AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ನಾಯಕರು ಬರಗಾಲ ಎದುರಿಸುತ್ತಿರುವುದಕ್ಕೆ ಇದು ನಿದರ್ಶನ: ವಿಪಕ್ಷ ನಾಯಕರಾಗಿ ಆರ್​.ಅಶೋಕ್​ ಆಯ್ಕೆಗೆ ಕಾಂಗ್ರೆಸ್ ಲೇವಡಿ

ಕರ್ನಾಟಕದ ಪ್ರತಿಪಕ್ಷ ನಾಯಕರನ್ನಾಗಿ ಶಾಸಕ ಆರ್​ ಅಶೋಕ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೊನೆಗೂ ಆಯ್ಕೆ ಮಾಡಲಾಗಿದೆ. ಸದ್ಯ ಈ ವಿಚಾರವಾಗಿ ಕಾಂಗ್ರೆಸ್​ ಟ್ವೀಟ್​ ಮಾಡಿದ್ದು, ಕನಕಪುರದಲ್ಲಿ ಠೇವಣಿ ಕಳೆದುಕೊಂಡು ಹೀನಾಯವಾಗಿ ಸೋತಿರುವ ಬಿಜೆಪಿ ಅಭ್ಯರ್ಥಿ ಈಗ ವಿರೋಧ ಪಕ್ಷದ ನಾಯಕ ಎಂದು ಆರ್​.ಅಶೋಕ್​ ಆಯ್ಕೆಗೆ ಕಾಂಗ್ರೆಸ್ ಲೇವಡಿ​ ಮಾಡಿದೆ.

ಬಿಜೆಪಿ ನಾಯಕರು ಬರಗಾಲ ಎದುರಿಸುತ್ತಿರುವುದಕ್ಕೆ ಇದು ನಿದರ್ಶನ: ವಿಪಕ್ಷ ನಾಯಕರಾಗಿ ಆರ್​.ಅಶೋಕ್​ ಆಯ್ಕೆಗೆ ಕಾಂಗ್ರೆಸ್ ಲೇವಡಿ
ವಿರೋಧ ಪಕ್ಷದ ನಾಯಕ ಆರ್​.ಅಶೋಕ್​
ಗಂಗಾಧರ​ ಬ. ಸಾಬೋಜಿ
|

Updated on:Nov 17, 2023 | 9:26 PM

Share

ಬೆಂಗಳೂರು, ನವೆಂಬರ್ 17: ಕನಕಪುರದಲ್ಲಿ ಠೇವಣಿ ಕಳೆದುಕೊಂಡು ಹೀನಾಯವಾಗಿ ಸೋತಿರುವ ಬಿಜೆಪಿ ಅಭ್ಯರ್ಥಿ ಈಗ ವಿರೋಧ ಪಕ್ಷದ ನಾಯಕ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿ ಆರ್​.ಅಶೋಕ್ (R. Ashok)​ ಆಯ್ಕೆಗೆ ಕಾಂಗ್ರೆಸ್ ಲೇವಡಿ​ ಮಾಡಿದೆ. ಈ ಕುರಿತಾಗಿ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್​, ವಿರೋಧ ಪಕ್ಷದ ನಾಯಕನಾಗಲು ಬೇಕಿರುವ ಜ್ಞಾನ, ಅರ್ಹತೆ ಯಾವುದೂ ಇಲ್ಲದ ನಕಲಿ ಸಾಮ್ರಾಟನೇ ಕೊನೆಯ ಆಯ್ಕೆಯಾಗಿದ್ದು ಬಿಜೆಪಿ ನಾಯಕರ ಬರಗಾಲ ಎದುರಿಸುತ್ತಿರುವುದಕ್ಕೆ ನಿದರ್ಶನ ಎಂದು ವ್ಯಂಗ್ಯ ಮಾಡಿದೆ.

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರಂತಹ ನಾಯಕರೆದುರು ತರಗೆಲೆಯಂತಹ ವ್ಯಕ್ತಿಯನ್ನು ತಂದು ಕೂರಿಸಿದೆ ಬಿಜೆಪಿ ಎಂದು ಕಾಂಗ್ರೆಸ್​ ಆಡಿಕೊಂಡಿದೆ.

ಕಾಂಗ್ರೆಸ್​ ಟ್ವೀಟ್​

ರಾಜ್ಯಕ್ಕೆ ವಿರೋಧ ಪಕ್ಷದ ನಾಯಕನನ್ನು ಕೊಡಿ ಎಂದರೆ ವಿರೋಧ ಪಕ್ಷವನ್ನೇ ವಿರೋಧಿಸುವ ನಾಯಕರನ್ನು ಬಿಜೆಪಿ ಕೊಡುತ್ತಿದೆ. ಯಾವುದೇ ಪಕ್ಷದಲ್ಲಿ ಮುಖ್ಯಮಂತ್ರಿ ಹುದ್ದೆಗೂ ಕಿತ್ತಾಡದಷ್ಟು ಬಿಜೆಪಿಯ ಕಿತ್ತಾಟ ಜೋರಾಗಿದೆ.

ಇದನ್ನೂ ಓದಿ: ಬಿವೈ ವಿಜಯೇಂದ್ರ, ನಾನು ಜೋಡೆತ್ತುಗಳಾಗಿ ಕೆಲಸ ಮಾಡುತ್ತೇವೆ: ವಿರೋಧ ಪಕ್ಷದ ನಾಯಕ ಆರ್​​ ಅಶೋಕ್

ಬಿಜೆಪಿ ನಾಯಕರು ಸೇರುವ ಜಾಗದಲ್ಲಿ ಕೋಲು, ದೊಣ್ಣೆ ಹಾಗೂ ಇತರೆ ಯಾವುದೇ ಆಯುಧವಾಗಿ ಬಳಸಬಹುದಾದ ವಸ್ತುಗಳನ್ನು ದೊರಕದಂತೆ ನೋಡಕೊಳ್ಳಬೇಕು. ಅಕಸ್ಮಾತ್ ಹೊಡೆದಾಡಿಕೊಂಡರೆ ಆಸ್ಪತ್ರೆಗಳಲ್ಲಿ ನೂಕುನುಗ್ಗಲಾಗುವ ಸಾಧ್ಯತೆ ಇರುತ್ತದೆ ಎಂದು ಕಾಂಗ್ರೆಸ್ ಕಿಡಿಕಾರಿದೆ.

ಇದನ್ನೂ ಓದಿ: ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಆರ್ ಅಶೋಕ ಆಯ್ಕೆಗೆ ಅಸಲಿ ಕಾರಣಗಳೇನು? ಇಲ್ಲಿದೆ ವಿವರ

ಚುನಾವಣೆ ಮುಗಿದು, ಸರ್ಕಾರ ರಚನೆಯಾಗಿ 6 ತಿಂಗಳು ಕಳೆದ ಮೇಲೆ ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕನ ಆಯ್ಕೆಗೆ ಜ್ಞಾನೋದಯವಾದಂತಿದೆ. ಈ ವಿಳಂಬಕ್ಕೆ ವ್ಯವಹಾರ ಕುದುರದಿರುವುದೇ ಕಾರಣವೇ ಎಂದು ಕಾಂಗ್ರೆಸ್​ ಪ್ರಶ್ನೆ ಮಾಡಿದೆ.

ವಿಪಕ್ಷ ನಾಯಕನ ಸ್ಥಾನಕ್ಕೆ ಇರುವ ಹರಾಜಿನ ಬೆಲೆ ಇದುವರೆಗೂ ಬಿಜೆಪಿಯ ಬಂಡಾಯ ನಾಯಕರು ಬಹಿರಂಗ ಪಡಿಸಿಲ್ಲ. ಮೊದಲು ಬಹಿರಂಗ ಪಡಿಸುವ ಬಿಜೆಪಿಯ ಬಂಡಾಯ ನಾಯಕರಿಗೆ ಕಾಂಗ್ರೆಸ್ ಪಕ್ಷದಿಂದ ಬಹುಮಾನ ನೀಡಲಾಗುವುದು. ಬಿಎಸ್​ ಯಡಿಯೂರಪ್ಪ ಮತ್ತು ಸಂತೋಷ್ ಗುಂಪುಗಳಿಗೆ ಮಾಹಿತಿ ನೀಡದೆ ಗೌಪ್ಯತೆ ಕಾಪಾಡಲಾಗುವುದು ಎಂದು ವಾಗ್ದಾಳಿ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:20 pm, Fri, 17 November 23

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!