AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಮುಂದುವರಿದ ಕಾಂಗ್ರೆಸ್ ನಾಯಕರ ಧರಣಿ

ರಾಷ್ಟ್ರಧ್ವಜದ ವಿಚಾರವಾಗಿ ಸಚಿವ ಈಶ್ವರಪ್ಪ ಕೊಟ್ಟ ಹೇಳಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ನಿರಂತರವಾಗಿ ಸದನದಲ್ಲಿ ಹೋರಾಟ ಮಾಡುತ್ತಿದ್ದಾರೆ. ಜೊತೆಗೆ ನಾಳೆ ಅಧಿವೇಶನ ಮತ್ತೆ ಆರಂಭವಾಗುತ್ತದೆ.

ಸಚಿವ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಮುಂದುವರಿದ ಕಾಂಗ್ರೆಸ್ ನಾಯಕರ ಧರಣಿ
ಸದನದಲ್ಲೇ ರಾತ್ರಿ ಕಳೆದ ಕಾಂಗ್ರೆಸ್ ನಾಯಕರು
TV9 Web
| Edited By: sandhya thejappa|

Updated on:Feb 20, 2022 | 8:54 AM

Share

ಬೆಂಗಳೂರು: ಸಚಿವ ಕೆ ಎಸ್ ಈಶ್ವರಪ್ಪ (KS Eshwarappa) ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ (Congress) ನಾಯಕರ ಧರಣಿ ಮುಂದುವರಿದಿದೆ. ಈ ಮೂಲಕ ಕಾಂಗ್ರೆಸ್ ನಾಯಕರ ಧರಣಿ 4ನೇ ದಿನಕ್ಕೆ ಕಾಲಿಟ್ಟಿದೆ. ವಿಧಾನಸಭೆ, ವಿಧಾನಪರಿಷತ್​ನಲ್ಲಿ ಮುಂದುವರಿದ ಧರಣಿಯನ್ನು ನಾಳೆ ಅಧಿವೇಶನದಲ್ಲೂ ಮುಂದುವರಿಸಲು ನಿರ್ಧಾರ ಮಾಡಲಾಗಿದೆ. ಅಲ್ಲದೆ ಸೋಮವಾರದ ಬಳಿಕ ರಾಜ್ಯಾದ್ಯಂತ ಹೋರಾಟಕ್ಕೆ ಸೂಚನೆ ನೀಡುವ ಸಾಧ್ಯತೆಯಿದೆ. ಸದ್ಯ ಸರ್ಕಾರದ ನಿರ್ಧಾರ ನೋಡಿಕೊಂಡು ಹೋರಾಟಕ್ಕೆ ಸೂಚನೆ ನೀಡಬಹುದು.

ರಾಷ್ಟ್ರಧ್ವಜದ ವಿಚಾರವಾಗಿ ಸಚಿವ ಈಶ್ವರಪ್ಪ ಕೊಟ್ಟ ಹೇಳಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ನಿರಂತರವಾಗಿ ಸದನದಲ್ಲಿ ಹೋರಾಟ ಮಾಡುತ್ತಿದ್ದಾರೆ. ಜೊತೆಗೆ ನಾಳೆ ಅಧಿವೇಶನ ಮತ್ತೆ ಆರಂಭವಾಗುತ್ತದೆ. ಅಧಿವೇಶನ ಆರಂಭವಾದ ಕೂಡಲೇ ಮತ್ತೆ ನಾಯಕರು ಈಶ್ವರಪ್ಪ ವಿರುದ್ಧ ಧರಣಿ ಮುಂದುವರಿಸಲು ತೀರ್ಮಾನಿಸಿದ್ದಾರೆ.

ಜಿಲ್ಲಾ, ತಾಲೂಕು ಮಟ್ಟದಲ್ಲೂ ಹೋರಾಟ ಮಾಡಲು ಚಿಂತನೆ ನಡೆಸಿರುವ ಕಾಂಗ್ರೆಸ್, ಸರ್ಕಾರದ ತೀರ್ಮಾನ ನೋಡಿಕೊಂಡು ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವವರೆಗೂ ಹೋರಾಟ ನಡೆಸಲು ಎಲ್ಲ ರೂಪುರೇಷೆ ಸಿದ್ಧ ಮಾಡಿಕೊಳ್ಳುತ್ತಿದೆ.

ವಿಧಾನಸೌಧದ ಮುಂದೆ ಸ್ವಚ್ಛತೆ ಪರಿಶೀಲಿಸಿದ ಸಿದ್ದರಾಮಯ್ಯ: ವಿಧಾನಸೌಧದ ಮುಂದೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ವಚ್ಛತೆ ಪರಿಶೀಲಿಸಿದರು. ಸ್ವಚ್ಛತೆ ಹಾಗೂ ಸಣ್ಣಪುಟ್ಟ ಡ್ಯಾಮೇಜ್ ಕುರಿತು ಪರಿಶೀಲನೆ ಮಾಡಿದರು. ಪರಿಶೀಲನೆ ಬಳಿಕ ಹೇಳಿಕೆ ನೀಡಿದ ಸಿದ್ದರಾಮಯ್ಯ, ವಿಧಾನಸೌಧದಲ್ಲಿ ಎಲ್ಲೆಂದರಲ್ಲಿ ಕಸವನ್ನು ಎಸೆಯಲಾಗುತ್ತಿದೆ. ವಾಹನ ಗುದ್ದಿ ಮುಖ್ಯದ್ವಾರದಲ್ಲಿ ಸಣ್ಣ ಡ್ಯಾಮೇಜ್ ಆಗಿದೆ. ವಿಧಾನಸೌಧದ ಸ್ವಚ್ಛತೆ ಕುರಿತು ಸಿಎಸ್ ಗಮನಕ್ಕೆ ತರುತ್ತೇನೆ ಎಂದು ತಿಳಿಸಿದರು.

ನಮ್ಮ ಒತ್ತಾಯಕ್ಕೆ ಸರ್ಕಾರ ಮಣಿಯುತ್ತಾ ಇಲ್ವಾ ಅಂತ ನೋಡಲು ಧರಣಿ ಮಾಡುತ್ತಿಲ್ಲ. ಸಚಿವ ಈಶ್ವರಪ್ಪ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಅದನ್ನು‌ ಖಂಡಿಸಿ ನಮ್ಮ ನೋವನ್ನು ವ್ಯಕ್ತಪಡಿಸಿ ಧರಣಿ ಮಾಡುತ್ತಿದ್ದೇವೆ. ಎಲ್ಲಿತನಕ ಆಗುತ್ತೋ ನೋಡೋಣ, ಈ ವಿಚಾರದಲ್ಲಿ ನಾವು ತಾರ್ಕಿಕ‌ ಅಂತ್ಯ ಕಾಣುತ್ತೇವೆ. ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ಕೊಡುವವರೆಗೂ ನಮ್ಮ ಹೋರಾಟ ನಿರಂತರವಾಗಿ ನಡೆಯುತ್ತದೆ. ಈಗಾಗಲೇ ರಾಜ್ಯಾದ್ಯಂತ ಹೋರಾಟ ಮಾಡಲು ನಮ್ಮ ನಾಯಕರು ತೀರ್ಮಾನ ಮಾಡಿದ್ದಾರೆ ಅಂತ ವಿಧಾನಸಭೆ ವಿಪಕ್ಷ ಉಪನಾಯಕ ಯು ಟಿ ಖಾದರ್ ತಿಳಿಸಿದರು.

ಇದನ್ನೂ ಓದಿ

ನಾಳೆಯಿಂದ ಪಿಯು ಪ್ರಾಯೋಗಿಕ ಪರೀಕ್ಷೆ ಆರಂಭ; ಹಿಜಾಬ್ ವಿವಾದದಿಂದ ಗೈರಾದರೆ ಮತ್ತೆ ಅವಕಾಶ ಇಲ್ಲ

ಆಮ್ ಆದ್ಮಿ ಪಕ್ಷದ ಕೌನ್ಸಿಲ್ಲರ್ ಗೀತಾ ರಾವತ್ ರೂ. 20,000 ಲಂಚಕ್ಕೆ ಬೇಡಿಕೆಯಿಟ್ಟು ರೆಡ್-ಹ್ಯಾಂಡಾಗಿ ಸಿಕ್ಕಿಬಿದ್ದರು!

Published On - 8:47 am, Sun, 20 February 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ