AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಸ್ಪಷ್ಟನೆ ನೀಡಿದ ಜಗದೀಶ್ ಶೆಟ್ಟರ್, ಅಂತೆ-ಕಂತೆಗಳಿಗೆ ತೆರೆ

ಮುಂದಿನ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರೆ ಎನ್ನುವ ಅಂತೆ-ಕಂತೆಗಳೀಗೆ ಮಾಜಿ ಮುಖ್ಯಮಂತ್ರಿ , ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಜಗದೀಶ್ ಶೆಟ್ಟರ್​ ತೆರೆ ಎಳೆದಿದ್ದಾರೆ.

ಮುಂದಿನ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಸ್ಪಷ್ಟನೆ ನೀಡಿದ ಜಗದೀಶ್ ಶೆಟ್ಟರ್, ಅಂತೆ-ಕಂತೆಗಳಿಗೆ ತೆರೆ
ಜಗದೀಶ್ ಶೆಟ್ಟರ್Image Credit source: File
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Jul 26, 2023 | 2:44 PM

Share

ಕೊಪ್ಪಳ, (ಜುಲೈ 26): ಮುಂದಿನ ಲೋಕಸಭೆ ಚುನಾವಣೆಗೆ (Loksabha Poll 2024) ಜಗದೀಶ್ ಶೆಟ್ಟರ್(Jagadish Shettar)​ ಸ್ಪರ್ಧೆ ಮಾಡುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. 2024ರಲ್ಲಿ ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಕಣಕ್ಕಿಳಿಯುತ್ತಾರೆ ಎನ್ನುವ ಮಾತುಗಳು ಕೇಳಿಬರುತ್ತಿದ್ದು, ಇದೀಗ ಇದಕ್ಕೆ ಸ್ವತಃ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್​ ಪ್ರತಿಕ್ರಿಯಿಸಿ ಸ್ಪಷ್ಟನೆ ನೀಡಿದ್ದಾರೆ. ಕೊಪ್ಪಳದಲ್ಲಿ ಇಂದು(ಜುಲೈ 26) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ನಾಯಕರು ಏನು ಸೂಚನೆ ಕೊಡುತ್ತಾರೋ ಅದನ್ನು ಪಾಲನೆ ಮಾಡುತ್ತೇನೆ. ಪಕ್ಷ ಏನು ಜವಾಬ್ದಾರಿ ನೀಡುತ್ತೋ‌ ಅದನ್ನ ನಿಭಾಯಿಸುತ್ತೆನೆ. ಲೋಕಸಭೆ ಚುನಾವಣೆಯ ಬಗ್ಗೆ ಎಲ್ಲೂ ಚರ್ಚೆ ಆಗಿಲ್ಲ ಎಂದು ಹೇಳಿದರು. ಈ ಮೂಲಕ ಎಲ್ಲಾ ಅಂತೆ-ಕಂತೆಗಳಿಗೆ ತೆರೆ ಎಳೆದರು.

ಇದನ್ನೂ ಓದಿ: ಆಪರೇಷನ್ ಹಸ್ತ ಚುರುಕು, ಧಾರವಾಡ ಜಿಲ್ಲೆಯಲ್ಲಿ ರಾಜಕೀಯ ಸಂಚಲನ, ಮಾಜಿ ಸಿಎಂ ಯಡಿಯೂರಪ್ಪಗೆ ಆಘಾತ

ರಾಜ್ಯದಲ್ಲಿ ಕನಿಷ್ಠ ಅಂದ್ರೂ 15 ಸ್ಥಾನ ಗೆಲ್ಲುತ್ತೇವೆ. ಅದು 20 ಸ್ಥಾನಕ್ಕೂ ಹೋಗಬಹುದು. ಧಾರವಾಡ ಸೇರಿದಂತೆ ಪಕ್ಷ ಗೆಲ್ಲಿಸುವಂತ ಕೆಲಸ ಮಾಡುತ್ತೇನೆ. ನನಗೆ ಕಾಂಗ್ರೆಸ್ ಪಕ್ಷ ಎಂಎಲ್ ಸಿ ಮಾಡಿ ಗೌರವದಿಂದ ನಡೆಸಿಕೊಳ್ಳುತ್ತಿದೆ. ಇನ್ನು ಹೆಚ್ಚಿನ ಸ್ಥಾನಮಾನ ಕೊಡು್ತತೇನೆ ಎಂದಿದ್ದಾರೆ. ಒಮ್ಮೆ ಸ್ವಾಭಿಮಾನಕ್ಕೆ ಧಕ್ಕೆಯಾಗಿ ಹೊರಬಂದವರು. ಮರಳಿ ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದರು.

ರಾಜ್ಯದಲ್ಲಿ ಬಿಜೆಪಿ ಸ್ಥಿತಿ ಏನಾಗಿದೆ ? 66 ಸ್ಥಾನಗಳಿಗೆ ಸ್ಥಾನಗಳಿಗೆ ಕುಸಿದಿದ್ದಾರೆ. ಓರ್ವ ವಿಪಕ್ಷ ನಾಯಕರನ್ನ ನೇಮಿಸಲು ಆಗುತ್ತಿಲ್ಲ. ಪಕ್ಷದ ರಾಜ್ಯಾಧ್ಯಕ್ಷರ ಅವಧಿ ಮುಗಿದಿದ್ದರೂ ಹೊಸ ಅಧ್ಯಕ್ಷರ ನೇಮಕ ಮಾಡುತ್ತಿಲ್ಲ. ರಾಜ್ಯದಲ್ಲಿ ಬಿಜೆಪಿಗೆ ಲೀಡರ್ ಗಳೇ ಸಿಗುತ್ತಿಲ್ಲ. ಯಾವ ಪಕ್ಷದಲ್ಲಿಯೂ ಸಿದ್ದಾಂತ, ನೈತಿಕತೆ ಉಳಿದಿಲ್ಲ. ಬಿಜೆಪಿಯವರು ರೌಡಿ ಶೀಟರ್ ಗಳನ್ನ ಎಲೆಕ್ಷನ್ ನಿಲ್ಲಿಸುತ್ತಾರೆ. ಏನು ಉಳಿದಿದೆ ಆ ಪಕ್ಷದಲ್ಲಿ ಎಂದು ಪ್ರಶ್ನಿಸಿದರು.

ಇನ್ನು ಇದೇ ವೇಳೆ ಕೆಲ ಶಾಸಕರು ಸಿಎಂಗೆ ದೂರು ನೀಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅದರ ಬಗ್ಗೆ ಈಗಾಗಲೇ ಅವರೇ ಸ್ಪಷ್ಟೀಕರಣ ಕೊಟ್ಟಿದ್ದಾರೆ. ಕೆಲವರು ನಕಲಿ ಪತ್ರ ಮಾಡಿದ್ದರೆಂದು ಹೇಳಿದ್ದಾರೆ. ಈಗ ಸಿಎಲ್ ಪಿ ಸಭೆ ಕರೆದಿದ್ದಾರೆ. ಅದು ಪಕ್ಷದ ಆಂತರಿಕ ವಿಚಾರ. ಸಭೆ ಆಗಬೇಕಿತ್ತು,ಕೆಲವೊಂದು ಕಾರಣಕ್ಕೆ ಮೂಂದಡಲಾಗಿತ್ತು ಎಂದು ತಿಳಿಸಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ