AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಗೆ ಹುದ್ದೆ ತ್ಯಾಗ ಮಾಡಿದ ಪುತ್ರ ಗಣೇಶ್: ಮಗನಿಂದಲೇ ಈ ಅಧಿಕಾರ ಸಿಕ್ಕಿದೆ ಎಂದು ಸಂತಸಗೊಂಡ ಪ್ರಕಾಶ್ ಹುಕ್ಕೇರಿ

ಶಾಸಕ ಗಣೇಶ್ ಹುಕ್ಕೇರಿ ಅವರು ತಂದೆ ಪ್ರಕಾಶ್ ಹುಕ್ಕೇರಿಗಾಗಿ ಹುದ್ದೆ ತ್ಯಾಗ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕಾಶ್ ಹುಕ್ಕೇರಿ ಸಂತಸಗೊಂಡಿದ್ದು, ಮಗನಿಂದಲೇ ಈ ಅಧಿಕಾರ ಸಿಕ್ಕಿದೆ ಎಂದು ಹೇಳಿದ್ದಾರೆ.

ತಂದೆಗೆ ಹುದ್ದೆ ತ್ಯಾಗ ಮಾಡಿದ ಪುತ್ರ ಗಣೇಶ್: ಮಗನಿಂದಲೇ ಈ ಅಧಿಕಾರ ಸಿಕ್ಕಿದೆ ಎಂದು ಸಂತಸಗೊಂಡ ಪ್ರಕಾಶ್ ಹುಕ್ಕೇರಿ
ಪ್ರಕಾಶ್ ಹುಕ್ಕೇರಿ
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Edited By: |

Updated on:Aug 15, 2023 | 12:29 PM

Share

ಬೆಳಗಾವಿ, (ಆಗಸ್ಟ್ 15): ವಿಧಾನ ಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ (prakash hukkeri) ಅವರನ್ನು ದೆಹಲಿಯ ಕರ್ನಾಟಕದ ಪ್ರತಿನಿಧಿ-2 ಆಗಿ ನೇಮಕ ಮಾಡಲಾಗಿದೆ. ಪ್ರಕಾಶ್ ಹುಕ್ಕೇರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನದೊಂದಿಗೆ ನೇಮಕ ಮಾಡಲಾಗಿದೆ.  ಮುಂಬರು ಲೋಕಸಭಾ ಚುನಾವಣೆ ದೃಷ್ಟಿಯಿಂದ ಪ್ರಕಾಶ್ ಹುಕ್ಕೇರಿ ಅಥವಾ ಪುತ್ರ ಗಣೇಶ್ ಹುಕ್ಕೇರಿ ಇವರಿಬ್ಬರಲ್ಲಿ ಒಬ್ಬರಿಗೆ ಸೂಕ್ತ ಸ್ಥಾನಮಾನ ನೀಡುವ ಬಗ್ಗೆ ಪಕ್ಷದಲ್ಲಿ ಚರ್ಚೆಗಳು ನಡೆದಿದ್ದವು. ಆದ್ರೆ, ಗಣೇಶ್ ಹುಕ್ಕೇರಿ ಅವರು ತಮ್ಮ ತಂದೆಗೆ ಕೊಟ್ಟ ಸ್ಥಾನಮಾನ ನೀಡಿರೆ ಓಕೆ ಎಂಂದು ನಾಯಕರಿಗೆ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಪುತ್ರನಿಗೆ ಬಿಟ್ಟು ತಂದೆಗೆ ಈ ಸ್ಥಾನಮಾನ ನೀಡಲಾಗಿದೆ. ಇನ್ನು ದೆಹಲಿಯ ಕರ್ನಾಟಕ ಪ್ರತಿನಿಧಿಯಾಗಿ ನೇಮಿಸಿದ್ದಕ್ಕೆ ಪ್ರಕಾಶ್ ಹುಕ್ಕೇರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಮಗನಿಂದಲೇ ಈ ಅಧಿಕಾರ ಸಿಕ್ಕಿದೆ ಎಂದ ಸಂತಸ ವ್ಯಕ್ತಪಡಿಸಿದರು.

ಒಳ್ಳೆಯ ಸ್ಥಾನಮಾನ ಸಿಕ್ಕಿದ್ದು, ಅವಕಾಶ ಮಾಡಿಕೊಟ್ಟ ನಾಯಕರಿಗೆ ಅಭಿನಂದನೆ. ನಾನು 8 ಬಾರಿ ಆಯ್ಕೆಯಾದರೂ ಎಂದೂ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿಲ್ಲ. ನಾನೇನೂ ಸಚಿವ ಸ್ಥಾನ ಬೇಡಿಲ್ಲ. ಈಗಲೂ ಇದೊಂದು ವಿಶೇಷ ಪ್ರಕರಣ ಅಂತಾ ತಿಳಿದಿದ್ದೇನೆ. ತಂದೆಯಾದವ ಮಗನಿಗೆ ಅಧಿಕಾರ ನೀಡುವ ವ್ಯವಸ್ಥೆ ಇದೆ. ಆದ್ರೆ ಮಗ ಇವತ್ತು ಅಪ್ಪನಿಗೆ ಅಧಿಕಾರ ಕೊಡುವ ವ್ಯವಸ್ಥೆ ಮಾಡಿದ್ದಾನೆ. ಇದೊಂದು ವಿಶೇಷ ಅಂತಾ ನಾನು ತಿಳಿದುಕೊಂಡಿದ್ದೇನೆ ಎಂದರು.

ಇದನ್ನೂ ಓದಿ: ದೆಹಲಿಯ ಕರ್ನಾಟಕ ಪ್ರತಿನಿಧಿ ಆಗಿ ಪ್ರಕಾಶ್ ಹುಕ್ಕೇರಿ ನೇಮಕ: ಸಂಪುಟ ದರ್ಜೆ ಸಚಿವ ಸ್ಥಾನಮಾನ

ಗಣೇಶ ಹುಕ್ಕೇರಿ ದೆಹಲಿಗೆ ಹೋಗಿ, ಸಿಎಂ, ಡಿಸಿಎಂಗೆ ಭೇಟಿ ಮಾಡಿ ತನ್ನ ಬದಲಾಗಿ ನನಗೆ ಸ್ಥಾನ ಮಾನ ನೀಡುವಂತೆ ಮನವಿ ಮಾಡಿದ್ದಾರೆ. ಅದರ ಫಲವಾಗಿ ಇವತ್ತು ಸ್ಥಾನಮಾನ ಸಿಕ್ಕಿದೆ . ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕರಿಗೆ ಇರುವ ಸಮಸ್ಯೆ ಬಗೆಹರಿಸುವ ಕೆಲಸ ಪ್ರಾಮಾಣಿಕವಾಗಿ ಮಾಡುವೆ ಎಂದು ಹೇಳಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 12:28 pm, Tue, 15 August 23

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು