AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Laxman Savadi: ನನ್ನ ಬಳಿ ಪೆನ್​ಡ್ರೈವ್​ ಇರುವುದು ಸತ್ಯ, ರಾಜ್ಯ ರಾಜಕಾರಣದಲ್ಲಿ ಹಲ್ ಚಲ್ ಎಬ್ಬಿಸಿದ ಲಕ್ಷ್ಮಣ ಸವದಿ

ರಾಜ್ಯ ರಾಜಕಾರಣದಲ್ಲಿ ಮತ್ತೆ ಪೆನ್​ಡ್ರೈವ್ ಸ್ಪೋಟಗೊಂಡಿದೆ. ಜೆಡಿಎಸ್ ಹಾಗೂ ಬಿಜೆಪಿಯವರ ಪೆನ್​ ಡ್ರೈವ್​ಗೆ ಪ್ರತಿಯಾಗಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಪೆನ್​ ಡ್ರೈವ್​ ಬಾಂಬ್ ಸಿಡಿಸಿದ್ದಾರೆ. ಕುಮಾರಸ್ವಾಮಿ ಪೆನ್ ಡ್ರೈವ್ ನಲ್ಲಿ ಏನಿದೆಯೋ ಅದಕ್ಕೆ ಸರಿಸಮನಾಗಿ ನಮ್ಮ ಪೆನ್ ಡ್ರೈವ್ ನಲ್ಲೂ ದಾಖಲೆ ಇದೆ ಎಂದು ಹೇಳುವ ಮೂಲಕ ಸವದಿ ರಾಜ್ಯ ರಾಜಕಾರಣದಲ್ಲಿ ಹಲ್​ ಚಲ್ ಎಬ್ಬಿಸಿದ್ದಾರೆ.

ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Updated By: Digi Tech Desk|

Updated on:Aug 11, 2023 | 3:23 PM

Share

ಬೆಳಗಾವಿ, (ಆಗಸ್ಟ್ 11): ಸರ್ಕಾರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ(HD Kumaraswamy) ಸಿಡಿಸಿದ್ದ ಪೆನ್​ಡ್ರೈವ್ (pendrive) ಬಾಂಬ್ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ಕುಮಾರಸ್ವಾಮಿ ಅವರ ಪೆನ್ ಡ್ರೈವ್​ನಲ್ಲಿ ಏನಿರಬಹುದು ಎನ್ನುವ ಕುತೂಹಲ ಜನರಲ್ಲಿ ಇದ್ದರೆ, ಆಡಳಿತರೂಢ ಸರ್ಕಾರಕ್ಕೆ ಆತಂಕಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಸಹ ಪೆನ್​ಡ್ರೈವ್ ಬಾಂಬ್ ಸಿಡಿಸಿದ್ದಾರೆ. ಇಂದು (ಆಗಸ್ಟ್ 11) ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮಣ ಸವದಿ(Lakshman Savadi), ನನ್ನ ಬಳಿ ಪೆನ್​ಡ್ರೈವ್​ ಇರುವುದು ಸತ್ಯ. ಯಾರು ಏನೇನು ಕುತಂತ್ರ ಮಾಡುತ್ತಿದ್ದರು ಎಂಬ ಕುರಿತ ಪೆನ್​ಡ್ರೈವ್​ನಲ್ಲಿದೆ ಎಂದು ಹೇಳಿದ್ದು, ರಾಜ್ಯ ರಾಜಕಾರಣದಲ್ಲಿ ಹಲ್ ಚಲ್ ಎಬ್ಬಿಸಿದ್ದಾರೆ.

ಯಾರ್ಯಾರು ಪಕ್ಷದಲ್ಲಿ ಕಾಲು ಎಳೆಯುವ ಕೆಲಸ ಮಾಡುತ್ತಿದ್ದರು. ಏನೇನು ಇತ್ತು ಎನ್ನುವುದು ನನ್ನ ಹತ್ತಿರ ಪೆನ್‌ಡ್ರೈವ್ ಇದೆ. ಆದ್ರೆ, ಯಾರಾದರೂ ಸವಾಲು ಹಾಕಿದ್ರೆ ಹಾಗೇ ತೋರಿಸುವಂತೆ ಹಠ ಹಿಡಿದರೆ ಸಂದರ್ಭ ಬಂದಾಗ ಪೆನ್​ಡ್ರೈವ್​ ತೋರಿಸುವೆ. ಅದನ್ನ ತೋರಿಸಿದ ಮೇಲೆ ಯಾರದ್ದು ಅಂತಾ ಗೊತ್ತಾಗುತ್ತೆ ಎಂದು ಹೇಳಿದರು. ಇದರೊಂದಿಗೆ ಬಿಜೆಪಿಯಲ್ಲಿದ್ದಾಗ ತಮಗೆ ಯಾರೆಲ್ಲಾ ಏನೆಲ್ಲ ಮಾಡಿದ್ದಾರೆ ಅದೆಲ್ಲ ಪೆನ್​ಡ್ರೈವ್​ನಲ್ಲಿದೆ ಎನ್ನುವ ಅರ್ಥದಲ್ಲಿ ಹೇಳಿದರು.

ಲಷ್ಮಣ ಸವದಿ ಹೇಳಿಕೆ ಇಲ್ಲಿದೆ

ಬಿಜೆಪಿ ಹಾಗೂ ಜೆಡಿಎಸ್​ನವರು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಅವರ ಬೇನಾಮಿಗಳನ್ನು ಬೇನಾಮಿ ಎನ್ನದೇ ಇನ್ನು ಏನನ್ನಬೇಕು? ಕುಮಾರಸ್ವಾಮಿ ಪೆನ್ ಡ್ರೈವ್ ಬಿಟ್ಟ ಮರು ಕ್ಷಣವೇ ನಾನು ಪೆನ್ ಡ್ರೈವ್ ಬಿಡುಗಡೆ ಮಾಡುತ್ತೇನೆ. ಅವರು ಬುಟ್ಟಿಯಲ್ಲಿ ಹಾವಿದೆ ಹಾವಿದೆ ಅಂತಿದ್ದಾರೆ. ಹಾಗಾದರೆ ನಮ್ಮ ಬುಟ್ಟಿಯಲ್ಲೂ ಹಾವಿದೆ. ಅವರ ಪೆನ್ ಡ್ರೈವ್ ನಲ್ಲಿ ಏನಿದೆಯೋ ಅದಕ್ಕೆ ಸರಿಸಮನಾಗಿ ನಮ್ಮ ಪೆನ್ ಡ್ರೈವ್ ನಲ್ಲೂ ದಾಖಲೆ ಇದೆ ಎಂದು ಹೇಳಿದರು.

ಇದನ್ನೂ ಓದಿ: ಯಾವ ಸಚಿವರು ಕಮಿಷನ್ ಕೇಳಿಲ್ಲ, ಸರ್ಕಾರಕ್ಕೆ ಕ್ಲೀನ್ ಚೀಟ್ ನೀಡಿದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ

ನನಗೆ ಬಿಜೆಪಿ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್​ಗೆ ಸೇರಿದ್ದೇನೆ. ನನಗೆ ಬಿಜೆಪಿ ಮಾಡಿದ ಅವಮಾನ ರೀತಿ ಆಗಬಾರದು ಗೌರವದಿಂದ ನಡೆದುಕೊಂಡು ಹೋಗಬೇಕು ಎಂದು ಕಾಂಗ್ರೆಸ್‌ಗೆ ಬಂದಿದ್ದೇನೆ. ನನ್ನ ಕ್ಷೇತ್ರಕ್ಕೆ ನೀರಾವರಿ ಯೋಜನೆ ನೀಡಬೇಕು ಎಂದಿದ್ದೆ. ಕ್ಷೇತ್ರದ ಜನತೆ ಬಹಳ ದೊಡ್ಡ ಋಣ ನನ್ನ ಮೇಲಿದೆ. ಕಾಗವಾಡ ಶಾಸಕ ರಾಜು ಕಾಗೆ, ನಾನು ಸಿಎಂ ಹಾಗೂ ಡಿಸಿಎಂ ಮುಂದೆ ಮಹತ್ವದ ಬೇಡಿಕೆ ಮಂಡಿಸುತ್ತೇವೆ, ಕಾಗವಾಡ ಶಾಸಕ ರಾಜು ಕಾಗೆ, ನಾನು ಮಹತ್ವದ ಬೇಡಿಕೆ ಮಂಡಿಸುತ್ತೇವೆ. ರಾಜು ಕಾಗೆ, ನಾನು ಜೋಡೆತ್ತಾಗಿ ಕಾರ್ಯ ಮಾಡುತ್ತೇವೆ ಎಂದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:29 pm, Fri, 11 August 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ