AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಸಿ, ಎಸ್​ಟಿ, ಓಬಿಸಿ ಸಮುದಾಯದ ವಿಶ್ವಾಸ ಗಳಿಸಲು ಕಾಂಗ್ರೆಸ್ ಚಿಂತನೆ; ಮೂರು ಸಮಾವೇಶಗಳ ಆಯೋಜನೆ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಮತ್ತು ಬಿಜೆಪಿ ಸಿದ್ಧತೆ ನಡೆಸುತ್ತಿದ್ದು, ಎರಡೂ ಪಕ್ಷಗಳು ತಂತ್ರ-ಪ್ರತಿತಂತ್ರಗಳನ್ನು ರೂಪಿಸುತ್ತಿದೆ. ಇದೀಗ ಬಿಜೆಪಿಯ ಎಸ್​ಟಿ ಸಮಾವೇಶಕ್ಕೆ ಟಕ್ಕರ್ ಕೊಡಲು ಕಾಂಗ್ರೆಸ್ ಮೂರು ಸಮುದಾಯಗಳನ್ನು ಗುರಿಯಾಗಿಸಿ ಸಮಾವೇಶಗಳನ್ನು ನಡೆಸಲು ಮುಂದಾಗಿದೆ.

ಎಸ್​ಸಿ, ಎಸ್​ಟಿ, ಓಬಿಸಿ ಸಮುದಾಯದ ವಿಶ್ವಾಸ ಗಳಿಸಲು ಕಾಂಗ್ರೆಸ್ ಚಿಂತನೆ; ಮೂರು ಸಮಾವೇಶಗಳ ಆಯೋಜನೆ
ಬಿಜೆಪಿಯ ತಂತ್ರಗಾರಿಕೆಗೆ ಪ್ರತಿತಂತ್ರ ಹೆಣೆದ ಕಾಂಗ್ರೆಸ್
TV9 Web
| Edited By: |

Updated on:Oct 24, 2022 | 9:55 AM

Share

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಮತ್ತು ಬಿಜೆಪಿ ಸಿದ್ಧತೆ ನಡೆಸುತ್ತಿದ್ದು, ಎರಡೂ ಪಕ್ಷಗಳು ತಂತ್ರ-ಪ್ರತಿತಂತ್ರಗಳನ್ನು ರೂಪಿಸುತ್ತಿವೆ. ಇದೀಗ ಬಿಜೆಪಿಯ ಎಸ್​ಟಿ ಸಮಾವೇಶಕ್ಕೆ ಟಕ್ಕರ್ ಕೊಡಲು ಕಾಂಗ್ರೆಸ್ ಎಸ್​ಸಿ, ಎಸ್​ಟಿ ಮತ್ತು ಒಬಿಸಿ ಸಮುದಾಯಗಳನ್ನು ಗುರಿಯಾಗಿಸಿ ಸಮಾವೇಶಗಳನ್ನು ನಡೆಸಲು ಮುಂದಾಗಿದೆ. ಈ ಮೂರು ಸಮಯದಾಯದ ಮತ ಗಟ್ಟಿಗೊಳಿಸಲು ಯೋಜನೆ ರೂಪಿಸಿದ ಕಾಂಗ್ರೆಸ್, ಸಮಾವೇಶ ಆಯೋಜನೆಗೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ನಡೆಸುತ್ತಿದೆ. ದಲಿತ ಸಮಾವೇಶ ಆಯೋಜನೆಗೂ ಭರದ ಸಿದ್ಧತೆ ನಡೆಯುತ್ತಿದೆ. ಮೀಸಲಾತಿ ಹೆಚ್ಚಳಕ್ಕೆ ಕೌಂಟರ್ ನೀಡಲು ಪ್ರತ್ಯೇಕ ಎಸ್​ಟಿ ಸಮಾವೇಶ ನಡೆಸಲಾಗುತ್ತಿದೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಸ್​ಟಿ ಸಮಾವೇಶ ಆಯೋಜನೆಗೆ ಕಾಂಗ್ರೆಸ್ ಯೋಜನೆ ಹಾಕಿಕೊಂಡಿದ್ದು, ಆ ಮೂಲಕ ಬಿಜೆಪಿಯ ಎಸ್​ಟಿ ಸಮಾವೇಶಕ್ಕೆ ಟಕ್ಕರ್ ನೀಡಲು ಕೈ ನಾಯಕರು ಮುಂದಾಗಿದ್ದಾರೆ. ಮಧ್ಯ ಕರ್ನಾಟಕ ಭಾಗದಲ್ಲಿ ಹಿಂದುಳಿದ ವರ್ಗಗಳ ಸಮಾವೇಶ ಆಯೋಜನೆಗೆ ಚಿಂತನೆ ನಡೆಸಲಾಗಿದೆ. ಇದಕ್ಕೂ‌ ಮೊದಲು ಹಿಂದುಳಿದ ವರ್ಗದ ನಾಯಕರ ರಾಜ್ಯ ಪ್ರವಾಸವೂ ನಡೆಯಲಿದ್ದು, ಆ ಮೂಲಕ ಎಸ್​ಸಿ, ಎಸ್​ಟಿ ಮತ್ತು ಓಬಿಸಿ ಸಮುದಾಯವನ್ನು ತಲುಪಲು ಕಾಂಗ್ರೆಸ್ ಕಸರತ್ತು ನಡೆಸಲಿದೆ. ಇದರೊಂದಿಗೆ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ದಲಿತ ಸಮಾವೇಶವನ್ನು ನಡೆಸಲಾಗುತ್ತಿದೆ.

ರಾಜ್ಯದಲ್ಲಿ ಎಸ್​ಸಿ ಎಸ್​ಟಿ ಮೀಸಲಾತಿ ಪ್ರಮಾಣದಲ್ಲಿ ಹೆಚ್ಚಳವಾದ ಬೆನ್ನಲ್ಲೆ ಇದರ ಲಾಭ ಪಡೆದುಕೊಳ್ಳಲು ಬಿಜೆಪಿ ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿದ್ದು, ನ.6ರಂದು ರಾಜ್ಯಮಟ್ಟದ ಬೃಹತ್ ಎಸ್​ಟಿ ಸಮಾವೇಶವನ್ನು ಆಯೋಜಿಸಿದೆ. ಈ ಕಾರ್ಯಕ್ರಮದ ಮೂಲಕ ಮೀಸಲಾತಿ ಹೆಚ್ಚಳ ಮಾಡಿರುವುದು ಬಿಜೆಪಿ ಎಂಬ ಮಾಹಿತಿಯನ್ನು ಮನೆ ಮನೆಗೆ ‌ಮುಟ್ಟಿಸಲು‌ ಯೋಜನೆ ರೂಪಿಸಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:54 am, Mon, 24 October 22

2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಜನ ಮಾಡಿದ್ದೇನು ನೋಡಿ!
ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಜನ ಮಾಡಿದ್ದೇನು ನೋಡಿ!