AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲಿ, ಮಾಜಿ ಶಾಸಕರ ಮಧ್ಯೆ ಆಣೆ ಪ್ರಮಾಣದ ವಾಗ್ಯುದ್ಧ: ಜೀವರಾಜ್​​ಗೆ ಧರ್ಮಸ್ಥಳಕ್ಕೆ ಬರುವಂತೆ ರಾಜೇಗೌಡ ಆಹ್ವಾನ

ಕಾಂಗ್ರೆಸ್​ ಶಾಸಕ ಟಿ.ಡಿ.ರಾಜೇಗೌಡ ವಿರುದ್ಧ ಅಕ್ರಮವಾಗಿ ಆಸ್ತಿ ಸಂಪಾದಿಸಿದ್ದಾರೆಂದು ಮಾಜಿ ಬಿಜೆಪಿ ಶಾಸಕ ಡಿ.ಎನ್​.ಜೀವರಾಜ್​​ಗೆ ಆರೋಪ ಮಾಡಿದ್ದಾರೆ.

ಹಾಲಿ, ಮಾಜಿ ಶಾಸಕರ ಮಧ್ಯೆ ಆಣೆ ಪ್ರಮಾಣದ ವಾಗ್ಯುದ್ಧ: ಜೀವರಾಜ್​​ಗೆ ಧರ್ಮಸ್ಥಳಕ್ಕೆ ಬರುವಂತೆ ರಾಜೇಗೌಡ ಆಹ್ವಾನ
ಶೃಂಗೇರಿ ವಿಧಾನಸಭಾ ಕ್ಷೇತ್ರದ ಹಾಲಿ, ಮಾಜಿ ಶಾಸಕರು
TV9 Web
| Updated By: ವಿವೇಕ ಬಿರಾದಾರ|

Updated on: Dec 04, 2022 | 4:47 PM

Share

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಹಾಲಿ ಮತ್ತು ಮಾಜಿ ಶಾಸಕರ ಮಧ್ಯೆ ಆಣೆ, ಪ್ರಮಾಣದ ವಾಗ್ಯುದ್ಧ ಶುರುವಾಗಿದೆ. ಹಾಲಿ ಕಾಂಗ್ರೆಸ್​ ಶಾಸಕ ಟಿ.ಡಿ.ರಾಜೇಗೌಡ (Congress MLA TD Rajegowda) ವಿರುದ್ಧ ಅಕ್ರಮವಾಗಿ ಆಸ್ತಿ ಸಂಪಾದಿಸಿದ್ದಾರೆಂದು ಮಾಜಿ ಬಿಜೆಪಿ ಶಾಸಕ ಡಿ.ಎನ್​.ಜೀವರಾಜ್​​ಗೆ (BJP MLA DN Jeevraj) ಆರೋಪ ಮಾಡಿದ್ದಾರೆ. ಈ ಆರೋಪ ಮಿತ್ಯವೆಂದಿರುವ ಟಿ.ಡಿ.ರಾಜೇಗೌಡ, ಡಿ.ಎನ್​.ಜೀವರಾಜ್​​ಗೆ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡುವಂತೆ ಚಿಕ್ಕಮಗಳೂರಿನಲ್ಲಿ (Chikkamagaluru) ಸವಾಲು ಹಾಕಿದ್ದಾರೆ.

ಏನದು ಆರೋಪ?

ಶಾಸಕ ಟಿ.ಡಿ.ರಾಜೇಗೌಡ ದಿ.ಸಿದ್ದಾರ್ಥ್​ ಕುಟುಂಬದ ಬಳಿ 211 ಎಕರೆ ಕಾಫಿತೋಟ ಖರೀದಿಸಿದ್ದಾರೆ. ಈ ಆಸ್ತಿ ಖರೀದಿ ವೇಳೆ ಸರ್ಕಾರಕ್ಕೆ ಮೋಸ ಮಾಡಿದ್ದಾರೆಂದು ಡಿ.ಎನ್​.ಜೀವರಾಜ್​​ ಆರೋಪ ಮಾಡಿದ್ದಾರೆ.

ಇದಕ್ಕೆ ತಿರುಗೇಟು ನೀಡಿದ ಟಿ.ಡಿ.ರಾಜೇಗೌಡ ನಾನು ಕಾನೂನು ಪ್ರಕಾರವೇ ಆಸ್ತಿಯನ್ನು ಖರೀದಿ ಮಾಡಿದ್ದೇನೆ. ಆ ತೋಟ ಕೇವಲ 14ರಿಂದ 15 ಕೋಟಿಯಷ್ಟು ಬೆಲೆ ಬಾಳುತ್ತೆ. 270 ಕೋಟಿಯಷ್ಟು ಆಸ್ತಿ ಖರೀದಿಸಿದ್ದಾರೆ ಎಂದು ಆರೋಪಿಸಿದ್ದಾರೆ. 15 ಕೋಟಿಗೂ 270 ಕೋಟಿಗೂ ವ್ಯತ್ಯಾಸ ಗೊತ್ತಿಲ್ವಾ, ಬುದ್ಧಿ ಇಲ್ವಾ? ಎಂದು ವಾಗ್ದಾಳಿ ಮಾಡಿದ್ದಾರೆ.

ರಾಜ್ಯ ಸರ್ಕಾರಕ್ಕೆ 80 ಕೋಟಿ ನಷ್ಟ ಮಾಡಿದ್ದೀನಿ ಎಂದು ಹೇಳುತ್ತಿದ್ದೀರಿ. ಈ ವಿಚಾರವನ್ನು ನಾನು ಇಲ್ಲಿಗೆ ಸುಮ್ಮನೆ ಬಿಡಲ್ಲ. ನಾನು ನಂಬುವ ಧರ್ಮಸ್ಥಳಕ್ಕೆ ಹೋಗಿ ಕೈಮುಗಿಯುತ್ತೇನೆ. ನಾನು ಏನಾದರೂ ಅನ್ಯಾಯ ಮಾಡಿದರೇ ನನಗೆ ತೊಂದರೆಯಾಗಲಿ. ಇಲ್ಲದಿದ್ದರೇ ಅಪಪ್ರಚಾರ ಮಾಡಿದವರನ್ನು ದೇವರೇ ನೋಡಿಕೊಳ್ಳಲಿ. ತಾಕತ್ತಿದ್ದರೆ ಶೃಂಗೇರಿ ಶಾರದಾಂಬೆ, ಧರ್ಮಸ್ಥಳದ ಸನ್ನಿಧಿಗೆ ಬನ್ನಿ. ಇಲ್ಲ ನೀವೇ ದಿನಾಂಕ, ಸಮಯ ನಿಗದಿ ಮಾಡಿ ನಾನು ಬರುತ್ತೇನೆ. ನಾನು ಪ್ರಮಾಣ ಮಾಡುತ್ತೇನೆ, ನೀವೂ ಆಣೆ ಪ್ರಮಾಣ ಮಾಡಿ ಎಂದು ಆಹ್ವಾನಿಸಿದ್ದಾರೆ.

ರಾಜ್ಯ ಮತ್ತಷ್ಟು ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್  ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!