AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲಿ, ಮಾಜಿ ಶಾಸಕರ ಮಧ್ಯೆ ಆಣೆ ಪ್ರಮಾಣದ ವಾಗ್ಯುದ್ಧ: ಜೀವರಾಜ್​​ಗೆ ಧರ್ಮಸ್ಥಳಕ್ಕೆ ಬರುವಂತೆ ರಾಜೇಗೌಡ ಆಹ್ವಾನ

ಕಾಂಗ್ರೆಸ್​ ಶಾಸಕ ಟಿ.ಡಿ.ರಾಜೇಗೌಡ ವಿರುದ್ಧ ಅಕ್ರಮವಾಗಿ ಆಸ್ತಿ ಸಂಪಾದಿಸಿದ್ದಾರೆಂದು ಮಾಜಿ ಬಿಜೆಪಿ ಶಾಸಕ ಡಿ.ಎನ್​.ಜೀವರಾಜ್​​ಗೆ ಆರೋಪ ಮಾಡಿದ್ದಾರೆ.

ಹಾಲಿ, ಮಾಜಿ ಶಾಸಕರ ಮಧ್ಯೆ ಆಣೆ ಪ್ರಮಾಣದ ವಾಗ್ಯುದ್ಧ: ಜೀವರಾಜ್​​ಗೆ ಧರ್ಮಸ್ಥಳಕ್ಕೆ ಬರುವಂತೆ ರಾಜೇಗೌಡ ಆಹ್ವಾನ
ಶೃಂಗೇರಿ ವಿಧಾನಸಭಾ ಕ್ಷೇತ್ರದ ಹಾಲಿ, ಮಾಜಿ ಶಾಸಕರು
TV9 Web
| Edited By: |

Updated on: Dec 04, 2022 | 4:47 PM

Share

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಹಾಲಿ ಮತ್ತು ಮಾಜಿ ಶಾಸಕರ ಮಧ್ಯೆ ಆಣೆ, ಪ್ರಮಾಣದ ವಾಗ್ಯುದ್ಧ ಶುರುವಾಗಿದೆ. ಹಾಲಿ ಕಾಂಗ್ರೆಸ್​ ಶಾಸಕ ಟಿ.ಡಿ.ರಾಜೇಗೌಡ (Congress MLA TD Rajegowda) ವಿರುದ್ಧ ಅಕ್ರಮವಾಗಿ ಆಸ್ತಿ ಸಂಪಾದಿಸಿದ್ದಾರೆಂದು ಮಾಜಿ ಬಿಜೆಪಿ ಶಾಸಕ ಡಿ.ಎನ್​.ಜೀವರಾಜ್​​ಗೆ (BJP MLA DN Jeevraj) ಆರೋಪ ಮಾಡಿದ್ದಾರೆ. ಈ ಆರೋಪ ಮಿತ್ಯವೆಂದಿರುವ ಟಿ.ಡಿ.ರಾಜೇಗೌಡ, ಡಿ.ಎನ್​.ಜೀವರಾಜ್​​ಗೆ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡುವಂತೆ ಚಿಕ್ಕಮಗಳೂರಿನಲ್ಲಿ (Chikkamagaluru) ಸವಾಲು ಹಾಕಿದ್ದಾರೆ.

ಏನದು ಆರೋಪ?

ಶಾಸಕ ಟಿ.ಡಿ.ರಾಜೇಗೌಡ ದಿ.ಸಿದ್ದಾರ್ಥ್​ ಕುಟುಂಬದ ಬಳಿ 211 ಎಕರೆ ಕಾಫಿತೋಟ ಖರೀದಿಸಿದ್ದಾರೆ. ಈ ಆಸ್ತಿ ಖರೀದಿ ವೇಳೆ ಸರ್ಕಾರಕ್ಕೆ ಮೋಸ ಮಾಡಿದ್ದಾರೆಂದು ಡಿ.ಎನ್​.ಜೀವರಾಜ್​​ ಆರೋಪ ಮಾಡಿದ್ದಾರೆ.

ಇದಕ್ಕೆ ತಿರುಗೇಟು ನೀಡಿದ ಟಿ.ಡಿ.ರಾಜೇಗೌಡ ನಾನು ಕಾನೂನು ಪ್ರಕಾರವೇ ಆಸ್ತಿಯನ್ನು ಖರೀದಿ ಮಾಡಿದ್ದೇನೆ. ಆ ತೋಟ ಕೇವಲ 14ರಿಂದ 15 ಕೋಟಿಯಷ್ಟು ಬೆಲೆ ಬಾಳುತ್ತೆ. 270 ಕೋಟಿಯಷ್ಟು ಆಸ್ತಿ ಖರೀದಿಸಿದ್ದಾರೆ ಎಂದು ಆರೋಪಿಸಿದ್ದಾರೆ. 15 ಕೋಟಿಗೂ 270 ಕೋಟಿಗೂ ವ್ಯತ್ಯಾಸ ಗೊತ್ತಿಲ್ವಾ, ಬುದ್ಧಿ ಇಲ್ವಾ? ಎಂದು ವಾಗ್ದಾಳಿ ಮಾಡಿದ್ದಾರೆ.

ರಾಜ್ಯ ಸರ್ಕಾರಕ್ಕೆ 80 ಕೋಟಿ ನಷ್ಟ ಮಾಡಿದ್ದೀನಿ ಎಂದು ಹೇಳುತ್ತಿದ್ದೀರಿ. ಈ ವಿಚಾರವನ್ನು ನಾನು ಇಲ್ಲಿಗೆ ಸುಮ್ಮನೆ ಬಿಡಲ್ಲ. ನಾನು ನಂಬುವ ಧರ್ಮಸ್ಥಳಕ್ಕೆ ಹೋಗಿ ಕೈಮುಗಿಯುತ್ತೇನೆ. ನಾನು ಏನಾದರೂ ಅನ್ಯಾಯ ಮಾಡಿದರೇ ನನಗೆ ತೊಂದರೆಯಾಗಲಿ. ಇಲ್ಲದಿದ್ದರೇ ಅಪಪ್ರಚಾರ ಮಾಡಿದವರನ್ನು ದೇವರೇ ನೋಡಿಕೊಳ್ಳಲಿ. ತಾಕತ್ತಿದ್ದರೆ ಶೃಂಗೇರಿ ಶಾರದಾಂಬೆ, ಧರ್ಮಸ್ಥಳದ ಸನ್ನಿಧಿಗೆ ಬನ್ನಿ. ಇಲ್ಲ ನೀವೇ ದಿನಾಂಕ, ಸಮಯ ನಿಗದಿ ಮಾಡಿ ನಾನು ಬರುತ್ತೇನೆ. ನಾನು ಪ್ರಮಾಣ ಮಾಡುತ್ತೇನೆ, ನೀವೂ ಆಣೆ ಪ್ರಮಾಣ ಮಾಡಿ ಎಂದು ಆಹ್ವಾನಿಸಿದ್ದಾರೆ.

ರಾಜ್ಯ ಮತ್ತಷ್ಟು ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್  ಮಾಡಿ

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ