AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ದಿನಕ್ಕೆ ಬಿಗ್​ ಬಾಸ್​ನಿಂದ ಆಚೆ ಬಂದ ಪ್ರದೀಪ್ ಈಶ್ವರ್: ಟ್ರೋಲ್, ಟೀಕೆಗಳಿಗೆ ಖಡಕ್ ಉತ್ತರ ಕೊಟ್ಟ ಶಾಸಕ

ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಒಂದೇ ದಿನಕ್ಕೆ ದೊಡ್ಮನೆಯಿಂದ ಹೊರ ಬಂದಿದ್ದಾರೆ. ಮನೆಗೆ ಹೋದ ಮೊದಲ ದಿನವೇ ಸಾಕಷ್ಟು ಸುದ್ದಿ ಮಾಡಿದ್ದರು. ಪ್ರದೀಪ್ ಈಶ್ವರ್. ಹಲವು ದಿನಗಳ ಕಾಲ ಸ್ಪರ್ಧಿಯಾಗಿಯೇ ಅವರು ಮನೆಯಲ್ಲಿ ಉಳಿಯಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಒಂದೇ ದಿನಕ್ಕೆ ಆಚೆ ಬಂದಿದ್ದು, ತಮ್ಮ ಬಗ್ಗೆ ಕೇಳಿಬಂದ ಟೀಕೆಗಳಿಗೆ ಖಡಕ್ ಉತ್ತರ ಕೊಟ್ಟಿದ್ದಾರೆ.

ಒಂದೇ ದಿನಕ್ಕೆ ಬಿಗ್​ ಬಾಸ್​ನಿಂದ ಆಚೆ ಬಂದ ಪ್ರದೀಪ್ ಈಶ್ವರ್: ಟ್ರೋಲ್, ಟೀಕೆಗಳಿಗೆ ಖಡಕ್ ಉತ್ತರ ಕೊಟ್ಟ ಶಾಸಕ
ಶಾಸಕ ಪ್ರದೀಶ್ ಇಶ್ವರ್
TV9 Web
| Edited By: |

Updated on:Oct 10, 2023 | 2:26 PM

Share

ಬೆಂಗಳೂರು, (ಅಕ್ಟೋಬರ್ 10): ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್​ ಈಶ್ವರ್(Pradeep Eshwar), ಕನ್ನಡ​ ಬಿಗ್​ಬಾಸ್​(Bigg Boss Kannada Season 10) ಮನೆಯಿಂದ ಹೊರ ಬಂದಿದ್ದಾರೆ. ಹಲವು ದಿನಗಳ ಕಾಲ ಸ್ಪರ್ಧಿಯಾಗಿಯೇ ಅವರು ಬಿಸ್​ಬಾಸ್​ ಮನೆಯಲ್ಲೇ ಉಳಿಯಲಿದ್ದಾರೆ ಎನ್ನಲಾಗಿತ್ತು. ಇದರಿಂದ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಅಲ್ಲದೇ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇನ್ನು ಸಾಮಾಜಿಕ ಜಾಕತಾಣಗಳಲ್ಲಂತೂ ಟ್ರೋಲ್​ ಪೇಜ್ಗೆ ಆಹಾರವಾಗಿದ್ದರು. ಇದೆಲ್ಲದರ ಬೆಳವಣಿಗೆಗಳ ನಡುವೆ ಪ್ರದೀಪ್ ಈಶ್ವರ್​, ಒಂದೇ ದಿನಕ್ಕೆ ಬಿಗ್​ ಬಾಸ್​ ಮನೆಯಿಂದ ಆಚೆ ಬಂದಿದ್ದಾರೆ. ಇದರೊಂದಿಗೆ ಟೀಕೆಕಾರರ ಬಾಯಿ ಮುಚ್ಚಿಸಿದ್ದಾರೆ. ಇನ್ನು ಈ ಬಗ್ಗೆ ಪ್ರದೀಪ್ ಪ್ರತಿಕ್ರಿಯಿಸಿದ್ದು, ಎಲ್ಲಾ ಅಂತೆ-ಕಂತೆ ಸುದ್ದಿ, ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಬಿಗ್​ಬಾಸ್ ಸ್ಪರ್ಧಾಳುಗಳಿಗೆ ಮೋಟಿವೇಷನ್ ಮಾಡಲು ಕರೆದಿದ್ದರು. ಹೀಗಾಗಿ ರಿಯಾಲಿಟಿ ಶೋ ಅತಿಥಿಯಾಗಿ 3 ತಾಸು ಮಾತ್ರ ನಾನು ಒಳಹೋಗಿದ್ದೆ. ಆಯೋಜಕರ ಆಹ್ವಾನದ ಮೇರೆಗೆ ಹೋಗಿ ಬಂದಿದ್ದೇನೆ. ರಾಜ್ಯದ ಯುವಕರಿಗೆ ಅನುಕೂಲವಾಗಲಿ ಎಂದು ಭಾವಿಸಿ ಹೋಗಿದ್ದೇನೆ. ಕೆಲವರು ನನ್ನನ್ನು ಟೀಕೆ ಮಾಡುತ್ತಿದ್ದಾರೆ, ಅದು ಅವರ ಅಭಿಪ್ರಾಯ ಎಂದು ಟಾಂಗ್ ಕೊಟ್ಟರು.

ಇದನ್ನೂ ಓದಿ: Pradeep Eshwar: ಶಾಸಕ ಪ್ರದೀಪ್​ ಈಶ್ವರ್​ ಬಿಗ್​ ಬಾಸ್​ಗೆ ಬಂದಿದ್ದರ ಹಿಂದಿನ ಅಸಲಿ ಟ್ವಿಸ್ಟ್​ ಬಹಿರಂಗ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಬಿಜೆಪಿಯ ಪ್ರಭಾವಿ ಮಾಜಿ ಮಂತ್ರಿ ಡಾ.ಕೆ.ಸುಧಾಕರ್ ಸೋಲಿಸುವುದರ ಮೂಲಕ ರಾಜ್ಯದ ಗಮನವನ್ನೆ ಸೆಳೆದಿದ್ದರು. ಶಾಸಕರಾದ ಬೆನ್ನಲ್ಲೇ ಪ್ರದೀಪ್ ಈಶ್ವರ್ ಮನೆಮನೆಗಳಿಗೆ ತೆರಳಿ ಜನ ಕಷ್ಟ ಆಲಿಸಿ ಸೆಂಟರ್ ಆಫ್ ಅಟ್ರ್ಯಾಕ್ಷನ್ ಆಗಿದ್ದರು. ತಮ್ಮ ಮಾತುಗಳಿಂದಲೇ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದರು. ಆದ್ರೆ ಈಗ ಮತ್ತೊಮ್ಮೆ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್ 10 ನಲ್ಲಿ ಭಾಗವಹಿಸಿ ಚರ್ಚೆಗೆ ಗ್ರಾಸವಾಗಿದ್ದರು. ಅಲ್ಲದೇ ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು.

ಇದನ್ನೇ ಅಸ್ತ್ರ ಮಾಡಿಕೊಂಡಿದ್ದ ಬಿಜೆಪಿ ನಾಯಕರು ಪ್ರದೀಪ್ ಈಶ್ವರ್ ಮೇಲೆ ಮುಗಿಬಿದ್ದಿದ್ದರು. ಕ್ಷೇತ್ರದಲ್ಲಿ ಬರ ಬಂದು ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗ್ರಾಮಗಳಲ್ಲಿ ಕುಡಿಯುವ ನೀರಿಲ್ಲ, ಬಿತ್ತಿದ ಬೆಳೆಗಳು ಕೈಗೆ ಬಾರದೆ ರೈತರು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ, ಆದ್ರೆ ರೈತರ ನೆರವಿಗೆ ಬರಬೇಕಿದ್ದ ಶಾಸಕ ಪ್ರದೀಪ್ ಈಶ್ವರ್ ಬಿಗ್ ಬಾಸ್ ಹೌಸ್ ನಲ್ಲಿ ಜಾಲಿಯಾಗಿ ಮನರಂಜನೆಯಲ್ಲಿ ಮಾಡ್ತಿದ್ದಾರೆ ಎಂದು ಮಾಜಿ ಸಚಿವ ಸುಧಾಕರ್ ಕಿಡಿಕಾರಿದ್ದರು. ಇನ್ನೊಂದೆಡೆ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ . ಮನರಂಜನಾ ಕಾರ್ಯಕ್ರಮದಲ್ಲಿ ಇಚ್ಛೆ ಇದ್ದರೆ ರಾಜೀನಾಮೆ ಕೊಟ್ಟು ಹೋಗಬೇಕಿತ್ತು. ಕ್ಷೇತ್ರದಲ್ಲಿ ಸಮಸ್ಯೆಗಳು ಬಹಳಷ್ಟು ಇವೆ ಎಂದು ಟೀಕಿಸಿದ್ದರು.

ಸರ್ವ ಸಂಘಟನೆಗಳ ಒಕ್ಕೂಟ ಕೂಡ ಪ್ರದೀಪ್ ಈಶ್ವರ್​ರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕೆಂದು ಸಭಾಧ್ಯಕ್ಷರಿಗೆ ಪತ್ರ ಬರೆದಿತ್ತು.. ಅವರಿಗೆ ಯಾವುದೇ ರೀತಿಯ ಭತ್ಯೆ ನೀಡಬಾರದೆಂದು ಮನವಿ ಮಾಡಿತ್ತು.

ಇನ್ನಷ್ಟು ಬಿಗ್​ ಬಾಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:16 pm, Tue, 10 October 23

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ