AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲಿ, ಮಾಜಿ ಶಾಸಕರ ಮಧ್ಯೆ ಆಣೆ ಪ್ರಮಾಣದ ವಾಗ್ಯುದ್ಧ: ಜೀವರಾಜ್​​ಗೆ ಧರ್ಮಸ್ಥಳಕ್ಕೆ ಬರುವಂತೆ ರಾಜೇಗೌಡ ಆಹ್ವಾನ

ಕಾಂಗ್ರೆಸ್​ ಶಾಸಕ ಟಿ.ಡಿ.ರಾಜೇಗೌಡ ವಿರುದ್ಧ ಅಕ್ರಮವಾಗಿ ಆಸ್ತಿ ಸಂಪಾದಿಸಿದ್ದಾರೆಂದು ಮಾಜಿ ಬಿಜೆಪಿ ಶಾಸಕ ಡಿ.ಎನ್​.ಜೀವರಾಜ್​​ಗೆ ಆರೋಪ ಮಾಡಿದ್ದಾರೆ.

ಹಾಲಿ, ಮಾಜಿ ಶಾಸಕರ ಮಧ್ಯೆ ಆಣೆ ಪ್ರಮಾಣದ ವಾಗ್ಯುದ್ಧ: ಜೀವರಾಜ್​​ಗೆ ಧರ್ಮಸ್ಥಳಕ್ಕೆ ಬರುವಂತೆ ರಾಜೇಗೌಡ ಆಹ್ವಾನ
ಶೃಂಗೇರಿ ವಿಧಾನಸಭಾ ಕ್ಷೇತ್ರದ ಹಾಲಿ, ಮಾಜಿ ಶಾಸಕರು
TV9 Web
| Edited By: |

Updated on: Dec 04, 2022 | 4:47 PM

Share

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಹಾಲಿ ಮತ್ತು ಮಾಜಿ ಶಾಸಕರ ಮಧ್ಯೆ ಆಣೆ, ಪ್ರಮಾಣದ ವಾಗ್ಯುದ್ಧ ಶುರುವಾಗಿದೆ. ಹಾಲಿ ಕಾಂಗ್ರೆಸ್​ ಶಾಸಕ ಟಿ.ಡಿ.ರಾಜೇಗೌಡ (Congress MLA TD Rajegowda) ವಿರುದ್ಧ ಅಕ್ರಮವಾಗಿ ಆಸ್ತಿ ಸಂಪಾದಿಸಿದ್ದಾರೆಂದು ಮಾಜಿ ಬಿಜೆಪಿ ಶಾಸಕ ಡಿ.ಎನ್​.ಜೀವರಾಜ್​​ಗೆ (BJP MLA DN Jeevraj) ಆರೋಪ ಮಾಡಿದ್ದಾರೆ. ಈ ಆರೋಪ ಮಿತ್ಯವೆಂದಿರುವ ಟಿ.ಡಿ.ರಾಜೇಗೌಡ, ಡಿ.ಎನ್​.ಜೀವರಾಜ್​​ಗೆ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡುವಂತೆ ಚಿಕ್ಕಮಗಳೂರಿನಲ್ಲಿ (Chikkamagaluru) ಸವಾಲು ಹಾಕಿದ್ದಾರೆ.

ಏನದು ಆರೋಪ?

ಶಾಸಕ ಟಿ.ಡಿ.ರಾಜೇಗೌಡ ದಿ.ಸಿದ್ದಾರ್ಥ್​ ಕುಟುಂಬದ ಬಳಿ 211 ಎಕರೆ ಕಾಫಿತೋಟ ಖರೀದಿಸಿದ್ದಾರೆ. ಈ ಆಸ್ತಿ ಖರೀದಿ ವೇಳೆ ಸರ್ಕಾರಕ್ಕೆ ಮೋಸ ಮಾಡಿದ್ದಾರೆಂದು ಡಿ.ಎನ್​.ಜೀವರಾಜ್​​ ಆರೋಪ ಮಾಡಿದ್ದಾರೆ.

ಇದಕ್ಕೆ ತಿರುಗೇಟು ನೀಡಿದ ಟಿ.ಡಿ.ರಾಜೇಗೌಡ ನಾನು ಕಾನೂನು ಪ್ರಕಾರವೇ ಆಸ್ತಿಯನ್ನು ಖರೀದಿ ಮಾಡಿದ್ದೇನೆ. ಆ ತೋಟ ಕೇವಲ 14ರಿಂದ 15 ಕೋಟಿಯಷ್ಟು ಬೆಲೆ ಬಾಳುತ್ತೆ. 270 ಕೋಟಿಯಷ್ಟು ಆಸ್ತಿ ಖರೀದಿಸಿದ್ದಾರೆ ಎಂದು ಆರೋಪಿಸಿದ್ದಾರೆ. 15 ಕೋಟಿಗೂ 270 ಕೋಟಿಗೂ ವ್ಯತ್ಯಾಸ ಗೊತ್ತಿಲ್ವಾ, ಬುದ್ಧಿ ಇಲ್ವಾ? ಎಂದು ವಾಗ್ದಾಳಿ ಮಾಡಿದ್ದಾರೆ.

ರಾಜ್ಯ ಸರ್ಕಾರಕ್ಕೆ 80 ಕೋಟಿ ನಷ್ಟ ಮಾಡಿದ್ದೀನಿ ಎಂದು ಹೇಳುತ್ತಿದ್ದೀರಿ. ಈ ವಿಚಾರವನ್ನು ನಾನು ಇಲ್ಲಿಗೆ ಸುಮ್ಮನೆ ಬಿಡಲ್ಲ. ನಾನು ನಂಬುವ ಧರ್ಮಸ್ಥಳಕ್ಕೆ ಹೋಗಿ ಕೈಮುಗಿಯುತ್ತೇನೆ. ನಾನು ಏನಾದರೂ ಅನ್ಯಾಯ ಮಾಡಿದರೇ ನನಗೆ ತೊಂದರೆಯಾಗಲಿ. ಇಲ್ಲದಿದ್ದರೇ ಅಪಪ್ರಚಾರ ಮಾಡಿದವರನ್ನು ದೇವರೇ ನೋಡಿಕೊಳ್ಳಲಿ. ತಾಕತ್ತಿದ್ದರೆ ಶೃಂಗೇರಿ ಶಾರದಾಂಬೆ, ಧರ್ಮಸ್ಥಳದ ಸನ್ನಿಧಿಗೆ ಬನ್ನಿ. ಇಲ್ಲ ನೀವೇ ದಿನಾಂಕ, ಸಮಯ ನಿಗದಿ ಮಾಡಿ ನಾನು ಬರುತ್ತೇನೆ. ನಾನು ಪ್ರಮಾಣ ಮಾಡುತ್ತೇನೆ, ನೀವೂ ಆಣೆ ಪ್ರಮಾಣ ಮಾಡಿ ಎಂದು ಆಹ್ವಾನಿಸಿದ್ದಾರೆ.

ರಾಜ್ಯ ಮತ್ತಷ್ಟು ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್  ಮಾಡಿ

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು