಕನ ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಇರುವ ಬಿಜೆಪಿ ಅಧ್ಯಕ್ಷ ಅತಂತ್ರರಾಗಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಜೆಡಿಎಸ್ ವರಿಷ್ಠ ದೇವೇಗೌಡರದು ಮಂಗನ್ಯಾಯ; ವೀರಪ್ಪ ಮೊಯ್ಲಿ ಟೀಕೆ
ವೀರಪ್ಪ ಮೊಯ್ಲಿ & ಹೆಚ್​ಡಿ ದೇವೇಗೌಡ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Sep 07, 2023 | 8:23 PM

Share

ಚಿಕ್ಕಬಳ್ಳಾಪುರ, ಸೆಪ್ಟೆಂಬರ್ 7: ಕರ್ನಾಟಕದಲ್ಲಿ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡರದು (HD Deve Gowda) ಮಂಗನ್ಯಾಯವಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಿಎಂ ವೀರಪ್ಪ ಮೊಯ್ಲಿ (Veerappa Moily) ಟೀಕಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ ಅವರು (ಜೆಡಿಎಸ್​ನವರು) ಗೆಲ್ಲಲಿಲ್ಲ. ನಮ್ಮನ್ನೂ ಗೆಲ್ಲುವುದಕ್ಕೆ ಬಿಡಲಿಲ್ಲ. ದೇವೇಗೌಡರು ಈಗ ಇಂಡಿಯಾ ಒಕ್ಕೂಟದ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ. ಜೆಡಿಎಸ್ ವರತು ಪಡಿಸಿ ದೇಶದಲ್ಲಿ ಎಲ್ಲಾ ಪಕ್ಷ, ವಿಪಕ್ಷಗಳು ಒಗ್ಗಟ್ಟಾಗಿವೆ ಎಂದು ಹೇಳಿದರು.

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಮನಸ್ಸು ಪ್ರಧಾನಿ ನರೇಂದ್ರ ಮೋದಿ ಕಡೆಗೆ ಇದೆ. ರಾಜ್ಯದಲ್ಲಿ ಜೆಡಿಎಸ್​​ಗೆ ಬಹುಮತ ಸಿಗುವುದಿಲ್ಲ. ಹೀಗಾಗಿ ಬಿಜೆಪಿ ಕಡೆ ವಾಲಿದ್ದಾರೆ ಎಂದು ಮೊಯ್ಲಿ ಟೀಕಿಸಿದರು.

ರಾಜ್ಯ ಬಿಜೆಪಿಗೆ ಈಗ ಜೆಡಿಎಸ್​ನ ಹೆಚ್​​ಡಿ ಕುಮಾರಸ್ವಾಮಿ ವಕ್ತಾರರಾಗಿದ್ದಾರೆ ಎಂದು ವ್ಯಂಗ್ಯವಾಡಿದ ಮೊಯ್ಲಿ, ಬಿಜೆಪಿಗೆ ಇದುವರೆಗೂ ಪ್ರತಿಪಕ್ಷ ನಾಯಕನ ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಇರುವ ಬಿಜೆಪಿ ಅಧ್ಯಕ್ಷ ಅತಂತ್ರರಾಗಿದ್ದಾರೆ. ಈಗ ಅಮೃತ ಉಂಡವನೇ ಬದುಕುವುದಿಲ್ಲ. ಇನ್ನು ವಿಷ ಉಂಡವನು ಬದುಕುತ್ತಾನೆಯೇ? ಬಿಜೆಪಿಯವರು ವಿಷ ಉಣ್ಣುತ್ತಿದ್ದಾರೆ. ದೇಶಶದಲ್ಲಿ ಜನರನ್ನು ಹಕ್ಕುಗಳನ್ನು ಕಸಿದು ಅಧಿಕಾರ ನಡೆಸುತ್ತಿದ್ದಾರೆ. ಎದುರಾಳಿಗಳ ಮೇಲೆ ನರೇಂದ್ರ ಮೋದಿ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: ಮತ್ತೊಂದು ವಿವಾದಿತ ಹೇಳಿಕೆ; ಪ್ರಧಾನಿ ಮೋದಿಯನ್ನು ಮೊಹಮ್ಮದ್ ಅಲಿ ಜಿನ್ನಾ ಜತೆ ಹೋಲಿಸಿದ ವೀರಪ್ಪ ಮೊಯ್ಲಿ

ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಇದೆ. ಜಮ್ಮು ಕಾಶ್ಮಿರದಿಂದ ಕನ್ಯಾಕುಮಾರಿ ವರೆಗೂ ಅಘೋಷಿತ ಎಮರ್ಜೆನ್ಸಿ ಇದೆ. ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ಅದನ್ನು ಕಿತ್ತು ಹಾಕಬೇಕು ಎಂದು ಮೊಯ್ಲಿ ಕರೆ ನೀಡಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್