AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ನವರು ಪಾರ್ಟ್​ ಟೈಂ ಹಿಂದೂಗಳು: ಪ್ರಹ್ಲಾದ ಜೋಶಿ

ಕೇಂದ್ರ ಸಚಿವ ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸುತ್ತಾ, ಕಾಂಗ್ರೆಸ್​ನವರು ಪಾರ್ಟ್​ ​ಟೈಂ ಹಿಂದೂಗಳು. ಕಾಂಗ್ರೆಸ್ ಯಾವಾಗಲೂ ಹಿಂದೂ ವಿರೋಧಿ ಪಕ್ಷ. ಸಿದ್ದರಾಮಯ್ಯ ಜೈಲಿಗೆ ಹೋಗ್ತಾರೆ ಎಂದು ಭವಿಷ್ಯ ಹೇಳಲ್ಲ. ಆದರೆ ನೈತಿಕವಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು‌ ಎಂದು ಆಗ್ರಹಿಸಿದರು.

ಕಾಂಗ್ರೆಸ್​ನವರು ಪಾರ್ಟ್​ ಟೈಂ ಹಿಂದೂಗಳು: ಪ್ರಹ್ಲಾದ ಜೋಶಿ
ಸಚಿವ ಪ್ರಹ್ಲಾದ್​ ಜೋಶಿ
ಶಿವಕುಮಾರ್ ಪತ್ತಾರ್
| Edited By: |

Updated on:Sep 01, 2024 | 2:34 PM

Share

ಹುಬ್ಬಳ್ಳಿ, ಸೆಪ್ಟೆಂಬರ್​ 1: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸೋಮವಾರ ಮೈಸೂರಿಗೆ ತೆರಳಲಿದ್ದು, ತಾಯಿ ಚಾಮುಂಡೇಶ್ವರಿ (Chamundeshwari) ಆಶಿರ್ವಾದ ಪಡೆಯಲಿದ್ದಾರೆ. ಈ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ (Pralhad Joshi) ಮಾತನಾಡಿ, ಕಾಂಗ್ರೆಸ್​ನವರು ಪಾರ್ಟ್​ ಟೈಂ ಹಿಂದೂಗಳು ಎಂದು ಲೇವಡಿ ಮಾಡಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಯಾವಾಗಲೂ ಹಿಂದೂ ವಿರೋಧಿ ಪಕ್ಷ ಎಂದು ಆರೋಪ ಮಾಡಿದರು.

ಕಾಂಗ್ರೆಸ್​ನವರಿಗೆ ಕೋರ್ಟ್​​ ಮೇಲೆ ನಂಬಿಕೆ ಇದೆಯೋ ಇಲ್ವೋ ಗೊತ್ತಿಲ್ಲ. ಇದುವರೆಗೂ ನಾನು ಕೇಳಿದ ಪ್ರಶ್ನೆಗೆ ಉತ್ತರ ಕೊಟ್ಟಿಲ್ಲ. ಕಾಂಗ್ರೆಸ್​ನವರು ಹೆಚ್​ಡಿ ಕುಮಾರಸ್ವಾಮಿ ಮೇಲೆ ಆರೋಪ ಮಾಡುತ್ತಿದ್ದಾರೆ. 2018ರಲ್ಲಿ ನೀವೇ ಹೆಚ್​ಡಿ ಕುಮಾರಸ್ವಾಮಿ ಅವರ ಕಾಲು ಹಿಡಿದು ಮುಖ್ಯಮಂತ್ರಿ ಮಾಡಿದ್ರಿ, ಇವಾಗ ನಿಮಗೆ ಜ್ಞಾನೋದಯ ಆಯ್ತಾ‌ ಎಂದು ವಾಗ್ದಾಳಿ ಮಾಡಿದರು.

ಸಿದ್ದರಾಮಯ್ಯ ಜೈಲಿಗೆ ಹೋಗ್ತಾರೆ ಎಂದು ಭವಿಷ್ಯ ಹೇಳಲ್ಲ. ಆದರೆ ನೈತಿಕವಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು‌ ಎಂದು ಆಗ್ರಹಿಸಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಮನೆಗೆ ಹೋಗಲೆಂದು ಕಾಂಗ್ರೆಸ್​ನಲ್ಲೇ ಕಾಯುತ್ತಿದ್ದಾರೆ: ಪ್ರಲ್ಹಾದ್ ಜೋಶಿ

ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸ ಮಾಡ್ತಿದ್ದಾರೆ: ನಿರಾಣಿ

ತಮ್ಮ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಬೇಕೆಂದು ಕಾಂಗ್ರೆಸ್​ ನಾಯಕರು ರಾಜ್ಯಪಾಲರಿಗೆ ಮನವಿ ಮಾಡಿರುವ ವಿಚಾರವಾಗಿ ಮಾತನಾಡಿದ ಮಾಜಿ ಸಚಿವ ಮುರಗೇಶ್​ ನಿರಾಣಿ, ರಾಜ್ಯಪಾಲರಿಗೆ ಮನವಿ ಮಾಡುವಂತಹ ತಪ್ಪೇನು ಆಗಿಲ್ಲ. ಸಿಎಂ ಸಿದ್ದರಾಮಯ್ಯ ವಕೀಲರು, 50 ವರ್ಷ ರಾಜಕೀಯ ಅನುಭವವಿದೆ. ಹಾಗೆ ಡಿ.ಕೆ.ಶಿವಕುಮಾರ್​ ಮುಖ್ಯಮಂತ್ರಿ ಆಗುವ ಕನಸು ಕಂಡವರು. ಅವರಿಗೆ 40 ವರ್ಷದ ರಾಜಕೀಯದ ಅನುಭವವಿದೆ. ಏನು ವಿಷಯ ಅಂತಾ ಇಲ್ಲಿವರೆಗೂ ಒಬ್ಬರಾದರೂ ಹೇಳಿದ್ದಾರಾ? ಆದರೆ ಯಾವ ವಿಷಯಕ್ಕೆ ಪ್ರಾಸಿಕ್ಯೂಷನ್​ಗೆ ಅನುಮತಿ ‌ಕೊಡಬೇಕು. ಸರ್ಕಾರಕ್ಕೆ ಏನು ನಷ್ಟ ಆಗಿದೆ ಅಂತಾ ಸ್ಪಷ್ಟೀಕರಣ ಕೊಡಬೇಕಲ್ವಾ? ಏನೂ ಇಲ್ಲದೆ ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:31 pm, Sun, 1 September 24

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ