ವಿಧಾನಸಭೆ ಸ್ಪೀಕರ್ ಆಗಿ ಯುಟಿ ಖಾದರ್ ಸರ್ವಾನುಮತದಿಂದ ಆಯ್ಕೆ, ಸಿದ್ದರಾಮಯ್ಯ-ಬೊಮ್ಮಾಯಿ ಹೇಳಿದ್ದೇನು?

ವಿಧಾನಸಭೆ ನೂತನ ಸ್ವೀಕರ್ ಆಗಿ ಯುಟಿ ಖಾದರ್ ಅವರು ಸರ್ವಾನುಮತದಿಂದ ಇಂದು( ಬುಧವಾರ) ಆಯ್ಕೆಯಾಗಿದ್ದಾರೆ. ಇನ್ನು ನೂತನ ಸ್ಪೀಕರ್​ ಬಗ್ಗೆ ಸಿದ್ದರಾಮಯ್ಯ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಏನೆಲ್ಲ ಹೇಳಿದರು ಎನ್ನುವುದನ್ನು ನೋಡಿ.

ವಿಧಾನಸಭೆ ಸ್ಪೀಕರ್ ಆಗಿ ಯುಟಿ ಖಾದರ್ ಸರ್ವಾನುಮತದಿಂದ ಆಯ್ಕೆ, ಸಿದ್ದರಾಮಯ್ಯ-ಬೊಮ್ಮಾಯಿ ಹೇಳಿದ್ದೇನು?
ವಿಧಾನಸಭೆ ನೂತನ ಸ್ಪೀಕರ್ ಯುಟಿ ಖಾದರ್​ಗೆ ಅಭಿನಂದಿಸಿದ ಸಿಎಂ, ಡಿಸಿಎಂ
Follow us
|

Updated on: May 24, 2023 | 12:26 PM

ಬೆಂಗಳೂರು: ನಿರೀಕ್ಷೆಯಂತೆ ಯುಟಿ ಖಾದರ್ (UT Khader) ಅವರು ಸರ್ವಾನುಮತದಿಂದ ನೂತನ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ. ಇನ್ನು ಇಂದು(ಮೇ 24) ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಶಾಸಕ ಯುಟಿ ಖಾದರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ಪ್ರಸ್ತಾವನೆ ಮಾಡಿದರು. ಸಿಎಂ ಪ್ರಸ್ತಾವವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅನುಮೋದಿಸಿದರು. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪೀಕರ್​ ಯುಟಿ ಖಾದರ್ ಅವರಿಗೆ ಅಭಿನಂದಿಸಿ ಅವರು ನಡೆಬಂದ ರಾಜಕೀಯ ಹಾದಿಯನ್ನು ಮೆಲುಕು ಹಾಕಿದರು. ಅಲ್ಲದೇ ಸ್ಪೀಕರ್​ ಯುಟಿ ಖಾದರ್​​ ಬಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಹ ಮಾತನಾಡಿದರು.

ಇದನ್ನೂ ಓದಿ: Karnataka Breaking Kannada News Live: ವಿಧಾನಸಭೆ ನೂತನ ಸ್ಪೀಕರ್ ಆಗಿ ಯು.ಟಿ.ಖಾದರ್ ಆಯ್ಕೆ

ಸ್ಪೀಕರ್ ಖಾದರ್ ಬಗ್ಗೆ ಸಿದ್ದರಾಮಯ್ಯ ಮಾತು

ಸಿಎಂ ಸಿದ್ದರಾಮಯ್ಯ ಮಾತನಾಡಿ,  ವಿಧಾನಸಭೆಯಲ್ಲಿ ಅತಿ ಹೆಚ್ಚು ಪ್ರಶ್ನೆ ಕೇಳಿದ್ದಕ್ಕೆ ಯು.ಟಿ.ಖಾದರ್​ ಅವರಿಗೆ ಸದನವೀರ ಪ್ರಶಸ್ತಿಯೂ ಸಿಕ್ಕಿತ್ತು. ವಿಪಕ್ಷ ಉಪನಾಯಕರಾಗಿಯೂ ಯು.ಟಿ.ಖಾದರ್​ ಉತ್ತಮ ಕೆಲಸ ಮಾಡಿದ್ದಾರೆ. ಯು.ಟಿ.ಖಾದರ್ ಅಧ್ಯಕ್ಷತೆಯಲ್ಲಿ ಸದನ ಮೇಲ್ಮಟ್ಟಕ್ಕೆ ಹೋಗಲಿ. ಖಾದರ್​ ಬಹಳ ತಾಳ್ಮೆ ವ್ಯಕ್ತಿ, ಆ ತಾಳ್ಮೆಯನ್ನು ಕಳೆದುಕೊಳ್ಳಬೇಡಿ ಎಂದು ಸಲಹೆ ನೀಡಿದರು.

ವಿಧಾನಸಭೆಯಲ್ಲಿ ರಾಜ್ಯದ ಜನರ ಸಮಸ್ಯೆ ಬಗ್ಗೆ ಚರ್ಚಿಸಬೇಕು. ನಾಡಿನ ಅಭಿವೃದ್ಧಿ, 7 ಕೋಟಿ ಕನ್ನಡಿಗರ ಹಿತರಕ್ಷಣೆ ಆಗಬೇಕು. ರಾಜ್ಯದ ಜಿಡಿಪಿ ಬೆಳವಣಿಗೆ ಕೂಡ ಆಗಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲೊ್ಲಿ ಸ್ಪೀಕರ್ ಸ್ಥಾನ ಅತ್ಯುನ್ನತವಾದದ್ದು. ಸದನದಲ್ಲಿ ನಾವು ಬಹಳ ಹೆಚ್ಚರಿಕೆಯಿಂದ ಪದ ಬಳಕೆ ಮಾಡಬೇಕು. ಆಡಳಿತ, ವಿರೋಧ ಪಕ್ಷದ ಸದಸ್ಯರು ಚರ್ಚೆಯಲ್ಲಿ ಭಾಗವಹಿಸಬೇಕು ಎಂದರು.

ನೂತನ ಸ್ಪೀಕರ್​ ಬಗ್ಗೆ ಬೊಮ್ಮಾಯಿ ಹೇಳಿದ್ದೇನು?

ಇನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಹ ನೂತನ ಸ್ಪೀಕರ್​ ಖಾದರ್​ಗೆ ಅಭಿನಂದನೆ ತಿಳಿಸಿ ಮಾತನಾಡಿದ ಅವರು, ಕರ್ನಾಟಕದ ವಿಧಾನಮಂಡಲಕ್ಕೆ ತನ್ನದೇ ಆದ ಇತಿಹಾಸವಿದೆ. ಇಡೀ ದೇಶಕ್ಕೆ ಮಾರ್ಗದರ್ಶನ ನೀಡಿದ ವಿಧಾನಮಂಡಲವಿದು, ಯು.ಟಿ.ಖಾದರ್​ ಶಾಸಕರಾಗಿ, ಸಚಿವರಾಗಿ ಕೆಲಸ ಮಾಡಿದ್ದಾರೆ. ಯು.ಟಿ.ಖಾದರ್ ವಿಪಕ್ಷ ಉಪನಾಯಕರಾಗಿಯೂ ಉತ್ತಮ ಕೆಲಸ ಮಾಡಿದ್ದಾರೆ. ಈ ಹಿಂದೆ ಸ್ಪೀಕರ್​ಗಳು ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ ಎಂದು ತಿಳಿಸಿದರು.

ನ್ಯಾಯಾಂಗಕ್ಕಿಂತ ಎತ್ತರವಾದದ್ದು ಸ್ಪೀಕರ್​ ಸ್ಥಾನ. ಹಾಗಾಗಿ ನಿಷ್ಪಕ್ಷಪಾತವಾಗಿ ತಾವು ಸದನವನ್ನು ನಡೆಸಬೇಕು. ಪ್ರತಿಪಕ್ಷ ಸದಸ್ಯರ ಹೇಳಿಕೆಗೆ ಸ್ಪೀಕರ್​ ಹೆಚ್ಚು ಅವಕಾಶ ಕೊಡಬೇಕು. ಚರ್ಚೆ ವೇಳೆ ಕೊನೆಯ ಸಾಲಿನವರಿಗೆ ಹೆಚ್ಚು ಅವಕಾಶ ಕೊಡಬೇಕು. ಸ್ಪೀಕರ್ ಹೊಸ ವಿಚಾರಕ್ಕೆ ಅವಕಾಶ ಮಾಡಿಕೊಡುವ ವಿಶ್ವಾಸವಿದ್ದು, ಎಲ್ಲರನ್ನೂ ಸಮಾನವಾಗಿ ತೆಗೆದುಕೊಂಡು ಹೋಗುವ ಶಕ್ತಿ ನಿಮ್ಮಲ್ಲಿದೆ ಎಂದು ಹೇಳಿದರು.

ನೂತನ ಸ್ಪೀಕರ್​ಗೆ ಡಿಕೆ ಶಿವಕುಮಾರ್ ಅಭಿನಂದನೆ ಮಾತುಗಳು

ನೂತನ ಸ್ಪೀಕರ್ ಯು.ಟಿ.ಖಾದರ್​ಗೆ ಅಭಿನಂದನೆ ತಿಳಿಸಿದ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಯು.ಟಿ.ಖಾದರ್​ರನ್ನು ಸೇವಾದಳ ಕಾರ್ಯಕರ್ತನಾಗಿ ನೋಡಿದ್ದೇನೆ. ಸ್ಪೀಕರ್ ಸ್ಥಾನ ಬಹಳ ಶ್ರೇಷ್ಠವಾದದ್ದು. ಈ ಹಿಂದೆ ರಮೇಶ್ ಕುಮಾರ್ ಯುವ ಶಾಸಕರನ್ನು ಎಬ್ಬಿಸುತ್ತಿದ್ದರು. ನಾವು ತಪ್ಪು ಮಾಡದಂತೆ ವಿಪಕ್ಷದವರು ಎಚ್ಚರಿಕೆ ಕೊಡುತ್ತಿರಲಿ. ಕೋಮು ಸೌಹಾರ್ದತೆಗೆ ಮತ್ತೊಂದು ಹೆಸರು ಯು.ಟಿ.ಖಾದರ್​. ಎಲ್ಲರಿಗೂ ನೀವು ನ್ಯಾಯ ಒದಗಿಸಿ. ನಾವು ತಪ್ಪು ಮಾಡಿದರೂ ಸ್ಪೀಕರ್ ತಿದ್ದಿ ನಡೆಸಲಿ. ಸಭಾಧ್ಯಕ್ಷರು ಎಲ್ಲರನ್ನೂ ಸಮಾನವಾಗಿ ನೋಡಿ ಎಂದರು.

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ