AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇ ಮೊದಲ ಬಾರಿ ಸರ್ಕಾರದ ನೀತಿ ನಿರ್ಧಾರ ಸಮರ್ಥಿಸಲು ಸೇವಾ ಮುಖ್ಯಸ್ಥರು ಮುಂದಾಗಿದ್ದಾರೆ: ಅಗ್ನಿಪಥ್​​ ಬಗ್ಗೆ ಖರ್ಗೆ ವಾಗ್ದಾಳಿ

75 ವರ್ಷದ ಇತಿಹಾಸದಲ್ಲಿ ಇದೇ ಮೊದಲ ಬಾರಿ ಸರ್ಕಾರದ ನೀತಿ ನಿರ್ಧಾರವನ್ನು ಸಮರ್ಥಿಸಲು ಸೇವಾ ಮುಖ್ಯಸ್ಥರು ಮುಂದಾಗಿದ್ದಾರೆ. ಅಗ್ನಿಪಥ ಯೋಜನೆ ಬಗ್ಗೆ ಪ್ರಧಾನಿ, ಗೃಹ ಸಚಿವರು ಮತ್ತು ರಕ್ಷಣಾ ಸಚಿವರು ಏಕೆ ಮೌನವಾಗಿದ್ದಾರೆ?

ಇದೇ ಮೊದಲ ಬಾರಿ ಸರ್ಕಾರದ ನೀತಿ ನಿರ್ಧಾರ ಸಮರ್ಥಿಸಲು ಸೇವಾ ಮುಖ್ಯಸ್ಥರು ಮುಂದಾಗಿದ್ದಾರೆ: ಅಗ್ನಿಪಥ್​​ ಬಗ್ಗೆ ಖರ್ಗೆ ವಾಗ್ದಾಳಿ
ಮಲ್ಲಿಕಾರ್ಜುನ ಖರ್ಗೆ
TV9 Web
| Edited By: |

Updated on: Jun 20, 2022 | 2:48 PM

Share

ದೆಹಲಿ: ಅಗ್ನಿಪಥ್ ಯೋಜನೆಯನ್ನು (Agnipath scheme)  ಹಿಂಪಡೆಯುವುದಿಲ್ಲ ಎಂದು ಸೇನಾಪಡೆಯ ಮುಖ್ಯಸ್ಥರು ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ ನಂತರ ಕಾಂಗ್ರೆಸ್ ಸಂಸದ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಸೋಮವಾರ ಮೋದಿ ಸರ್ಕಾರ (Modi Govt) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಗ್ನಿಪಥ್ ಯೋಜನೆ ವಿರುದ್ಧ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಯೋಜನೆಯ ಪ್ರಯೋಜನ ಮತ್ತು ಅಗ್ನಿವೀರರಿಗೆ ನೀಡುವ ತರಬೇತಿ, ಅನುಕೂಲಗಳ ಬಗ್ಗೆ ವಾಯುಸೇನೆ, ಸೇನಾಪಡೆ ಮತ್ತು ನೌಕಾಪಡೆ ಮುಖ್ಯಸ್ಥರು ಸುದ್ದಿಗೋಷ್ಠಿ ನಡೆಸಿ ಹೇಳಿದ್ದರು. ಈ ಬಗ್ಗೆ ವಾಗ್ದಾಳಿ ನಡೆಸಿದ ಖರ್ಗೆ, 75 ವರ್ಷದ ಇತಿಹಾಸದಲ್ಲಿ ಇದೇ ಮೊದಲ ಬಾರಿ ಸರ್ಕಾರದ ನೀತಿ ನಿರ್ಧಾರವನ್ನು ಸಮರ್ಥಿಸಲು ಸೇವಾ ಮುಖ್ಯಸ್ಥರು ಮುಂದಾಗಿದ್ದಾರೆ. ಅಗ್ನಿಪಥ ಯೋಜನೆ ಬಗ್ಗೆ ಪ್ರಧಾನಿ, ಗೃಹ ಸಚಿವರು ಮತ್ತು ರಕ್ಷಣಾ ಸಚಿವರು ಏಕೆ ಮೌನವಾಗಿದ್ದಾರೆ? ಎಂದು ಟ್ವೀಟ್ ಮಾಡಿದ್ದಾರೆ. ಭಾನುವಾರ, ಸೇವಾ ಮುಖ್ಯಸ್ಥರು ಪ್ರತಿಭಟನಾಕಾರರಿಗೆ ಎಚ್ಚರಿಕೆಯನ್ನು ಕಳುಹಿಸಿದ್ದಾರೆ. “ಅಗ್ನಿಪಥ್ ಯೋಜನೆಯ ಮೂಲಕ ಸಶಸ್ತ್ರ ಪಡೆಗಳನ್ನು ಸೇರಲು ಬಯಸುವ ಪ್ರತಿಯೊಬ್ಬ ವ್ಯಕ್ತಿಯು ಯಾವುದೇ ಪ್ರತಿಭಟನೆಯ ಭಾಗವಾಗಿಲ್ಲ ಅಥವಾ ಯಾವುದೇ ಹಿಂಸಾಚಾರದಲ್ಲಿ ಭಾಗಿಯಾಗಿಲ್ಲ ಎಂದು ಪ್ರತಿಜ್ಞೆ ಸಲ್ಲಿಸಬೇಕು. ಪೊಲೀಸ್ ಪರಿಶೀಲನೆ ಇಲ್ಲದೆ ಯಾರೂ ಪಡೆಗಳನ್ನು ಸೇರಲು ಸಾಧ್ಯವಿಲ್ಲ. ನಾವು ನಿಬಂಧನೆಗಳನ್ನು ಮಾಡಿದ್ದೇವೆ ಎಂದು ಸೇನಾ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಲೆಫ್ಟಿನೆಂಟ್ ಜನರಲ್ ಅನಿಲ್ ಪುರಿ ಹೇಳಿದ್ದಾರೆ.

ಭಾರತೀಯ ಸಶಸ್ತ್ರ ಪಡೆಗಳ ಅಡಿಪಾಯ ಶಿಸ್ತು. ಅಲ್ಲಿ ಬೆಂಕಿ ಹಚ್ಚಲು ಜಾಗವಿಲ್ಲ. ನಿಮ್ಮ ಕೋಪವನ್ನು ತೋರಿಸಿ ಮಾತುಕತೆಯಲ್ಲಿ ತೊಡಗಿದರೆ ತೊಂದರೆ ಇಲ್ಲ. ಆದರೆ ಬೆಂಕಿ ಹಚ್ಚುವುದು ಮತ್ತು ವಿಧ್ವಂಸಕ ಕೃತ್ಯಗಳಿಗೆ ಅವಕಾಶವಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ
Image
Agnipath Protest: ಅಗ್ನಿಪಥ್ ಯೋಜನೆಯಡಿ ನೇಮಕಗೊಳ್ಳುವ ಅಗ್ನಿವೀರರಿಗೆ ಸ್ಪೆಷಲ್ ಆಫರ್ ನೀಡಿದ ಆನಂದ್ ಮಹೀಂದ್ರಾ
Image
Agnipath Protests: ಅಗ್ನಿಪಥ್ ವಿರೋಧಿಸಿ ಪ್ರತಿಭಟನೆ: ದೇಶದ ವಿವಿಧೆಡೆ 1000 ಮಂದಿ ಬಂಧನ
Image
ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಗೆ ಹೆಚ್ಚು‘ವರಿ’ಯಾದ ಅಭ್ಯರ್ಥಿಗಳು, ಎಲ್ಲರೂ ಕಣದಲ್ಲಿದ್ದಾರೆ! ಮುಂದೇನು?

ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ಅಮಿತ್ ಶಾ ಅವರು ಶನಿವಾರ ಗೃಹ ಮತ್ತು ರಕ್ಷಣಾ ಸಚಿವಾಲಯದಲ್ಲಿ ಯೋಜನೆಯ ನೇಮಕಾತಿಗಾಗಿ ಮೀಸಲಾತಿಯನ್ನು ಘೋಷಿಸಿದ್ದಾರೆ. ಹೊಸ ಯೋಜನೆಯು ಸಶಸ್ತ್ರ ಪಡೆಗಳಲ್ಲಿನ ಸರಾಸರಿ ವಯಸ್ಸನ್ನು ತಗ್ಗಿಸುವ ಗುರಿಯನ್ನು ಹೊಂದಿದೆ ಎಂದು ಸರ್ಕಾರ ಒತ್ತಿಹೇಳಿದೆ.

ಈ ಹಿಂದೆ ಹೈದರಾಬಾದ್ ಸಂಸದ ಮತ್ತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕೇಂದ್ರದ ಮೇಲೆ ಇದೇ ರೀತಿಯ ವಾಗ್ದಾಳಿ ನಡೆಸಿದ್ದರು. “ದಯವಿಟ್ಟು ಸೇನಾ ಮುಖ್ಯಸ್ಥರ ಹಿಂದೆ ಅಡಗಿಕೊಳ್ಳುವುದನ್ನು ನಿಲ್ಲಿಸಿ ಮಿಸ್ಟರ್ ಮೋದಿ. ನಿಮ್ಮ ಅಜಾಗರೂಕ ನಿರ್ಧಾರದ ಹೊಣೆ ತೆಗೆದುಕೊಳ್ಳುವ ಮತ್ತು ಪರಿಣಾಮಗಳನ್ನು ಎದುರಿಸುವ ಧೈರ್ಯ ತೋರಿಸಿ. ತಮ್ಮ ಭವಿಷ್ಯದ ಬಗ್ಗೆ ದೇಶದ ಯುವಕರ ಕೋಪವು ನಿಮ್ಮನ್ನು ನಿರ್ದೇಶಿಸುತ್ತದೆ ಮತ್ತು ನಿಮಗೆ ಮಾತ್ರ ಎಂದು ಟ್ವೀಟ್ ಮಾಡಿದ್ದರು.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್