AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ನವರು ಪಾರ್ಟ್​ ಟೈಂ ಹಿಂದೂಗಳು: ಪ್ರಹ್ಲಾದ ಜೋಶಿ

ಕೇಂದ್ರ ಸಚಿವ ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸುತ್ತಾ, ಕಾಂಗ್ರೆಸ್​ನವರು ಪಾರ್ಟ್​ ​ಟೈಂ ಹಿಂದೂಗಳು. ಕಾಂಗ್ರೆಸ್ ಯಾವಾಗಲೂ ಹಿಂದೂ ವಿರೋಧಿ ಪಕ್ಷ. ಸಿದ್ದರಾಮಯ್ಯ ಜೈಲಿಗೆ ಹೋಗ್ತಾರೆ ಎಂದು ಭವಿಷ್ಯ ಹೇಳಲ್ಲ. ಆದರೆ ನೈತಿಕವಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು‌ ಎಂದು ಆಗ್ರಹಿಸಿದರು.

ಕಾಂಗ್ರೆಸ್​ನವರು ಪಾರ್ಟ್​ ಟೈಂ ಹಿಂದೂಗಳು: ಪ್ರಹ್ಲಾದ ಜೋಶಿ
ಸಚಿವ ಪ್ರಹ್ಲಾದ್​ ಜೋಶಿ
ಶಿವಕುಮಾರ್ ಪತ್ತಾರ್
| Edited By: ವಿವೇಕ ಬಿರಾದಾರ|

Updated on:Sep 01, 2024 | 2:34 PM

Share

ಹುಬ್ಬಳ್ಳಿ, ಸೆಪ್ಟೆಂಬರ್​ 1: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸೋಮವಾರ ಮೈಸೂರಿಗೆ ತೆರಳಲಿದ್ದು, ತಾಯಿ ಚಾಮುಂಡೇಶ್ವರಿ (Chamundeshwari) ಆಶಿರ್ವಾದ ಪಡೆಯಲಿದ್ದಾರೆ. ಈ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ (Pralhad Joshi) ಮಾತನಾಡಿ, ಕಾಂಗ್ರೆಸ್​ನವರು ಪಾರ್ಟ್​ ಟೈಂ ಹಿಂದೂಗಳು ಎಂದು ಲೇವಡಿ ಮಾಡಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಯಾವಾಗಲೂ ಹಿಂದೂ ವಿರೋಧಿ ಪಕ್ಷ ಎಂದು ಆರೋಪ ಮಾಡಿದರು.

ಕಾಂಗ್ರೆಸ್​ನವರಿಗೆ ಕೋರ್ಟ್​​ ಮೇಲೆ ನಂಬಿಕೆ ಇದೆಯೋ ಇಲ್ವೋ ಗೊತ್ತಿಲ್ಲ. ಇದುವರೆಗೂ ನಾನು ಕೇಳಿದ ಪ್ರಶ್ನೆಗೆ ಉತ್ತರ ಕೊಟ್ಟಿಲ್ಲ. ಕಾಂಗ್ರೆಸ್​ನವರು ಹೆಚ್​ಡಿ ಕುಮಾರಸ್ವಾಮಿ ಮೇಲೆ ಆರೋಪ ಮಾಡುತ್ತಿದ್ದಾರೆ. 2018ರಲ್ಲಿ ನೀವೇ ಹೆಚ್​ಡಿ ಕುಮಾರಸ್ವಾಮಿ ಅವರ ಕಾಲು ಹಿಡಿದು ಮುಖ್ಯಮಂತ್ರಿ ಮಾಡಿದ್ರಿ, ಇವಾಗ ನಿಮಗೆ ಜ್ಞಾನೋದಯ ಆಯ್ತಾ‌ ಎಂದು ವಾಗ್ದಾಳಿ ಮಾಡಿದರು.

ಸಿದ್ದರಾಮಯ್ಯ ಜೈಲಿಗೆ ಹೋಗ್ತಾರೆ ಎಂದು ಭವಿಷ್ಯ ಹೇಳಲ್ಲ. ಆದರೆ ನೈತಿಕವಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು‌ ಎಂದು ಆಗ್ರಹಿಸಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಮನೆಗೆ ಹೋಗಲೆಂದು ಕಾಂಗ್ರೆಸ್​ನಲ್ಲೇ ಕಾಯುತ್ತಿದ್ದಾರೆ: ಪ್ರಲ್ಹಾದ್ ಜೋಶಿ

ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸ ಮಾಡ್ತಿದ್ದಾರೆ: ನಿರಾಣಿ

ತಮ್ಮ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಬೇಕೆಂದು ಕಾಂಗ್ರೆಸ್​ ನಾಯಕರು ರಾಜ್ಯಪಾಲರಿಗೆ ಮನವಿ ಮಾಡಿರುವ ವಿಚಾರವಾಗಿ ಮಾತನಾಡಿದ ಮಾಜಿ ಸಚಿವ ಮುರಗೇಶ್​ ನಿರಾಣಿ, ರಾಜ್ಯಪಾಲರಿಗೆ ಮನವಿ ಮಾಡುವಂತಹ ತಪ್ಪೇನು ಆಗಿಲ್ಲ. ಸಿಎಂ ಸಿದ್ದರಾಮಯ್ಯ ವಕೀಲರು, 50 ವರ್ಷ ರಾಜಕೀಯ ಅನುಭವವಿದೆ. ಹಾಗೆ ಡಿ.ಕೆ.ಶಿವಕುಮಾರ್​ ಮುಖ್ಯಮಂತ್ರಿ ಆಗುವ ಕನಸು ಕಂಡವರು. ಅವರಿಗೆ 40 ವರ್ಷದ ರಾಜಕೀಯದ ಅನುಭವವಿದೆ. ಏನು ವಿಷಯ ಅಂತಾ ಇಲ್ಲಿವರೆಗೂ ಒಬ್ಬರಾದರೂ ಹೇಳಿದ್ದಾರಾ? ಆದರೆ ಯಾವ ವಿಷಯಕ್ಕೆ ಪ್ರಾಸಿಕ್ಯೂಷನ್​ಗೆ ಅನುಮತಿ ‌ಕೊಡಬೇಕು. ಸರ್ಕಾರಕ್ಕೆ ಏನು ನಷ್ಟ ಆಗಿದೆ ಅಂತಾ ಸ್ಪಷ್ಟೀಕರಣ ಕೊಡಬೇಕಲ್ವಾ? ಏನೂ ಇಲ್ಲದೆ ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:31 pm, Sun, 1 September 24

Follow Us
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!