AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಲೆ ಏರಿಕೆ ವಿರುದ್ಧ ದೆಹಲಿಯಲ್ಲಿ ಕಾಂಗ್ರೆಸ್​ ವೀರಾವೇಶದ ಹೋರಾಟ: ಇಂದು ಬೃಹತ್ ಜಾಥಾ

ಸರ್ಕಾರಗಳನ್ನು ಕೆಡವುವ, ಶಾಸಕರನ್ನು ಖರೀದಿಸುವ ಕೆಲಸ ಮಾಡುತ್ತಿರುವ ಬಿಜೆಪಿ ಜನರ ಸಮಸ್ಯೆಗಳ ಬಗ್ಗೆ ಗಮನ ಕೊಡುತ್ತಿಲ್ಲ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಬೆಲೆ ಏರಿಕೆ ವಿರುದ್ಧ ದೆಹಲಿಯಲ್ಲಿ ಕಾಂಗ್ರೆಸ್​ ವೀರಾವೇಶದ ಹೋರಾಟ: ಇಂದು ಬೃಹತ್ ಜಾಥಾ
ದೆಹಲಿಯಲ್ಲಿ ಕಾಂಗ್ರೆಸ್​ ಪಕ್ಷವು ಬೃಹತ್ ಸಮಾವೇಶ ಆಯೋಜಿಸಿದೆ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Sep 04, 2022 | 11:32 AM

ದೆಹಲಿ: ದೇಶದ ಹಲವು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳಿಗೆ ರಾಜಕೀಯ ಪಕ್ಷಗಳು ಸಿದ್ಧತೆ ಮಾಡಿಕೊಳ್ಳುತ್ತಿವೆ. ಕಾಂಗ್ರೆಸ್ ಪಕ್ಷವು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ‘ಮೆಹಂಗಾಯ್ ಪರ್ ಹಲ್ಲಾ ಬೋಲ್ ರ್‍ಯಾಲಿ’ಯನ್ನು (ಬೆಲೆಏರಿಕೆ ವಿರುದ್ಧ ಯುದ್ಧ) ಭಾನುವಾರ ಆಯೋಜಿಸಿದೆ. ದೆಹಲಿಯ ರಾಮಲೀಲ ಮೈದಾನದಲ್ಲಿ ಬೃಹತ್ ಸಮಾವೇಶವೂ ನಡೆಯಲಿದೆ.

ಕಾಂಗ್ರೆಸ್ ಪಕ್ಷದ ಹಲವು ಪ್ರಧಾನ ಕಾರ್ಯದರ್ಶಿಗಳು, ಉನ್ನತ ನಾಯಕರು, ವಿವಿಧ ರಾಜ್ಯಗಳ ಉಸ್ತುವಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಎಐಸಿಸಿ ಪ್ರಧಾನ ಕಚೇರಿಯಿಂದ ರಾಮಲೀಲ ಮೈದಾನಕ್ಕೆ ಬಸ್​ಗಳಲ್ಲಿ ತೆರಳಲಿದ್ದಾರೆ. ಸಮಾವೇಶವನ್ನು ಉದ್ದೇಶಿಸಿ ರಾಹುಲ್ ಗಾಂಧಿ ಅವರು ಭಾಷಣ ಮಾಡುವ ಸಾಧ್ಯತೆಯಿದೆ.

ರಾಮಲೀಲ ಮೈದಾನದಲ್ಲಿ ಕಾಂಗ್ರೆಸ್ ರ್‍ಯಾಲಿ ಹಿನ್ನೆಲೆಯಲ್ಲಿ ಪಕ್ಷ ಬಿಗಿ ಭದ್ರತೆ ಒದಗಿಸಲಾಗಿದೆ. ವಿವಿಧ ರಸ್ತೆಗಳಲ್ಲಿ ಸಂಚಾರ ಬದಲಾವಣೆ ಕುರಿತು ದೆಹಲಿ ಪೊಲೀಸರು ಟ್ವಿಟರ್ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯ ಪೊಲೀಸರೊಂದಿಗೆ ಪ್ಯಾರಾ ಮಿಲಿಟರಿ ದಳಗಳನ್ನೂ ಭದ್ರತೆಗೆ ನಿಯೋಜಿಸಲಾಗಿದೆ. ಮೈದಾನದ ಪ್ರವೇಶ ದ್ವಾರದಲ್ಲಿ ಮೆಟಲ್ ಡಿಟೆಕ್ಟರ್​ಗಳನ್ನು ಅಳವಡಿಸಲಾಗಿದೆ.

ಬೆಲೆಏರಿಕೆ ವಿರುದ್ಧ ಯುದ್ಧ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮಾತನಾಡಿ, ಹಣದುಬ್ಬರ ಮತ್ತು ಬೆಲೆಏರಿಕೆ ವಿರುದ್ಧ ಪಕ್ಷವು ನಿರಂತರ ಹೋರಾಟ ನಡೆಸಲಿದೆ. ಸೆಪ್ಟೆಂಬರ್ 7ರಿಂದ ಕಾಂಗ್ರೆಸ್ ಪಕ್ಷವು ಭಾರತ್ ಜೋಡೋ ಯಾತ್ರಾ ಆರಂಭಿಸಲಿದ್ದು, ಪಕ್ಷದ ಹಲವು ಸಂಸದರು ಮತ್ತು ಸ್ಥಳೀಯ ನಾಯಕರು ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಯಾತ್ರೆಯು ಸಂಚರಿಸಲಿದೆ ಎಂದು ಅವರು ತಿಳಿಸಿದ್ದಾರೆ.

ವಿವಿಧ ರಾಜ್ಯಗಳಲ್ಲಿ ಸರ್ಕಾರಗಳನ್ನು ಕೆಡವುವ, ಶಾಸಕರನ್ನು ಖರೀದಿಸುವ ಕೆಲಸ ಮಾಡುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜನರ ಸಮಸ್ಯೆಗಳ ಬಗ್ಗೆ ಗಮನ ಕೊಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಳೆದ ಆಗಸ್ಟ್ 5ರಂದು ಕಾಂಗ್ರೆಸ್ ಕಾರ್ಯಕರ್ತರು ಬೆಲೆಏರಿಕೆ, ನಿರುದ್ಯೋಗ, ಜಿಎಸ್​ಟಿ ಹೆಚ್ಚಳ ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಕಪ್ಪು ಉಡುಪು ತೊಟ್ಟು ರ್‍ಯಾಲಿಯಲ್ಲಿ ಪಾಲ್ಗೊಂಡಿದ್ದರು.

Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ