AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಸ್ಥಳದಲ್ಲಿ ಕೆಲ ಸಚಿವರ ಸಭೆ: ಕುತೂಹಲ ಮೂಡಿಸಿದ ‘ಕೈ’ ನಾಯಕರ ನಡೆ

ರಾಜ್ಯ ರಾಜಕಾರಣದಲ್ಲಿ ನವೆಂಬರ್​ ಕ್ರಾಂತಿ ವಿಚಾರ ಸದ್ದು ಮಾಡುತ್ತಿರುವ ಹೊತ್ತಲ್ಲೇ ಕೆಲ ಸಚಿವರು ಗೌಪ್ಯ ಸಭೆ ನಡೆಸಿರೋದು ಭಾರಿ ಕುತೂಹಲ ಮೂಡಿಸಿದೆ. ಸಚಿವ ಸಂಪುಟ ಪುನಾರಚನೆ ವಿಚಾರವೂ ಚರ್ಚೆಗೆ ಬಂದಿದ್ದು, ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚುತ್ತಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಅ.13ರಂದು ಸಚಿವರಿಗೆ ಡಿನ್ನರ್​ ಆಯೋಜಿಸಿರೋದು ಯಾಕೆ ಎಂಬ ಪ್ರಶ್ನೆಯೂ ಎದ್ದಿದೆ.

ಖಾಸಗಿ ಸ್ಥಳದಲ್ಲಿ ಕೆಲ ಸಚಿವರ ಸಭೆ: ಕುತೂಹಲ ಮೂಡಿಸಿದ 'ಕೈ' ನಾಯಕರ ನಡೆ
ಕುತೂಹಲ ಮೂಡಿಸಿದ ಮೂವರು ಸಚಿವರ ನಡೆ
ಪ್ರಸನ್ನ ಗಾಂವ್ಕರ್​
| Edited By: |

Updated on: Oct 09, 2025 | 12:30 PM

Share

ಬೆಂಗಳೂರು, ಅಕ್ಟೋಬರ್​ 09: ರಾಜ್ಯ ರಾಜಕೀಯದಲ್ಲಿ ನವೆಂಬರ್​ ಕ್ರಾಂತಿ ವಿಚಾರ ಸದ್ದು ಮಾಡುತ್ತಿರುವ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ( Cabinet Reshuffle) ವಿಚಾರವೂ ಚರ್ಚೆಯಾಗ್ತಿದೆ. ಇದಕ್ಕೆ ಪೂರಕವೆಂಬಂತೆ ಖಾಸಗಿ ಸ್ಥಳದಲ್ಲಿ ಕೆಲ ಸಚಿವರು ಮೀಟಿಂಗ್​ ನಡೆಸಿರೋದು ಭಾರೀ ಕುತೂಹಲ ಮೂಡಿಸಿದೆ. ಅ.13ರಂದು ಸಿಎಂ ಸಿದ್ದರಾಮಯ್ಯ ಡಿನ್ನರ್ ಆಯೋಜಿಸಿರುವ ಬೆನ್ನಲ್ಲೇ ಈ ಸಭೆ ನಡೆದಿರೋದು ಯಾಕೆ ಎಂಬ ಪ್ರಶ್ನೆ ಎದ್ದಿದೆ.

ಗೃಜ ಸಚಿವ ಡಾ.ಜಿ. ಪರಮೇಶ್ವರ್​ ಮತ್ತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಒನ್ ಟು ಒನ್ ಮೀಟಿಂಗ್ ನಡೆಸಿದ್ದು, ಖಾಸಗಿ ಅಪಾರ್ಟ್​ಮೆಂಟ್​ನಲ್ಲಿ ಸುದೀರ್ಘ ಚರ್ಚೆ ನಡೆದಿದೆ. ಬಳಿಕ ಸಚಿವ ಮಹದೇವಪ್ಪ ಕೂಡ ಸಾಥ್ ನೀಡಿದ್ದು, ಇದು ಮೀಟಿಂಗ್ ಅಲ್ಲ ಕೇವಲ ಈಟಿಂಗ್ ಎಂದು ಹೇಳಿ ಮೂವರು ಸಚಿವರು ತೆರಳಿದ್ದಾರೆ. ಇನ್ನು ಸಚಿವರಿಗೆ ಸಿಎಂ ಔತಣಕೂಟ ಆಯೋಜಿಸಿರುವ ವಿಚಾರ ಸಂಬಂಧ ವಿಧಾನಸೌಧದಲ್ಲಿ ಕೃಷಿ ಸಚಿವ ಎನ್​.ಚಲುವರಾಯಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಸಿದ್ದರಾಮಯ್ಯ ಔತಣಕೂಟ ಏರ್ಪಡಿಸಿದ ವಿಚಾರ ನನಗೆ ಗೊತ್ತಿಲ್ಲ. ಆದರೆ ಇದಕ್ಕೂ ಮುನ್ನ ಎರಡ್ಮೂರು ಬಾರಿ ಕರೆದಿದ್ದಾರೆ. ಆಗ ಸರ್ಕಾರದ ಕಾರ್ಯಕ್ರಮಗಳು, ಅಭಿವೃದ್ಧಿ, ಪಕ್ಷದ ಸಂಘಟನೆ, ಸ್ಥಳೀಯ ಚುನಾವಣೆ ಬಗ್ಗೆ ಚರ್ಚಿಸಿದ್ದಾರೆ, ಈಗಲೂ ಅದೇ ಇರಬಹುದು. ಸಂಪುಟ ಪುನಾರಚನೆ ಬೇರೆ, ಅದಕ್ಕೂ ಔತಣಕೂಟಕ್ಕೂ ಸಂಬಂಧ ಇಲ್ಲ ಎಂದಿದ್ದಾರೆ.

ಇದನ್ನೂ ಓದಿ: ನಾಯಕತ್ವ ಬದಲಾವಣೆ: ಸಿದ್ದು ಬಣ VS ಡಿಕೆಶಿ ಬಣ ಮತ್ತೆ ಸಕ್ರಿಯ

ಸಂಪುಟ ಪುನಾರಚನೆ ವಿಚಾರ ಮುನ್ನೆಲೆಗೆ ಬರುತ್ತಿದ್ದಂತೆ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚುತ್ತಿದೆ. ಎರಡೂವರೆ ವರ್ಷ ಆದ್ಮೇಲೆ ಅವಕಾಶ ನೀಡುತ್ತೇವೆ ಎಂದು ಖರ್ಗೆ, ರಾಹುಲ್, ಸಿದ್ದರಾಮಯ್ಯ & ಡಿಕೆಶಿ ಅವರು ಮಾತು ಕೊಟ್ಟಿದ್ದರು. ನಮ್ಮ ಕೋಲಾರ ಜಿಲ್ಲೆಯಲ್ಲಿ ನಾನೇ ಸೀನಿಯರ್ ಇದ್ದೇನೆ. ನನಗೂ ಅವಕಾಶ ಮಾಡಿಕೊಡುತ್ತಾರೆ ಅನ್ನೋ ವಿಶ್ವಾಸ ಇದೆ. ಬಲಗೈ ಸಮುದಾಯಕ್ಕೆ ಅವಕಾಶ ಸಿಗಬೇಕು ಎಂದು ಬೆಂಗಳೂರಿನಲ್ಲಿ ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ ಹೇಳಿದ್ದಾರೆ.

‘ಸಿಎಂ ಬಗ್ಗೆ ನನಗೆ ವಿಶ್ವಾಸ ಇದೆ’

ಮತ್ತೊಂದೆಡೆ ಮತ್ತೆ ಸಚಿವ ಸ್ಥಾನ ಸಿಗುವ ಬಗ್ಗೆ ಶಾಸಕ ಕೆ.ಎನ್.ರಾಜಣ್ಣ ಮಾತನಾಡಿದ್ದು, ಬಿಹಾರ ಚುನಾವಣೆ ಮುಗಿಯುವ ತನಕ ಸುಮ್ಮನೇ ಇದ್ದು ಬಿಡಿ. ಸಿಎಂ ಬಗ್ಗೆ ನನಗೆ ವಿಶ್ವಾಸ ಇದೆ ಎಂದಿದ್ದಾರೆ. ಮಂತ್ರಿ ಸ್ಥಾನ ಕೊಡಿ ಅಂತಾ ಯಾರನ್ನೂ ಕೇಳಲು ಹೋಗಿಲ್ಲ. 2018ರಲ್ಲಿ ನೀನು ಸೋತು ಬಿಟ್ಟೆ, ಇಲ್ಲದಿದ್ರೆ ಮಂತ್ರಿ ಮಾಡ್ತಿದ್ದೆ. ನಿನ್ನ ಜಾಗದಲ್ಲಿ ತುಕಾರಾಂ ಮಂತ್ರಿ ಮಾಡ್ದೆ ಅಂತಾ ಈ ಹಿಂದೆ ಸಿದ್ದರಾಮಯ್ಯ ನನ್ನ ಬಳಿ ಒಂದು ಸಲ ಹೇಳಿದ್ದರು. ಈ ಚುನಾವಣೆಯಲ್ಲಿ ಗೆದ್ದಾಗ ಸಹಕಾರ ಖಾತೆ ಕೊಡಿ ಎಂದಿದ್ದೆ. ನನ್ನ ಅನುಭವದ ಆಧಾರದ ಮೇಲೆ ಸಹಕಾರ ಖಾತೆ ಕೊಟ್ಟಿದ್ದರು ಎಂದು ರಾಜಣ್ಣ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?