AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KMF Chairman: ಕೊನೆಗೂ ಕಾಂಗ್ರೆಸ್‌ ಶಾಸಕ ಭೀಮಾ ನಾಯ್ಕ್​ಗೆ ಒಲಿದ ಕೆಎಂಎಫ್ ಅಧ್ಯಕ್ಷ ಹುದ್ದೆ

Karnataka Milk Federation: ನಿರೀಕ್ಷೆಯಂತೆ ಕಾಂಗ್ರೆಸ್ ಶಾಸಕ ಭೀಮಾ ನಾಯ್ಕ್​ ಅವರಿಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ (ಕೆಎಂಎಫ್) ಅಧ್ಯಕ್ಷ ಸ್ಥಾನ ಒಲಿದಿದೆ.

KMF Chairman: ಕೊನೆಗೂ ಕಾಂಗ್ರೆಸ್‌ ಶಾಸಕ ಭೀಮಾ ನಾಯ್ಕ್​ಗೆ ಒಲಿದ ಕೆಎಂಎಫ್ ಅಧ್ಯಕ್ಷ ಹುದ್ದೆ
ರಮೇಶ್ ಬಿ. ಜವಳಗೇರಾ
|

Updated on:Jun 21, 2023 | 1:42 PM

Share

ಬೆಂಗಳೂರು: ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF) ಅಧ್ಯಕ್ಷ ಹುದ್ದೆ (KMF Chairman) ಕೊನೆಗೂ ಹಗರಿಬೊಮ್ಮನಹಳ್ಳಿಯ ಕಾಂಗ್ರೆಸ್‌ ಶಾಸಕ ಭೀಮಾ ನಾಯ್ಕ್​​ಗೆ ಒಲಿದಿದೆ. ಕೆಎಂಎಫ್ ಅಧ್ಯಕ್ಷರಾಗಿ ಭೀಮಾ ನಾಯ್ಕ್ (Bheema Naik) ಆಯ್ಕೆಯಾಗಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಬಾಲಚಂದ್ರ ಜಾರಕಿಹೊಳಿ ಅವರ ಕೆಎಂಎಫ್ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಹೀಗಾಗಿ ಚುನಾವಣೆ ಮೂಲಕ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ತೀರ್ಮಾನಿಸಲಾಗಿತ್ತು. ಆದ್ರೆ,  ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕಾಗಿ ಯಾರು ನಾಮಪತ್ರ ಸಲ್ಲಿಸದಿರುವುದರಿಂದ ಭೀಮಾ ನಾಯ್ಕ್ ಅವರು ಅವಿರೋಧವಾಗಿ ಆಯ್ಕೆಯಾದರು.

ಇದನ್ನೂ ಓದಿ: ಲೀಟರ್​​ ಎಮ್ಮೆ ಹಾಲಿಗೆ ರೈತರಿಗೆ ಹೆಚ್ಚುವರಿಯಾಗಿ ಸಿಗಲಿದೆ 9.25 ರೂ; ಈ ಜಿಲ್ಲೆಗಳ ರೈತರಿಗೆ ಮಾತ್ರ

ಒಟ್ಟು 14 ಒಕ್ಕೂಟದ ಪ್ರತಿನಿಧಿಗಳು, ಪಶುಸಂಗೋಪನಾ ಇಲಾಖೆ ನಿರ್ದೇಶಕ, ಸಹಕಾರ ಇಲಾಖೆ ರಿಜಿಸ್ಟಾರ್‌, ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಒಬ್ಬರು ನಾಮನಿರ್ದೇಶಿತ ಸದಸ್ಯರು ಸೇರಿ ಒಟ್ಟು 18 ಮಂದಿ ಮತದಾನ ಹೊಂದಿದ್ದರು, ಆದ್ರೆ, ಭೀಮಾ ನಾಯ್ಕ್​ಗೆ ಎದುರಾಳಿಯಾಗಿ ಯಾರೂ ನಾಮಪತ್ರ ಸಲ್ಲಿಸಿಲ್ಲ. ಇದರಿಂದ ಮತದಾನ ನಡೆಯದೇ ಭೀಮಾ ನಾಯ್ಕ್ ಅವರು​ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕೆಎಂಎಫ್‌ ಅಧ್ಯಕ್ಷರ ಅಧಿಕಾರದ ಅವಧಿ ಇನ್ನೂ ಒಂದು ವರ್ಷವಿದ್ದು, ತಮಗೆ ಎಲ್ಲ ನಿರ್ದೇಶಕರ ಬೆಂಬಲವಿದ್ದರೂ ಸಹ ಸಂಸ್ಥೆಯ ಪ್ರಗತಿಗಾಗಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸದೆ ಮುಂಬರುವ ಹೊಸ ಅಧ್ಯಕ್ಷರಿಗೆ ಎಲ್ಲ ರೀತಿಯ ಸಹಕಾರ ನೀಡುತ್ತೇನೆ ಎಂದು ಹೇಳುವ ಮೂಲಕ ಕೆಎಂಎಫ್​ ಅಧ್ಯಕ್ಷ ಚುನಾವಣೆಯಿಂದ ಹಿಂದೆ ಸರಿದಿದ್ದರು.

ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್‌) ಅಭಿವೃದ್ಧಿಯ ಹಿತ ಚಿಂತನೆಯಿಂದ ಬುಧವಾರ ನಡೆಯುವ ಕೆಎಂಎಫ್‌ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ತಾವು ಸ್ಪರ್ಧಿಸುತ್ತಿಲ್ಲ ಎಂದು ಶಾಸಕ ಹಾಗೂ ಈ ಹಿಂದೆ ಕೆಎಂಎಫ್‌ ಅಧ್ಯಕ್ಷರಾಗಿದ್ದ ಬಾಲಚಂದ್ರ ಜಾರಕಿಹೊಳಿ ಹೇಳಿದ್ದರು. ಅಲ್ಲದೇ ಸರ್ಕಾರದ ಬೆಂಬಲ ಹಾಗೂ ನಿರ್ದೇಶಕರ ಸಹಕಾರದಿಂದ ಸಂಸ್ಥೆಯನ್ನು ಅಭಿವೃದ್ಧಿ ಪಥದತ್ತ ತೆಗೆದುಕೊಂಡು ಹೋಗಿದ್ದೇನೆ. ಮುಂದೆ ಬರುವ ಹೊಸ ಅಧ್ಯಕ್ಷರು ಸಂಸ್ಥೆಯನ್ನು ಇನ್ನಷ್ಟುಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗಲಿ ಎಂದು ಸಲಹೆ ನೀಡಿದ್ದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 1:28 pm, Wed, 21 June 23

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು