AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಸಿ, ಎಸ್​ಟಿ, ಓಬಿಸಿ ಸಮುದಾಯದ ವಿಶ್ವಾಸ ಗಳಿಸಲು ಕಾಂಗ್ರೆಸ್ ಚಿಂತನೆ; ಮೂರು ಸಮಾವೇಶಗಳ ಆಯೋಜನೆ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಮತ್ತು ಬಿಜೆಪಿ ಸಿದ್ಧತೆ ನಡೆಸುತ್ತಿದ್ದು, ಎರಡೂ ಪಕ್ಷಗಳು ತಂತ್ರ-ಪ್ರತಿತಂತ್ರಗಳನ್ನು ರೂಪಿಸುತ್ತಿದೆ. ಇದೀಗ ಬಿಜೆಪಿಯ ಎಸ್​ಟಿ ಸಮಾವೇಶಕ್ಕೆ ಟಕ್ಕರ್ ಕೊಡಲು ಕಾಂಗ್ರೆಸ್ ಮೂರು ಸಮುದಾಯಗಳನ್ನು ಗುರಿಯಾಗಿಸಿ ಸಮಾವೇಶಗಳನ್ನು ನಡೆಸಲು ಮುಂದಾಗಿದೆ.

ಎಸ್​ಸಿ, ಎಸ್​ಟಿ, ಓಬಿಸಿ ಸಮುದಾಯದ ವಿಶ್ವಾಸ ಗಳಿಸಲು ಕಾಂಗ್ರೆಸ್ ಚಿಂತನೆ; ಮೂರು ಸಮಾವೇಶಗಳ ಆಯೋಜನೆ
ಬಿಜೆಪಿಯ ತಂತ್ರಗಾರಿಕೆಗೆ ಪ್ರತಿತಂತ್ರ ಹೆಣೆದ ಕಾಂಗ್ರೆಸ್
TV9 Web
| Edited By: Rakesh Nayak Manchi|

Updated on:Oct 24, 2022 | 9:55 AM

Share

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಮತ್ತು ಬಿಜೆಪಿ ಸಿದ್ಧತೆ ನಡೆಸುತ್ತಿದ್ದು, ಎರಡೂ ಪಕ್ಷಗಳು ತಂತ್ರ-ಪ್ರತಿತಂತ್ರಗಳನ್ನು ರೂಪಿಸುತ್ತಿವೆ. ಇದೀಗ ಬಿಜೆಪಿಯ ಎಸ್​ಟಿ ಸಮಾವೇಶಕ್ಕೆ ಟಕ್ಕರ್ ಕೊಡಲು ಕಾಂಗ್ರೆಸ್ ಎಸ್​ಸಿ, ಎಸ್​ಟಿ ಮತ್ತು ಒಬಿಸಿ ಸಮುದಾಯಗಳನ್ನು ಗುರಿಯಾಗಿಸಿ ಸಮಾವೇಶಗಳನ್ನು ನಡೆಸಲು ಮುಂದಾಗಿದೆ. ಈ ಮೂರು ಸಮಯದಾಯದ ಮತ ಗಟ್ಟಿಗೊಳಿಸಲು ಯೋಜನೆ ರೂಪಿಸಿದ ಕಾಂಗ್ರೆಸ್, ಸಮಾವೇಶ ಆಯೋಜನೆಗೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ನಡೆಸುತ್ತಿದೆ. ದಲಿತ ಸಮಾವೇಶ ಆಯೋಜನೆಗೂ ಭರದ ಸಿದ್ಧತೆ ನಡೆಯುತ್ತಿದೆ. ಮೀಸಲಾತಿ ಹೆಚ್ಚಳಕ್ಕೆ ಕೌಂಟರ್ ನೀಡಲು ಪ್ರತ್ಯೇಕ ಎಸ್​ಟಿ ಸಮಾವೇಶ ನಡೆಸಲಾಗುತ್ತಿದೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಸ್​ಟಿ ಸಮಾವೇಶ ಆಯೋಜನೆಗೆ ಕಾಂಗ್ರೆಸ್ ಯೋಜನೆ ಹಾಕಿಕೊಂಡಿದ್ದು, ಆ ಮೂಲಕ ಬಿಜೆಪಿಯ ಎಸ್​ಟಿ ಸಮಾವೇಶಕ್ಕೆ ಟಕ್ಕರ್ ನೀಡಲು ಕೈ ನಾಯಕರು ಮುಂದಾಗಿದ್ದಾರೆ. ಮಧ್ಯ ಕರ್ನಾಟಕ ಭಾಗದಲ್ಲಿ ಹಿಂದುಳಿದ ವರ್ಗಗಳ ಸಮಾವೇಶ ಆಯೋಜನೆಗೆ ಚಿಂತನೆ ನಡೆಸಲಾಗಿದೆ. ಇದಕ್ಕೂ‌ ಮೊದಲು ಹಿಂದುಳಿದ ವರ್ಗದ ನಾಯಕರ ರಾಜ್ಯ ಪ್ರವಾಸವೂ ನಡೆಯಲಿದ್ದು, ಆ ಮೂಲಕ ಎಸ್​ಸಿ, ಎಸ್​ಟಿ ಮತ್ತು ಓಬಿಸಿ ಸಮುದಾಯವನ್ನು ತಲುಪಲು ಕಾಂಗ್ರೆಸ್ ಕಸರತ್ತು ನಡೆಸಲಿದೆ. ಇದರೊಂದಿಗೆ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ದಲಿತ ಸಮಾವೇಶವನ್ನು ನಡೆಸಲಾಗುತ್ತಿದೆ.

ರಾಜ್ಯದಲ್ಲಿ ಎಸ್​ಸಿ ಎಸ್​ಟಿ ಮೀಸಲಾತಿ ಪ್ರಮಾಣದಲ್ಲಿ ಹೆಚ್ಚಳವಾದ ಬೆನ್ನಲ್ಲೆ ಇದರ ಲಾಭ ಪಡೆದುಕೊಳ್ಳಲು ಬಿಜೆಪಿ ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿದ್ದು, ನ.6ರಂದು ರಾಜ್ಯಮಟ್ಟದ ಬೃಹತ್ ಎಸ್​ಟಿ ಸಮಾವೇಶವನ್ನು ಆಯೋಜಿಸಿದೆ. ಈ ಕಾರ್ಯಕ್ರಮದ ಮೂಲಕ ಮೀಸಲಾತಿ ಹೆಚ್ಚಳ ಮಾಡಿರುವುದು ಬಿಜೆಪಿ ಎಂಬ ಮಾಹಿತಿಯನ್ನು ಮನೆ ಮನೆಗೆ ‌ಮುಟ್ಟಿಸಲು‌ ಯೋಜನೆ ರೂಪಿಸಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:54 am, Mon, 24 October 22

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ