AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯ ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ ವಿರುದ್ಧ ಸಭಾಪತಿಗೆ ಕಾಂಗ್ರೆಸ್​ ದೂರು

ಬಿಜೆಪಿ ಎಂಎಲ್ಸಿಗಳಾದ ಎನ್. ರವಿಕುಮಾರ್ ಮತ್ತು ಛಲವಾದಿ ನಾರಾಯಣಸ್ವಾಮಿ ಅವರ ವಿರುದ್ಧ ​ಕಾಂಗ್ರೆಸ್​ನ ಎಂಎಲ್​ಸಿಗಳು ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ದೂರು ನೀಡಿದ್ದಾರೆ. ರವಿಕುಮಾರ್ ಅವರು ಸರ್ಕಾರಿ ಅಧಿಕಾರಿಯನ್ನು ಪಾಕಿಸ್ತಾನಿ ಎಂದು ಕರೆದರೆ, ನಾರಾಯಣಸ್ವಾಮಿ ಅವರು ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ನಿಂದಿಸಿದ್ದಾರೆ ಎಂದು ದೂರಿದ್ದಾರೆ. ಹೀಗಾಗಿ, ಬಿಜೆಪಿಯ ಈ ಇಬ್ಬರು ಪರಿಷತ್​ ಸದಸ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಬಿಜೆಪಿಯ ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ ವಿರುದ್ಧ ಸಭಾಪತಿಗೆ ಕಾಂಗ್ರೆಸ್​ ದೂರು
ಎನ್​ ರವಿಕುಮಾರ್​, ಛಲುವಾದಿ ನಾರಾಯಣಸ್ವಾಮಿ
Anil Kalkere
| Edited By: |

Updated on:Jun 02, 2025 | 5:29 PM

Share

ಬೆಂಗಳೂರು, ಜೂನ್​ 02: ಬಿಜೆಪಿ ಎಂಎಲ್​ಸಿ ಎನ್. ರವಿಕುಮಾರ್ (N Ravikumar) ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಅವರ ವಿರುದ್ಧ ಕಾಂಗ್ರೆಸ್​ ನಾಯಕರು ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ದೂರು ನೀಡಿದ್ದಾರೆ. ಕಾಂಗ್ರೆಸ್ ಎಂಎಲ್​ಸಿಗಳಾದ ಪುಟ್ಟಣ್ಣ, ಸಲೀಂ ಅಹಮ್ಮದ್, ಗೋವಿಂದರಾಜು, ಸುಧಾಮ್ ದಾಸ್, ಶ್ರೀನಿವಾಸ್ ಅವರ ನಿಯೋಗ ದೂರು ನೀಡಿದೆ. ಎನ್. ರವಿಕುಮಾರ್ ಅವರು ಸರ್ಕಾರಿ ಅಧಿಕಾರಿಗೆ ಪಾಕಿಸ್ತಾನಿ ಎಂದಿದ್ದಾರೆ. ಛಲವಾದಿ ನಾರಾಯಣಸ್ವಾಮಿ ಅವರು ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ನಿಂದಿಸಿದ್ದಾರೆ. ಕೂಡಲೇ ಇಬ್ಬರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಈ ರೀತಿಯ ಪದ ಬಳಕೆ ಸರಿಯಲ್ಲ: ಸಲೀಂ ಅಹ್ಮದ್

ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ರವಿಕುಮಾರ್ ಅವರ ಮಾತುಗಳು ಅಸಂಬದ್ಧವಾಗಿವೆ. ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಲಬುರ್ಗಿ ಜಿಲ್ಲಾಧಿಕಾರಿಗಳ ವಿರುದ್ಧ ಆಡಿದ ಮಾತಿನ ಬಗ್ಗೆ ಕ್ರಮ ಜರುಗಿಸಬೇಕು. ಈ ರೀತಿಯ ಪದ ಬಳಕೆ ಸರಿಯಲ್ಲ. ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ವಿಧಾನಸೌಧದಲ್ಲಿ ಪರಿಷತ್ ಸದಸ್ಯ ಸಲೀಂ ಅಹ್ಮದ್ ಆಗ್ರಹಿಸಿದರು.

ನಿಯಮಗಳನ್ನ ಪರಿಶೀಲಿಸಿ ಮುಂದಿನ ಕ್ರಮ: ಹೊರಟ್ಟಿ

ಕಾಂಗ್ರೆಸ್​ ನಾಯಕರು ದೂರು ನೀಡಿದ್ದಾರೆ. ಅದನ್ನು ಸ್ವೀಕರಿಸಿದ್ದೇನೆ. ಸದನದ ನಿಯಮಗಳನ್ನ ಪರಿಶೀಲಿಸಿ ಮುಂದುವರೆಯುತ್ತೇನೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಇದನ್ನೂ ಓದಿ
Image
ಜನರಲ್ಲಿ ಗೊಂದಲ, ಅಶಾಂತಿ ಸೃಷ್ಟಿಸುವುದೇ ಬಿಜೆಪಿ ನಾಯಕರ ಕೆಲಸ: ಸಿದ್ದರಾಮಯ್ಯ
Image
ಭಾರತೀಯ ಮಹಿಳೆಯರ ಏಳಿಗೆ ರವಿಕುಮಾರ್​ಗೆ ಸಹನೆ ಆಗಲ್ಲ: ಪ್ರಿಯಾಂಕ್ ಖರ್ಗೆ
Image
ಅಟ್ರಾಸಿಟಿ ಕೇಸ್​ ಬೆನ್ನಲ್ಲೇ ಹೇಳಿಕೆಗೆ ವಿಷಾದ ವ್ಯಕ್ತಡಿಸಿದ ರವಿಕುಮಾರ್
Image
ಸಿಟಿ ರವಿ, ರವಿ ಕುಮಾರ್​ಗೆ ಶಾಕ್: ಛಲವಾದಿ ನಾರಾಯಣಸ್ವಾಮಿ ವಿಪಕ್ಷ ನಾಯಕ

ಪ್ರಿಯಾಂಕ್ ಖರ್ಗೆ ವಿರುದ್ಧ ನಾರಾಯಣಸ್ವಾಮಿ ವಾಗ್ದಾಳಿ

ನನ್ನ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಏನೇನೋ ಮತನಾಡಿದ್ದಾರೆ. ನನ್ನ ಚಡ್ಡಿ ಹೊರುವ ಗಿರಾಕಿ ಎಂದಿದ್ದರು. ನಾನು ಒಂದು ಸಲ ನಾಯಿ ಪದ ಬಳಸಿದ್ದೆ. ಪ್ರಿಯಾಂಕ್ ಅವರೇ ಈಗ ಲಕ್ಷಾಂತರ ಸಲ ನಾಯಿ ಅಂತ ಹೇಳಿಕೊಳ್ಳುತ್ತಿದ್ದಾರೆ. ಇವರ ಕಾಂಗ್ರೆಸ್​ ಕೋಟೆ ಬಿದ್ದಿದೆ. ಹಾಗಾಗಿ ಈ ರೀತಿ ಮಾತಾಡುತ್ತಿದ್ದಾರೆ. ಅಟ್ರಾಸಿಟಿ ಕೇಸ್  ಹಾಕಿಸುತ್ತಿದ್ದಾರೆ. ನನ್ನ ಹಾಗೂ ರವಿಕುಮಾರ್ ಅವರನ್ನು ಎಮ್​​ಎಲ್​ಸಿ ಸ್ಥಾನದಿಂದ ತೆಗೆಯಿರಿ ಎಂದು ಸಭಾಪತಿಗೆ ದೂರು ಕೊಟ್ಟಿದ್ದಾರೆ. ಹಾಗೆಲ್ಲ ಮಾಡಲು ಆಗುತ್ತಾ? ನಿಮ್ಮ ತಂತ್ರ ಎಲ್ಲ ನನಗೆ ಗೊತ್ತು. ನಿಮ್ಮಿಂದ ಏನೂ ಮಾಡಲು ಆಗಲ್ಲ. ನಾವು ಕಾನೂನು ಬಾಹಿರ ಕೆಲಸ ಮಾಡಿಲ್ಲ. ಅವರ ಗರ್ವಭಂಗ ಮಾಡಲು ಹೊರಟಾಗ ಕಾಂಗ್ರೆಸ್ ನಾಯಕರೇ ನಮಗೆ ಮೆಚ್ಚುಗೆ ಸೂಚಿಸಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ಮಾಡಿದರು.

ಇದನ್ನೂ ಓದಿ: ಬಂಧನದ ಭೀತಿಯಲ್ಲಿದ್ದ ಬಿಜೆಪಿ MLC ರವಿಕುಮಾರ್​ ಗೆ ಕೊಂಚ ರಿಲೀಫ್ ನೀಡಿದ ಕೋರ್ಟ್​

ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಕೆಟ್ಟ ವಾತಾವರಣ ಸೃಷ್ಟಿ ಮಾಡುತ್ತಿದೆ. ಕಾನೂನು ಸುವ್ಯವಸ್ಥೆವನ್ನು ಸಂಪೂರ್ಣವಾಗಿ ಹದಗೆಡಿಸಿದೆ. ಬಿಜೆಪಿಯ ಹಾಗೂ ಹಿಂದೂ ಪರ ಸಂಘಟನೆಗಳ ನಾಯಕರನ್ನು ಟಾರ್ಗೆಟ್ ಮಾಡಿ ತೊಂದರೆ ಕೊಡುವ ಕೆಲಸಕ್ಕೆ ಕೈ ಹಾಕಿದೆ. ಮಂಗಳೂರಿನ ಕೆಲ ಮುಸ್ಲಿಂ ಸಂಘಟನೆಗಳು ಬ್ಲ್ಯಾಕ್​ಮೇಲ್ ಮಾಡಿವೆ. ಈ ಬ್ಲ್ಯಾಕ್​ಮೇಲ್​​ಗೆ ಹೆದರಿ ಗಡಿಪಾರು ಮಾಡುವ ಕೆಲಸ ಮಾಡಿದೆ. ಹಿಂದುತ್ವವಾದಿಗಳ ವಿರುದ್ಧವಾಗಿ ಕೆಲಸ ಮಾಡುವುದು ಆರಂಭವಾಗಿದೆ. ಹಿಂದುತ್ವವಾದಿಗಳನ್ನು ಮುಟ್ಟಿದರೆ ನಾವು ಸರ್ಕಾರವನ್ನು ಮುಟ್ಟಬೇಕಾಗುತ್ತದೆ. ಸರ್ಕಾರ ಎಚ್ಚರಿಕೆಯಿಂದ ಮುಂದೆ ಹೋಗಬೇಕು ಎಂದು ಎಚ್ಚರಿಕೆ ನೀಡಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:22 pm, Mon, 2 June 25

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು