AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಸಿ, ಎಸ್​ಟಿ, ಓಬಿಸಿ ಸಮುದಾಯದ ವಿಶ್ವಾಸ ಗಳಿಸಲು ಕಾಂಗ್ರೆಸ್ ಚಿಂತನೆ; ಮೂರು ಸಮಾವೇಶಗಳ ಆಯೋಜನೆ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಮತ್ತು ಬಿಜೆಪಿ ಸಿದ್ಧತೆ ನಡೆಸುತ್ತಿದ್ದು, ಎರಡೂ ಪಕ್ಷಗಳು ತಂತ್ರ-ಪ್ರತಿತಂತ್ರಗಳನ್ನು ರೂಪಿಸುತ್ತಿದೆ. ಇದೀಗ ಬಿಜೆಪಿಯ ಎಸ್​ಟಿ ಸಮಾವೇಶಕ್ಕೆ ಟಕ್ಕರ್ ಕೊಡಲು ಕಾಂಗ್ರೆಸ್ ಮೂರು ಸಮುದಾಯಗಳನ್ನು ಗುರಿಯಾಗಿಸಿ ಸಮಾವೇಶಗಳನ್ನು ನಡೆಸಲು ಮುಂದಾಗಿದೆ.

ಎಸ್​ಸಿ, ಎಸ್​ಟಿ, ಓಬಿಸಿ ಸಮುದಾಯದ ವಿಶ್ವಾಸ ಗಳಿಸಲು ಕಾಂಗ್ರೆಸ್ ಚಿಂತನೆ; ಮೂರು ಸಮಾವೇಶಗಳ ಆಯೋಜನೆ
ಬಿಜೆಪಿಯ ತಂತ್ರಗಾರಿಕೆಗೆ ಪ್ರತಿತಂತ್ರ ಹೆಣೆದ ಕಾಂಗ್ರೆಸ್
TV9 Web
| Edited By: Rakesh Nayak Manchi|

Updated on:Oct 24, 2022 | 9:55 AM

Share

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಮತ್ತು ಬಿಜೆಪಿ ಸಿದ್ಧತೆ ನಡೆಸುತ್ತಿದ್ದು, ಎರಡೂ ಪಕ್ಷಗಳು ತಂತ್ರ-ಪ್ರತಿತಂತ್ರಗಳನ್ನು ರೂಪಿಸುತ್ತಿವೆ. ಇದೀಗ ಬಿಜೆಪಿಯ ಎಸ್​ಟಿ ಸಮಾವೇಶಕ್ಕೆ ಟಕ್ಕರ್ ಕೊಡಲು ಕಾಂಗ್ರೆಸ್ ಎಸ್​ಸಿ, ಎಸ್​ಟಿ ಮತ್ತು ಒಬಿಸಿ ಸಮುದಾಯಗಳನ್ನು ಗುರಿಯಾಗಿಸಿ ಸಮಾವೇಶಗಳನ್ನು ನಡೆಸಲು ಮುಂದಾಗಿದೆ. ಈ ಮೂರು ಸಮಯದಾಯದ ಮತ ಗಟ್ಟಿಗೊಳಿಸಲು ಯೋಜನೆ ರೂಪಿಸಿದ ಕಾಂಗ್ರೆಸ್, ಸಮಾವೇಶ ಆಯೋಜನೆಗೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ನಡೆಸುತ್ತಿದೆ. ದಲಿತ ಸಮಾವೇಶ ಆಯೋಜನೆಗೂ ಭರದ ಸಿದ್ಧತೆ ನಡೆಯುತ್ತಿದೆ. ಮೀಸಲಾತಿ ಹೆಚ್ಚಳಕ್ಕೆ ಕೌಂಟರ್ ನೀಡಲು ಪ್ರತ್ಯೇಕ ಎಸ್​ಟಿ ಸಮಾವೇಶ ನಡೆಸಲಾಗುತ್ತಿದೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಸ್​ಟಿ ಸಮಾವೇಶ ಆಯೋಜನೆಗೆ ಕಾಂಗ್ರೆಸ್ ಯೋಜನೆ ಹಾಕಿಕೊಂಡಿದ್ದು, ಆ ಮೂಲಕ ಬಿಜೆಪಿಯ ಎಸ್​ಟಿ ಸಮಾವೇಶಕ್ಕೆ ಟಕ್ಕರ್ ನೀಡಲು ಕೈ ನಾಯಕರು ಮುಂದಾಗಿದ್ದಾರೆ. ಮಧ್ಯ ಕರ್ನಾಟಕ ಭಾಗದಲ್ಲಿ ಹಿಂದುಳಿದ ವರ್ಗಗಳ ಸಮಾವೇಶ ಆಯೋಜನೆಗೆ ಚಿಂತನೆ ನಡೆಸಲಾಗಿದೆ. ಇದಕ್ಕೂ‌ ಮೊದಲು ಹಿಂದುಳಿದ ವರ್ಗದ ನಾಯಕರ ರಾಜ್ಯ ಪ್ರವಾಸವೂ ನಡೆಯಲಿದ್ದು, ಆ ಮೂಲಕ ಎಸ್​ಸಿ, ಎಸ್​ಟಿ ಮತ್ತು ಓಬಿಸಿ ಸಮುದಾಯವನ್ನು ತಲುಪಲು ಕಾಂಗ್ರೆಸ್ ಕಸರತ್ತು ನಡೆಸಲಿದೆ. ಇದರೊಂದಿಗೆ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ದಲಿತ ಸಮಾವೇಶವನ್ನು ನಡೆಸಲಾಗುತ್ತಿದೆ.

ರಾಜ್ಯದಲ್ಲಿ ಎಸ್​ಸಿ ಎಸ್​ಟಿ ಮೀಸಲಾತಿ ಪ್ರಮಾಣದಲ್ಲಿ ಹೆಚ್ಚಳವಾದ ಬೆನ್ನಲ್ಲೆ ಇದರ ಲಾಭ ಪಡೆದುಕೊಳ್ಳಲು ಬಿಜೆಪಿ ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿದ್ದು, ನ.6ರಂದು ರಾಜ್ಯಮಟ್ಟದ ಬೃಹತ್ ಎಸ್​ಟಿ ಸಮಾವೇಶವನ್ನು ಆಯೋಜಿಸಿದೆ. ಈ ಕಾರ್ಯಕ್ರಮದ ಮೂಲಕ ಮೀಸಲಾತಿ ಹೆಚ್ಚಳ ಮಾಡಿರುವುದು ಬಿಜೆಪಿ ಎಂಬ ಮಾಹಿತಿಯನ್ನು ಮನೆ ಮನೆಗೆ ‌ಮುಟ್ಟಿಸಲು‌ ಯೋಜನೆ ರೂಪಿಸಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:54 am, Mon, 24 October 22

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!