AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರಿಷ್ಠರು ಚುನಾವಣೆಗೆ ನಿಲ್ಲಲೇಬೇಕು ಅಂದರೆ ಬದ್ಧ; ಯೂಟರ್ನ್ ತಗೊಂಡ್ರಾ ತನ್ವೀರ್ ಸೇಠ್?

ಚುನಾವಣಾ ರಾಜಕೀಯ ನಿವೃತ್ತಿಗೆ ನಿರ್ಧರಿಸಿದ್ದು ನಿಜ. ಅನಾರೋಗ್ಯ ಕಾರಣದಿಂದ ಮಾತ್ರ ಈ ನಿರ್ಧಾರ ಮಾಡಿದ್ದೇನೆ. ಆದರೆ, ಪಕ್ಷದ ವರಿಷ್ಠ ನಾಯಕರ ನಿರ್ಧಾರಕ್ಕೆ ನಾನು ಬದ್ಧ. ಪಕ್ಷದ ನಾಯಕರು ಚುನಾವಣೆಗೆ ನಿಲ್ಲಲೇಬೇಕು ಎಂದರೆ ಅದಕ್ಕೆ ಸಿದ್ಧ ಎಂದು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಹೇಳಿದರು.

ವರಿಷ್ಠರು ಚುನಾವಣೆಗೆ ನಿಲ್ಲಲೇಬೇಕು ಅಂದರೆ ಬದ್ಧ; ಯೂಟರ್ನ್ ತಗೊಂಡ್ರಾ ತನ್ವೀರ್ ಸೇಠ್?
ತನ್ವೀರ್ ಸೇಠ್ (ಸಂಗ್ರಹ ಚಿತ್ರ)
ಗಣಪತಿ ಶರ್ಮಾ
|

Updated on: Feb 28, 2023 | 3:04 PM

Share

ಮೈಸೂರು: ಚುನಾವಣಾ ರಾಜಕೀಯ ನಿವೃತ್ತಿಗೆ ನಿರ್ಧರಿಸಿದ್ದು ನಿಜ. ಅನಾರೋಗ್ಯ ಕಾರಣದಿಂದ ಮಾತ್ರ ಈ ನಿರ್ಧಾರ ಮಾಡಿದ್ದೇನೆ. ಆದರೆ, ಪಕ್ಷದ ವರಿಷ್ಠ ನಾಯಕರ ನಿರ್ಧಾರಕ್ಕೆ ನಾನು ಬದ್ಧ. ಪಕ್ಷದ ನಾಯಕರು ಚುನಾವಣೆಗೆ ನಿಲ್ಲಲೇಬೇಕು ಎಂದರೆ ಅದಕ್ಕೆ ಸಿದ್ಧ ಎಂದು ಕಾಂಗ್ರೆಸ್ (Congress) ಶಾಸಕ ತನ್ವೀರ್ ಸೇಠ್ (tanveer sait) ಹೇಳಿದರು. ರಾಜಕೀಯ ನಿವೃತ್ತಿ ಬಗ್ಗೆ ಮೈಸೂರಿನಲ್ಲಿ ಸ್ಪಷ್ಟನೆ ನೀಡಿದ ಅವರು, ನನಗೆ ಆರೋಗ್ಯ ಚೆನ್ನಾಗಿಲ್ಲ. ಚುನಾವಣೆಗೆ ನಿಲ್ಲುವುದಿಲ್ಲ ಎಂದು ಪತ್ರ ಬರೆದೆ. ಅದೇ ಕಾರಣಕ್ಕೆ ಚುನಾವಣಾ ರಾಜಕೀಯ ನಿವೃತ್ತಿ ಬಯಸಿದ್ದೇನೆ ಎಂದು ಹೇಳಿದರು. ರಾಜಕೀಯ ನಿವೃತ್ತಿಗೆ ಅಭಿಮಾನಿಗಳಿಂದ ಭಾರೀ ವಿರೋಧ ವ್ಯಕ್ತವಾದ ಬೆನ್ನಲ್ಲೇ ಅವರು ಈ ಹೇಳಿಕೆ ನೀಡಿದ್ದಾರೆ.

ಜನ ನನ್ನನ್ನು 5 ಬಾರಿ ಗೆಲ್ಲಿಸಿದ್ದಾರೆ. ನನ್ನ ತಂದೆ ಅವರನ್ನೂ ಜನ ಬೆಂಬಲಿಸಿದ್ದರು. ಆದರೆ ಸದ್ಯ ರಾಜಕೀಯ ಪರಿಸ್ಥಿತಿ‌ ಕೂಡ ಹದಗೆಟ್ಟಿದೆ. ನರಸಿಂಹರಾಜ ಕ್ಷೇತ್ರದ ಮತದಾರರ ಋಣ ತೀರಿಸಬೇಕಿದೆ. ಕಾಂಗ್ರೆಸ್ ನನಗೆ ಹಲವಾರು ಅವಕಾಶ ನೀಡಿದೆ. ಆ ಬಗ್ಗೆ ಯಾವುದೇ ಬೇಸರ ಇಲ್ಲ. ಬೇರಾವುದೇ ಬೆಳವಣಿಗೆಗಳ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಅವರು ಹೇಳಿದರು. ಜತೆಗೆ, ವರಿಷ್ಠರು ಏನೇ ತೀರ್ಮಾನ ಮಾಡಿದರೂ ಅದಕ್ಕೆ ಸಹಮತ ಇದೆ ಎಂದು ತಿಳಿಸಿದರು.

ತನ್ವೀರ್ ಸೇಠ್​ಗೆ ಟಿಕೆಟ್ ಖಚಿತ; ಕಾಂಗ್ರೆಸ್ ನಾಯಕ ಹೇಳಿಕೆ

ಹಾಲಿ ಶಾಸಕರಿಗೆ ಟಿಕೆಟ್​ ನೀಡುವುದಕ್ಕೆ ಹೈಕಮಾಂಡ್ ಈಗಾಗಲೇ ನಿರ್ಧಾರ ಮಾಡಿದೆ. ಹಾಗಾಗಿ ತನ್ವೀರ್ ಸೇಠ್​ಗೆ ಟಿಕೆಟ್ ಖಚಿತ ಎಂದು ತನ್ವೀರ್ ಸೇಠ್ ನಿವಾಸದಲ್ಲಿ ಮೈಸೂರು ಕಾಂಗ್ರೆಸ್ ಅಧ್ಯಕ್ಷ ಮೂರ್ತಿ ಹೇಳಿದ್ದಾರೆ. ಕಾರ್ಯಕರ್ತರು, ಬೆಂಬಲಿಗರು ಯಾವುದೇ ಕಾರಣಕ್ಕೂ ನಿರಾಸೆ ಪಡುವ ಅಗತ್ಯವಿಲ್ಲ. ಹೈಕಮಾಂಡ್ ಜತೆ ಚರ್ಚೆ ಮಾಡಿ ಅಂತಿಮವಾಗಿ ಇವರನ್ನೇ ಕಣಕ್ಕಿಳಿಸುತ್ತೇವೆ ಎಂದು ಮೂರ್ತಿ ತಿಳಿಸಿದ್ದಾರೆ.

ಇನ್ನೇನು ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಾಗಲೇ ಸೇಠ್ ಅವರು ರಾಜಕೀಯ ನಿವೃತ್ತಿಗೆ ನಿರ್ಧರಿಸಿದ್ದು ಅವರ ಅಭಿಮಾನಿಗಳಿಗೆ, ಕಾಂಗ್ರೆಸ್‌ಗೆ ಆಘಾತ ನೀಡಿತ್ತು. ಸೇಠ್ ನಿರ್ಧಾರ ಪ್ರಕಟಿಸಿದ ಬೆನ್ನಲ್ಲೇ ಅವರ ಬೆಂಬಲಿಗರೊಬ್ಬರು ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯೂ ನಡೆದಿತ್ತು.

ಇದನ್ನೂ ಓದಿ: ರಾಜಕೀಯ ನಿವೃತ್ತಿ ಘೋಷಿಸಿದ ತನ್ವೀರ್ ಸೇಠ್, ಕಾಂಗ್ರೆಸ್‌ಗೆ ಬಿಗ್ ಶಾಕ್; ಆತ್ಮಹತ್ಯೆಗೆ ಯತ್ನಿಸಿದ ಬೆಂಬಲಿಗ

‘ನನ್ನ ಮೇಲೆ ಹಲ್ಲೆಯಾದ ಬಳಿಕ ಆರೋಗ್ಯ ತುಂಬಾ ಏರುಪೇರಾಗಿದೆ. ಮೊದಲಿನಂತೆ ನಾನು ಮಾನಸಿಕ ಹಾಗೂ ದೈಹಿಕವಾಗಿಯೂ ಶಕ್ತಿಯುತವಾಗಿಲ್ಲ. ಅನಾರೋಗ್ಯದ ಕಾರಣ ನನಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ. ನನಗೆ ಈ ಬಾರಿ ಟಿಕೆಟ್ ಬೇಡ. ನಾನು ಇನ್ಮುಂದೆ ಯಾವುದೇ ಚುನಾವಣೆಯಲ್ಲೂ ಸ್ಪರ್ಧಿಸಲ್ಲ. ಆದ್ರೆ ಕಾಂಗ್ರೆಸ್‌ನಲ್ಲೇ ಇರುತ್ತೇನೆ’ ಎಂದು ರಾಜೀನಾಮೆ ಪತ್ರದಲ್ಲಿ ಸೇಠ್ ಉಲ್ಲೇಖಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ