AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲಿ, ಮಾಜಿ ಶಾಸಕರ ಮಧ್ಯೆ ಆಣೆ ಪ್ರಮಾಣದ ವಾಗ್ಯುದ್ಧ: ಜೀವರಾಜ್​​ಗೆ ಧರ್ಮಸ್ಥಳಕ್ಕೆ ಬರುವಂತೆ ರಾಜೇಗೌಡ ಆಹ್ವಾನ

ಕಾಂಗ್ರೆಸ್​ ಶಾಸಕ ಟಿ.ಡಿ.ರಾಜೇಗೌಡ ವಿರುದ್ಧ ಅಕ್ರಮವಾಗಿ ಆಸ್ತಿ ಸಂಪಾದಿಸಿದ್ದಾರೆಂದು ಮಾಜಿ ಬಿಜೆಪಿ ಶಾಸಕ ಡಿ.ಎನ್​.ಜೀವರಾಜ್​​ಗೆ ಆರೋಪ ಮಾಡಿದ್ದಾರೆ.

ಹಾಲಿ, ಮಾಜಿ ಶಾಸಕರ ಮಧ್ಯೆ ಆಣೆ ಪ್ರಮಾಣದ ವಾಗ್ಯುದ್ಧ: ಜೀವರಾಜ್​​ಗೆ ಧರ್ಮಸ್ಥಳಕ್ಕೆ ಬರುವಂತೆ ರಾಜೇಗೌಡ ಆಹ್ವಾನ
ಶೃಂಗೇರಿ ವಿಧಾನಸಭಾ ಕ್ಷೇತ್ರದ ಹಾಲಿ, ಮಾಜಿ ಶಾಸಕರು
TV9 Web
| Edited By: |

Updated on: Dec 04, 2022 | 4:47 PM

Share

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಹಾಲಿ ಮತ್ತು ಮಾಜಿ ಶಾಸಕರ ಮಧ್ಯೆ ಆಣೆ, ಪ್ರಮಾಣದ ವಾಗ್ಯುದ್ಧ ಶುರುವಾಗಿದೆ. ಹಾಲಿ ಕಾಂಗ್ರೆಸ್​ ಶಾಸಕ ಟಿ.ಡಿ.ರಾಜೇಗೌಡ (Congress MLA TD Rajegowda) ವಿರುದ್ಧ ಅಕ್ರಮವಾಗಿ ಆಸ್ತಿ ಸಂಪಾದಿಸಿದ್ದಾರೆಂದು ಮಾಜಿ ಬಿಜೆಪಿ ಶಾಸಕ ಡಿ.ಎನ್​.ಜೀವರಾಜ್​​ಗೆ (BJP MLA DN Jeevraj) ಆರೋಪ ಮಾಡಿದ್ದಾರೆ. ಈ ಆರೋಪ ಮಿತ್ಯವೆಂದಿರುವ ಟಿ.ಡಿ.ರಾಜೇಗೌಡ, ಡಿ.ಎನ್​.ಜೀವರಾಜ್​​ಗೆ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡುವಂತೆ ಚಿಕ್ಕಮಗಳೂರಿನಲ್ಲಿ (Chikkamagaluru) ಸವಾಲು ಹಾಕಿದ್ದಾರೆ.

ಏನದು ಆರೋಪ?

ಶಾಸಕ ಟಿ.ಡಿ.ರಾಜೇಗೌಡ ದಿ.ಸಿದ್ದಾರ್ಥ್​ ಕುಟುಂಬದ ಬಳಿ 211 ಎಕರೆ ಕಾಫಿತೋಟ ಖರೀದಿಸಿದ್ದಾರೆ. ಈ ಆಸ್ತಿ ಖರೀದಿ ವೇಳೆ ಸರ್ಕಾರಕ್ಕೆ ಮೋಸ ಮಾಡಿದ್ದಾರೆಂದು ಡಿ.ಎನ್​.ಜೀವರಾಜ್​​ ಆರೋಪ ಮಾಡಿದ್ದಾರೆ.

ಇದಕ್ಕೆ ತಿರುಗೇಟು ನೀಡಿದ ಟಿ.ಡಿ.ರಾಜೇಗೌಡ ನಾನು ಕಾನೂನು ಪ್ರಕಾರವೇ ಆಸ್ತಿಯನ್ನು ಖರೀದಿ ಮಾಡಿದ್ದೇನೆ. ಆ ತೋಟ ಕೇವಲ 14ರಿಂದ 15 ಕೋಟಿಯಷ್ಟು ಬೆಲೆ ಬಾಳುತ್ತೆ. 270 ಕೋಟಿಯಷ್ಟು ಆಸ್ತಿ ಖರೀದಿಸಿದ್ದಾರೆ ಎಂದು ಆರೋಪಿಸಿದ್ದಾರೆ. 15 ಕೋಟಿಗೂ 270 ಕೋಟಿಗೂ ವ್ಯತ್ಯಾಸ ಗೊತ್ತಿಲ್ವಾ, ಬುದ್ಧಿ ಇಲ್ವಾ? ಎಂದು ವಾಗ್ದಾಳಿ ಮಾಡಿದ್ದಾರೆ.

ರಾಜ್ಯ ಸರ್ಕಾರಕ್ಕೆ 80 ಕೋಟಿ ನಷ್ಟ ಮಾಡಿದ್ದೀನಿ ಎಂದು ಹೇಳುತ್ತಿದ್ದೀರಿ. ಈ ವಿಚಾರವನ್ನು ನಾನು ಇಲ್ಲಿಗೆ ಸುಮ್ಮನೆ ಬಿಡಲ್ಲ. ನಾನು ನಂಬುವ ಧರ್ಮಸ್ಥಳಕ್ಕೆ ಹೋಗಿ ಕೈಮುಗಿಯುತ್ತೇನೆ. ನಾನು ಏನಾದರೂ ಅನ್ಯಾಯ ಮಾಡಿದರೇ ನನಗೆ ತೊಂದರೆಯಾಗಲಿ. ಇಲ್ಲದಿದ್ದರೇ ಅಪಪ್ರಚಾರ ಮಾಡಿದವರನ್ನು ದೇವರೇ ನೋಡಿಕೊಳ್ಳಲಿ. ತಾಕತ್ತಿದ್ದರೆ ಶೃಂಗೇರಿ ಶಾರದಾಂಬೆ, ಧರ್ಮಸ್ಥಳದ ಸನ್ನಿಧಿಗೆ ಬನ್ನಿ. ಇಲ್ಲ ನೀವೇ ದಿನಾಂಕ, ಸಮಯ ನಿಗದಿ ಮಾಡಿ ನಾನು ಬರುತ್ತೇನೆ. ನಾನು ಪ್ರಮಾಣ ಮಾಡುತ್ತೇನೆ, ನೀವೂ ಆಣೆ ಪ್ರಮಾಣ ಮಾಡಿ ಎಂದು ಆಹ್ವಾನಿಸಿದ್ದಾರೆ.

ರಾಜ್ಯ ಮತ್ತಷ್ಟು ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್  ಮಾಡಿ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?