AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಸಿ, ಎಸ್​ಟಿ, ಓಬಿಸಿ ಸಮುದಾಯದ ವಿಶ್ವಾಸ ಗಳಿಸಲು ಕಾಂಗ್ರೆಸ್ ಚಿಂತನೆ; ಮೂರು ಸಮಾವೇಶಗಳ ಆಯೋಜನೆ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಮತ್ತು ಬಿಜೆಪಿ ಸಿದ್ಧತೆ ನಡೆಸುತ್ತಿದ್ದು, ಎರಡೂ ಪಕ್ಷಗಳು ತಂತ್ರ-ಪ್ರತಿತಂತ್ರಗಳನ್ನು ರೂಪಿಸುತ್ತಿದೆ. ಇದೀಗ ಬಿಜೆಪಿಯ ಎಸ್​ಟಿ ಸಮಾವೇಶಕ್ಕೆ ಟಕ್ಕರ್ ಕೊಡಲು ಕಾಂಗ್ರೆಸ್ ಮೂರು ಸಮುದಾಯಗಳನ್ನು ಗುರಿಯಾಗಿಸಿ ಸಮಾವೇಶಗಳನ್ನು ನಡೆಸಲು ಮುಂದಾಗಿದೆ.

ಎಸ್​ಸಿ, ಎಸ್​ಟಿ, ಓಬಿಸಿ ಸಮುದಾಯದ ವಿಶ್ವಾಸ ಗಳಿಸಲು ಕಾಂಗ್ರೆಸ್ ಚಿಂತನೆ; ಮೂರು ಸಮಾವೇಶಗಳ ಆಯೋಜನೆ
ಬಿಜೆಪಿಯ ತಂತ್ರಗಾರಿಕೆಗೆ ಪ್ರತಿತಂತ್ರ ಹೆಣೆದ ಕಾಂಗ್ರೆಸ್
TV9 Web
| Edited By: |

Updated on:Oct 24, 2022 | 9:55 AM

Share

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಮತ್ತು ಬಿಜೆಪಿ ಸಿದ್ಧತೆ ನಡೆಸುತ್ತಿದ್ದು, ಎರಡೂ ಪಕ್ಷಗಳು ತಂತ್ರ-ಪ್ರತಿತಂತ್ರಗಳನ್ನು ರೂಪಿಸುತ್ತಿವೆ. ಇದೀಗ ಬಿಜೆಪಿಯ ಎಸ್​ಟಿ ಸಮಾವೇಶಕ್ಕೆ ಟಕ್ಕರ್ ಕೊಡಲು ಕಾಂಗ್ರೆಸ್ ಎಸ್​ಸಿ, ಎಸ್​ಟಿ ಮತ್ತು ಒಬಿಸಿ ಸಮುದಾಯಗಳನ್ನು ಗುರಿಯಾಗಿಸಿ ಸಮಾವೇಶಗಳನ್ನು ನಡೆಸಲು ಮುಂದಾಗಿದೆ. ಈ ಮೂರು ಸಮಯದಾಯದ ಮತ ಗಟ್ಟಿಗೊಳಿಸಲು ಯೋಜನೆ ರೂಪಿಸಿದ ಕಾಂಗ್ರೆಸ್, ಸಮಾವೇಶ ಆಯೋಜನೆಗೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ನಡೆಸುತ್ತಿದೆ. ದಲಿತ ಸಮಾವೇಶ ಆಯೋಜನೆಗೂ ಭರದ ಸಿದ್ಧತೆ ನಡೆಯುತ್ತಿದೆ. ಮೀಸಲಾತಿ ಹೆಚ್ಚಳಕ್ಕೆ ಕೌಂಟರ್ ನೀಡಲು ಪ್ರತ್ಯೇಕ ಎಸ್​ಟಿ ಸಮಾವೇಶ ನಡೆಸಲಾಗುತ್ತಿದೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಸ್​ಟಿ ಸಮಾವೇಶ ಆಯೋಜನೆಗೆ ಕಾಂಗ್ರೆಸ್ ಯೋಜನೆ ಹಾಕಿಕೊಂಡಿದ್ದು, ಆ ಮೂಲಕ ಬಿಜೆಪಿಯ ಎಸ್​ಟಿ ಸಮಾವೇಶಕ್ಕೆ ಟಕ್ಕರ್ ನೀಡಲು ಕೈ ನಾಯಕರು ಮುಂದಾಗಿದ್ದಾರೆ. ಮಧ್ಯ ಕರ್ನಾಟಕ ಭಾಗದಲ್ಲಿ ಹಿಂದುಳಿದ ವರ್ಗಗಳ ಸಮಾವೇಶ ಆಯೋಜನೆಗೆ ಚಿಂತನೆ ನಡೆಸಲಾಗಿದೆ. ಇದಕ್ಕೂ‌ ಮೊದಲು ಹಿಂದುಳಿದ ವರ್ಗದ ನಾಯಕರ ರಾಜ್ಯ ಪ್ರವಾಸವೂ ನಡೆಯಲಿದ್ದು, ಆ ಮೂಲಕ ಎಸ್​ಸಿ, ಎಸ್​ಟಿ ಮತ್ತು ಓಬಿಸಿ ಸಮುದಾಯವನ್ನು ತಲುಪಲು ಕಾಂಗ್ರೆಸ್ ಕಸರತ್ತು ನಡೆಸಲಿದೆ. ಇದರೊಂದಿಗೆ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ದಲಿತ ಸಮಾವೇಶವನ್ನು ನಡೆಸಲಾಗುತ್ತಿದೆ.

ರಾಜ್ಯದಲ್ಲಿ ಎಸ್​ಸಿ ಎಸ್​ಟಿ ಮೀಸಲಾತಿ ಪ್ರಮಾಣದಲ್ಲಿ ಹೆಚ್ಚಳವಾದ ಬೆನ್ನಲ್ಲೆ ಇದರ ಲಾಭ ಪಡೆದುಕೊಳ್ಳಲು ಬಿಜೆಪಿ ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿದ್ದು, ನ.6ರಂದು ರಾಜ್ಯಮಟ್ಟದ ಬೃಹತ್ ಎಸ್​ಟಿ ಸಮಾವೇಶವನ್ನು ಆಯೋಜಿಸಿದೆ. ಈ ಕಾರ್ಯಕ್ರಮದ ಮೂಲಕ ಮೀಸಲಾತಿ ಹೆಚ್ಚಳ ಮಾಡಿರುವುದು ಬಿಜೆಪಿ ಎಂಬ ಮಾಹಿತಿಯನ್ನು ಮನೆ ಮನೆಗೆ ‌ಮುಟ್ಟಿಸಲು‌ ಯೋಜನೆ ರೂಪಿಸಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:54 am, Mon, 24 October 22

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ