AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಕ್ಷ ವಿಸರ್ಜಿಸುತ್ತೇನೆ ಎಂದವರು ಜಾತ್ಯತೀತತೆಯನ್ನೇ ವಿಸರ್ಜಿಸಿದ್ದಾರೆ; ಬಿಜೆಪಿ, ಜೆಡಿಎಸ್​ ಮೈತ್ರಿಗೆ ಕಾಂಗ್ರೆಸ್ ವ್ಯಂಗ್ಯ

JDS BJP Alliance; ಜೆಡಿಎಸ್ ಇಂದು ಅಧಿಕೃತವಾಗಿ ಎನ್​ಡಿಎ ಮೈತ್ರಿಕೂಟದೊಳಗೆ ವಿಲೀನವಾಗಿದೆ. ಇನ್ಮುಂದೆ ಜೆಡಿಎಸ್ ಪಕ್ಷವು ತನ್ನ ಹೆಸರಿನ ಮುಂದಿರುವ ‘ಸೆಕ್ಯೂಲರ್’ ಪದವನ್ನು ಕೈಬಿಡುವುದು ಒಳ್ಳೆಯದು. ಕೇವಲ ಜೆಡಿ ಎಂದು ಇಟ್ಟುಕೊಳ್ಳಬಹುದು. ಇಲ್ಲವೇ KD ಎಂದು ಬದಲಿಸಿಕೊಳ್ಳಬಹುದು. ಕೆ.ಡಿ. ಅಂದರೆ ಅಪಾರ್ಥ ಬೇಡ! ಕೆ.ಡಿ. ಅಂದರೆ ಕಮಲ ದಳ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.

ಪಕ್ಷ ವಿಸರ್ಜಿಸುತ್ತೇನೆ ಎಂದವರು ಜಾತ್ಯತೀತತೆಯನ್ನೇ ವಿಸರ್ಜಿಸಿದ್ದಾರೆ; ಬಿಜೆಪಿ, ಜೆಡಿಎಸ್​ ಮೈತ್ರಿಗೆ ಕಾಂಗ್ರೆಸ್ ವ್ಯಂಗ್ಯ
ಪ್ರಾತಿನಿಧಿಕ ಚಿತ್ರ
Ganapathi Sharma
|

Updated on: Sep 22, 2023 | 8:02 PM

Share

ಬೆಂಗಳೂರು, ಸೆಪ್ಟೆಂಬರ್ 22: ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಕರ್ನಾಟಕದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ (JDS BJP Alliance) ಮಾಡಿಕೊಂಡಿರುವುದನ್ನು ಕಾಂಗ್ರೆಸ್ (Congress) ವ್ಯಂಗ್ಯವಾಡಿದೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ಪಕ್ಷ ವಿಸರ್ಜಿಸುತ್ತೇನೆ ಎಂದವರು ಜಾತ್ಯತೀತತೆಯನ್ನೇ ವಿಸರ್ಜಿಸಿದ್ದಾರೆ ಎಂದು ಟೀಕಿಸಿದೆ. ಶುಕ್ರವಾರ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಜತೆ ಮಾತುಕತೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ, ಮೈತ್ರಿ ವಿಚಾರವನ್ನು ಅಂತಿಮಗೊಳಿಸಿರುವುದಾಗಿ ಹೇಳಿದ್ದರು. ಇದರ ಬೆನ್ನಲ್ಲೇ ಕಾಂಗ್ರೆಸ್ ಟೀಕಾ ಪ್ರಹಾರ ನಡೆಸಿದೆ.

‘ಜೆಡಿಎಸ್ ಇಂದು ಅಧಿಕೃತವಾಗಿ ಎನ್​ಡಿಎ ಮೈತ್ರಿಕೂಟದೊಳಗೆ ವಿಲೀನವಾಗಿದೆ. ಇನ್ಮುಂದೆ ಜೆಡಿಎಸ್ ಪಕ್ಷವು ತನ್ನ ಹೆಸರಿನ ಮುಂದಿರುವ ‘ಸೆಕ್ಯೂಲರ್’ ಪದವನ್ನು ಕೈಬಿಡುವುದು ಒಳ್ಳೆಯದು. ಕೇವಲ ಜೆಡಿ ಎಂದು ಇಟ್ಟುಕೊಳ್ಳಬಹುದು. ಇಲ್ಲವೇ KD ಎಂದು ಬದಲಿಸಿಕೊಳ್ಳಬಹುದು. ಕೆ.ಡಿ. ಅಂದರೆ ಅಪಾರ್ಥ ಬೇಡ! ಕೆ.ಡಿ. ಅಂದರೆ ಕಮಲ ದಳ! ಪಕ್ಷ ವಿಸರ್ಜಿಸುತ್ತೇನೆ ಎಂದವರು ಜಾತ್ಯತೀತತೆಯನ್ನು ವಿಸರ್ಜಿಸಿದ್ದಾರೆ, ಅಭಿನಂದನೆಗಳು’ ಎಂದು ಕಾಂಗ್ರೆಸ್ ಉಲ್ಲೇಖಿಸಿದೆ.

ಇದನ್ನೂ ಓದಿ: ಎನ್​ಡಿಎ ಒಕ್ಕೂಟ ಸೇರಿದ ಜೆಡಿಎಸ್: ಯಾರು ಏನಂದ್ರು?

ಸೆಕ್ಯುಲರ್ ಪದ ತೆಗೆದುಹಾಕಲಿ; ಚಲುವರಾಯಸ್ವಾಮಿ

2024ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಮೈತ್ರಿ ವಿಚಾರವಾಗಿ ಪ್ರತಿಕ್ರಿಯಿಸಿದ ಕೃಷಿ ಇಲಾಖೆಯ ಸಚಿವ ಚಲುವರಾಯಸ್ವಾಮಿ, ಜೆಡಿಎಸ್‌ ಹೆಸರಿನಲ್ಲಿರುವ ಸೆಕ್ಯುಲರ್ ಅನ್ನೋ ಪದವನ್ನು ತೆಗೆದು ಹಾಕಲಿ ಎಂದು ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಜನತಾ ಪರಿವಾರ ಹುಟ್ಟಿದ ಬಳಿಕ ಎಂದೂ ಇಂಥ ನಿರ್ಧಾರ ಕೈಗೊಂಡಿರಲಿಲ್ಲ. ಈಗ ಜೆಡಿಎಸ್​​ನವರು ಬಿಜೆಪಿ ಜತೆ ಹೋಗಿದ್ದಾರೆ ಅಂದರೆ, ಅದರಲ್ಲೇ ಅರ್ಥ ಆಗುತ್ತದೆ. ಅವರಿಗೆ ಇವರ ಅವಶ್ಯಕತೆ ಇತ್ತು, ಇವರಿಗೆ ಅವರ ಅವಶ್ಯಕತೆ ಇತ್ತು ಎಂದು ಹೇಳಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ