AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಸಿ, ಎಸ್​ಟಿ, ಓಬಿಸಿ ಸಮುದಾಯದ ವಿಶ್ವಾಸ ಗಳಿಸಲು ಕಾಂಗ್ರೆಸ್ ಚಿಂತನೆ; ಮೂರು ಸಮಾವೇಶಗಳ ಆಯೋಜನೆ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಮತ್ತು ಬಿಜೆಪಿ ಸಿದ್ಧತೆ ನಡೆಸುತ್ತಿದ್ದು, ಎರಡೂ ಪಕ್ಷಗಳು ತಂತ್ರ-ಪ್ರತಿತಂತ್ರಗಳನ್ನು ರೂಪಿಸುತ್ತಿದೆ. ಇದೀಗ ಬಿಜೆಪಿಯ ಎಸ್​ಟಿ ಸಮಾವೇಶಕ್ಕೆ ಟಕ್ಕರ್ ಕೊಡಲು ಕಾಂಗ್ರೆಸ್ ಮೂರು ಸಮುದಾಯಗಳನ್ನು ಗುರಿಯಾಗಿಸಿ ಸಮಾವೇಶಗಳನ್ನು ನಡೆಸಲು ಮುಂದಾಗಿದೆ.

ಎಸ್​ಸಿ, ಎಸ್​ಟಿ, ಓಬಿಸಿ ಸಮುದಾಯದ ವಿಶ್ವಾಸ ಗಳಿಸಲು ಕಾಂಗ್ರೆಸ್ ಚಿಂತನೆ; ಮೂರು ಸಮಾವೇಶಗಳ ಆಯೋಜನೆ
ಬಿಜೆಪಿಯ ತಂತ್ರಗಾರಿಕೆಗೆ ಪ್ರತಿತಂತ್ರ ಹೆಣೆದ ಕಾಂಗ್ರೆಸ್
Follow us
TV9 Web
| Updated By: Rakesh Nayak Manchi

Updated on:Oct 24, 2022 | 9:55 AM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಮತ್ತು ಬಿಜೆಪಿ ಸಿದ್ಧತೆ ನಡೆಸುತ್ತಿದ್ದು, ಎರಡೂ ಪಕ್ಷಗಳು ತಂತ್ರ-ಪ್ರತಿತಂತ್ರಗಳನ್ನು ರೂಪಿಸುತ್ತಿವೆ. ಇದೀಗ ಬಿಜೆಪಿಯ ಎಸ್​ಟಿ ಸಮಾವೇಶಕ್ಕೆ ಟಕ್ಕರ್ ಕೊಡಲು ಕಾಂಗ್ರೆಸ್ ಎಸ್​ಸಿ, ಎಸ್​ಟಿ ಮತ್ತು ಒಬಿಸಿ ಸಮುದಾಯಗಳನ್ನು ಗುರಿಯಾಗಿಸಿ ಸಮಾವೇಶಗಳನ್ನು ನಡೆಸಲು ಮುಂದಾಗಿದೆ. ಈ ಮೂರು ಸಮಯದಾಯದ ಮತ ಗಟ್ಟಿಗೊಳಿಸಲು ಯೋಜನೆ ರೂಪಿಸಿದ ಕಾಂಗ್ರೆಸ್, ಸಮಾವೇಶ ಆಯೋಜನೆಗೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ನಡೆಸುತ್ತಿದೆ. ದಲಿತ ಸಮಾವೇಶ ಆಯೋಜನೆಗೂ ಭರದ ಸಿದ್ಧತೆ ನಡೆಯುತ್ತಿದೆ. ಮೀಸಲಾತಿ ಹೆಚ್ಚಳಕ್ಕೆ ಕೌಂಟರ್ ನೀಡಲು ಪ್ರತ್ಯೇಕ ಎಸ್​ಟಿ ಸಮಾವೇಶ ನಡೆಸಲಾಗುತ್ತಿದೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಸ್​ಟಿ ಸಮಾವೇಶ ಆಯೋಜನೆಗೆ ಕಾಂಗ್ರೆಸ್ ಯೋಜನೆ ಹಾಕಿಕೊಂಡಿದ್ದು, ಆ ಮೂಲಕ ಬಿಜೆಪಿಯ ಎಸ್​ಟಿ ಸಮಾವೇಶಕ್ಕೆ ಟಕ್ಕರ್ ನೀಡಲು ಕೈ ನಾಯಕರು ಮುಂದಾಗಿದ್ದಾರೆ. ಮಧ್ಯ ಕರ್ನಾಟಕ ಭಾಗದಲ್ಲಿ ಹಿಂದುಳಿದ ವರ್ಗಗಳ ಸಮಾವೇಶ ಆಯೋಜನೆಗೆ ಚಿಂತನೆ ನಡೆಸಲಾಗಿದೆ. ಇದಕ್ಕೂ‌ ಮೊದಲು ಹಿಂದುಳಿದ ವರ್ಗದ ನಾಯಕರ ರಾಜ್ಯ ಪ್ರವಾಸವೂ ನಡೆಯಲಿದ್ದು, ಆ ಮೂಲಕ ಎಸ್​ಸಿ, ಎಸ್​ಟಿ ಮತ್ತು ಓಬಿಸಿ ಸಮುದಾಯವನ್ನು ತಲುಪಲು ಕಾಂಗ್ರೆಸ್ ಕಸರತ್ತು ನಡೆಸಲಿದೆ. ಇದರೊಂದಿಗೆ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ದಲಿತ ಸಮಾವೇಶವನ್ನು ನಡೆಸಲಾಗುತ್ತಿದೆ.

ರಾಜ್ಯದಲ್ಲಿ ಎಸ್​ಸಿ ಎಸ್​ಟಿ ಮೀಸಲಾತಿ ಪ್ರಮಾಣದಲ್ಲಿ ಹೆಚ್ಚಳವಾದ ಬೆನ್ನಲ್ಲೆ ಇದರ ಲಾಭ ಪಡೆದುಕೊಳ್ಳಲು ಬಿಜೆಪಿ ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿದ್ದು, ನ.6ರಂದು ರಾಜ್ಯಮಟ್ಟದ ಬೃಹತ್ ಎಸ್​ಟಿ ಸಮಾವೇಶವನ್ನು ಆಯೋಜಿಸಿದೆ. ಈ ಕಾರ್ಯಕ್ರಮದ ಮೂಲಕ ಮೀಸಲಾತಿ ಹೆಚ್ಚಳ ಮಾಡಿರುವುದು ಬಿಜೆಪಿ ಎಂಬ ಮಾಹಿತಿಯನ್ನು ಮನೆ ಮನೆಗೆ ‌ಮುಟ್ಟಿಸಲು‌ ಯೋಜನೆ ರೂಪಿಸಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:54 am, Mon, 24 October 22

ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ