AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ತಲೆಯಲ್ಲಿ ಜೈ ಶ್ರೀರಾಮ್ ಘೋಷಣೆ ಹೇರಲಾಗುತ್ತಿದೆ: ಮಹೇಂದ್ರ ತಮ್ಮಣ್ಣವರ್, ಕಾಂಗ್ರೆಸ್ ಶಾಸಕ

ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ನಂತರ ಜೈ ಶ್ರೀರಾಮ್ ಘೋಷಣೆಗಳು ಕೇಳಿಬರುತ್ತಿವೆ. ಜೈ ಶ್ರೀರಾಮ್ ನಾವು ಕೂಡ ಹೇಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಇತ್ತೀಚೆಗೆ ಘೋಷಣೆಗಳನ್ನು ಕೂಗಿಸಿದ್ದರು. ಇದೀಗ, ಜೈ ಶ್ರೀರಾಮ್ ಘೋಷಣೆ ಬಗ್ಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಮಹೇಂದ್ರ ತಮ್ಮಣ್ಣವರ್, ಜೈ ಶ್ರೀರಾಮ್ ಪದಕ್ಕೆ ಇತಿಹಾಸವಿಲ್ಲ. ಜೈ ಶ್ರೀರಾಮ್ ಘೋಷಣೆಯನ್ನು ನಮ್ಮ ತಲೆಗೆ ತೂರಲಾಗುತ್ತಿದೆ ಎಂದಿದ್ದಾರೆ.

ನಮ್ಮ ತಲೆಯಲ್ಲಿ ಜೈ ಶ್ರೀರಾಮ್ ಘೋಷಣೆ ಹೇರಲಾಗುತ್ತಿದೆ: ಮಹೇಂದ್ರ ತಮ್ಮಣ್ಣವರ್, ಕಾಂಗ್ರೆಸ್ ಶಾಸಕ
ನಮ್ಮ ತಲೆಯಲ್ಲಿ ಇಂದು ಜೈ ಶ್ರೀರಾಮ್ ಘೋಷಣೆ ತುರುಕುತ್ತಿದ್ದಾರೆ ಎಂದ ಕಾಂಗ್ರೆಸ್ ಶಾಸಕ ಮಹೇಂದ್ರ ತಮ್ಮಣ್ಣವರ್
Sahadev Mane
| Edited By: |

Updated on:Jan 27, 2024 | 9:21 PM

Share

ಬೆಳಗಾವಿ, ಜ.27: ಜೈ ಶ್ರೀರಾಮ್ ಪದಕ್ಕೆ ಇತಿಹಾಸವಿಲ್ಲ. ಜೈ ಶ್ರೀರಾಮ್ ಘೋಷಣೆಯನ್ನು ನಮ್ಮ ತಲೆಗೆ ಹೇರಲಾಗುತ್ತಿದೆ ಎಂದು ಕುಡಚಿ ಕಾಂಗ್ರೆಸ್ ಶಾಸಕ ಮಹೇಂದ್ರ ತಮ್ಮಣ್ಣವರ್ (Mahendra Tammannavar) ಹೇಳಿದರು. ಬೆಳಗಾವಿ (Belagavi) ಜಿಲ್ಲೆ ರಾಯಬಾಗ ತಾಲೂಕಿನ ಅಳಗವಾಡಿ ಗ್ರಾಮದಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಹುತಾತ್ಮ ದಿನಾಚರಣೆಯಲ್ಲಿ ಮಾತನಾಡಿದ ಅವರು, ಮೊದಲು ಹರ ಹರ ಮಹದೇವ ಎಂದು ಹೇಳುತ್ತಿದ್ದರು. ರಾಯಣ್ಣ ಕೂಡ ಹರ ಹರ ಮಹದೇವ ಎಂದು ಹೇಳಿ ಗಲ್ಲಿಗೇರಿದ್ದರು ಎಂದರು.

ನಾವು ಇಂದು ಯಾವ ಸಂಸ್ಕೃತಿಯಲ್ಲಿ ಬದುಕುತ್ತಿದ್ದೇವೆ ಅಂದರೆ ಹರ ಹರ ಮಹದೇವ ಎಂಬ ಘೋಷಣೆ ನಮ್ಮ ತಲೆಯಲ್ಲಿ ಇಲ್ಲ. ನಮ್ಮ ತಲೆಯಲ್ಲಿ ಇಂದು ಜೈ ಶ್ರೀರಾಮ್ ಘೋಷಣೆ ಹೇರುತ್ತಿದ್ದಾರೆ. ಹರ ಹರ ಮಹದೇವ ಘೋಷಣೆಗೆ ಇತಿಹಾಸವಿದೆ. ಜೈ ಶ್ರೀರಾಮ್ ಘೋಷಣೆಗೆ ಇತಿಹಾಸವಿದೆಯೇ ಹೇಳಿ ನೋಡೋಣ ಎಂದರು.

ಇದನ್ನೂ ಓದಿ: ಹೃದಯದಲ್ಲಿ ಟಿಪ್ಪು ಇಟ್ಟುಕೊಂಡು ಜೈ ಶ್ರೀರಾಮ್​ ಅಂತಾರೆ: ವರ್ಕೌಟ್ ಆಗಲ್ಲ ಎಂದ ಆರ್​​ ಅಶೋಕ್

ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ನಂತರ ಜೈ ಶ್ರೀರಾಮ್ ಘೋಷಣೆಗಳನ್ನು ಹಿಂದೂ ಕಾರ್ಯಕರ್ತರು, ಬಿಜೆಪಿಗರಲ್ಲಿ ಮಾತ್ರವಲ್ಲದೆ, ಕಾಂಗ್ರೆಸ್​ನಲ್ಲೂ ಮೊಳಗಲು ಆರಂಭವಾಗಿದೆ. ಜೈ ಶ್ರೀರಾಮ್ ನಾವು ಕೂಡ ಹೇಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಇತ್ತೀಚೆಗೆ ಘೋಷಣೆಗಳನ್ನು ಕೂಗಿಸಿದ್ದರು.

ಜೈ ಶ್ರೀರಾಮ್ ಅಂತ ನಾವೂ ಹೇಳೋಲ್ವಾ? ಜೈ ಶ್ರೀರಾಮ್ ಎಂಬುದು ಒಬ್ಬರ ಸ್ಲೋಗನ್ ಅಲ್ಲ, ನಾನೂ ಹೇಳುತ್ತೇನೆ. ಕೆಲವರು ಜೈ ಶ್ರೀರಾಮ್ ಸ್ಲೋಗನ್ ತಮ್ಮ‌ ಸ್ವತ್ತು ಅಂದುಕೊಂಡಿದ್ದಾರೆ. ಎಲ್ಲರೂ ಜೈ ಶ್ರೀರಾಮ್ ಹೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರಿಗೆ ಹೇಳುತ್ತಾ ತಾವು ಸಹ ಜೈ ಶ್ರೀರಾಮ್​ ಎಂದು ಕೂಗಿದ್ದರು. ಬೆಂಗಳೂರು ಪೂರ್ವ ತಾಲೂಕಿನ ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿದ್ದ ರಾಮ ಸೀತ ಲಕ್ಷ್ಮಣ ದೇವಾಲಯ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಘೋಷಣೆ ಕೂಗಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:17 pm, Sat, 27 January 24

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ