AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಕಚೇರಿ ಶ್ರೀಮಂತರ ಚಹಾ ಹೋಟೆಲ್, ಇಲ್ಲಿ ಬಡವರ ಚಹಾ ಸಿಗಲ್ಲ; ಟ್ವೀಟ್​ ಮೂಲಕ ಕಾಂಗ್ರೆಸ್​ ವ್ಯಂಗ್ಯ

ಬಿಜೆಪಿ ಕಚೇರಿ ಶ್ರೀಮಂತರ ಚಹಾ ಹೋಟೆಲ್, ಇಲ್ಲಿ ಬಡವರ ಚಹಾ ಸಿಗಲ್ಲ ಎಂದು ಹೊರಗೆ ಟೀ ಕುಡಿಯಲು ಹೋದವರು ಜಗನ್ನಾಥ ಭವನದ ಎದುರು ಟೀ ಮಾರಿಕೊಂಡು ಕೂತಿದ್ದಾರಂತೆ, ಮೋದಿ ಮಾದರಿ! ಹೇ ಜಗನ್ನಾಥ ಪ್ರಭು, ನೀನೆಷ್ಟು ಕ್ರೂರಿ? "ಜಾರಿದವರ ಯತ್ನ ಬೆಲ್ಲ" ಆಗ್ಲಿಲ್ಲವಲ್ಲಪ್ಪ ಎಂದು ಟ್ವೀಟ್​ ಮೂಲಕ ಆಡಳಿತ ಪಕ್ಷ ಟೀಕಿಸಿದೆ.

ಬಿಜೆಪಿ ಕಚೇರಿ ಶ್ರೀಮಂತರ ಚಹಾ ಹೋಟೆಲ್, ಇಲ್ಲಿ ಬಡವರ ಚಹಾ ಸಿಗಲ್ಲ; ಟ್ವೀಟ್​ ಮೂಲಕ ಕಾಂಗ್ರೆಸ್​ ವ್ಯಂಗ್ಯ
ಕಾಂಗ್ರೆಸ್​ ಟ್ವೀಟ್​ ಮೂಲಕ ಬಿಜಿಪಿಗೆ ವ್ಯಂಗ್ಯ
ಪ್ರಸನ್ನ ಗಾಂವ್ಕರ್​
| Edited By: |

Updated on: Nov 18, 2023 | 3:45 PM

Share

ಬೆಂಗಳೂರು, ನ.18: ಕೊನೆಗೂ ಬಿಜೆಪಿ, ವಿರೋಧ ಪಕ್ಷದ ನಾಯಕನನ್ನು ನಿನ್ನೆ(ನ.17) ಆಯ್ಕೆ ಮಾಡಿದೆ. ಅದರಂತೆ ಬೆಂಗಳೂರಿನ ಪದ್ಮನಾಭನಗರದ ಶಾಸಕರಾಗಿರುವ ಆರ್​ ಅಶೋಕ ನೇಮಕವಾಗಿದ್ದು, ಇದೀಗ ಬಿಜೆಪಿ(BJP)ಯಲ್ಲಿ ಅಸಮಧಾನ ಸೃಷ್ಟಿಯಾಗಿದೆ. ಬೆಂಗಳೂರಿನ ಖಾಸಗಿ ಹೊಟೇಲ್​ವೊಂದರಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಆಗಮಿಸಿದ್ದ, ಬಸನಗೌಡ ಪಾಟೀಲ್​ ಯತ್ನಾಳ್(Basanagouda Patil Yatnal)​, ರಮೇಶ್​ ಜಾರಕಿಹೊಳಿ, ಬೆಲ್ಲದ್​ ಮೂವರು ಸಭೆ ಶುರುವಾಗುವ ಮುಂಚೆಯೇ ಹೊರನಡೆದಿದ್ದು, ಇದೀಗ ಆಡಳಿತ ಪಕ್ಷ ಕಾಂಗ್ರೆಸ್,​ ಟ್ವೀಟ್​ ಮೂಲಕ ಟೀಕಾ ಪ್ರಹಾರ ನಡೆಸಿದೆ.

‘ಬಿಜೆಪಿ ಕಚೇರಿ ಶ್ರೀಮಂತರ ಚಹಾ ಹೋಟೆಲ್, ಇಲ್ಲಿ ಬಡವರ ಚಹಾ ಸಿಗಲ್ಲ ಎಂದು ಹೊರಗೆ ಟೀ ಕುಡಿಯಲು ಹೋದವರು ಜಗನ್ನಾಥ ಭವನದ ಎದುರು ಟೀ ಮಾರಿಕೊಂಡು ಕೂತಿದ್ದಾರಂತೆ, ಮೋದಿ ಮಾದರಿ! ಹೇ ಜಗನ್ನಾಥ ಪ್ರಭು, ನೀನೆಷ್ಟು ಕ್ರೂರಿ? “ಜಾರಿದವರ ಯತ್ನ ಬೆಲ್ಲ” ಆಗ್ಲಿಲ್ಲವಲ್ಲಪ್ಪ ಎಂದು ಟ್ವೀಟ್​ ಮೂಲಕ ಟೀಕಿಸಿದೆ.

ಇದನ್ನೂ ಓದಿ:ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟದ ನಡುವೆ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ಶಿವರಾಮ್ ಹೆಬ್ಬಾರ್

ಲಿಂಗಾಯತ ನಾಯಕರನ್ನು ಬಳಸಿ ಬೀಸಾಡುವುದೇ ಬಿಜೆಪಿಯ ಅಜೆಂಡಾ

ಇನ್ನು ಮತ್ತೊಂದು ಟ್ವೀಟ್​ ಮಾಡಿರುವ ಕಾಂಗ್ರೆಸ್​ ‘ಲಿಂಗಾಯತ ನಾಯಕರನ್ನು ಬಳಸಿ ಬೀಸಾಡುವುದೇ ಬಿಜೆಪಿಯ ಅಜೆಂಡಾ ಎಂದಿದೆ. ಯಡಿಯೂರಪ್ಪರನ್ನು ಎರಡೆರಡು ಬಾರಿ ಕಣ್ಣೀರು ಹಾಕಿಸಿ ಹುದ್ದೆಯಿಂದ ಕೆಳಗಿಳಿಸಿ ಕಳಿಸಿತ್ತು, ಜಗದೀಶ್ ಶೆಟ್ಟರ್ ರವರನ್ನು ಅಧಿಕಾರದಿಂದ ದೂರವಿಟ್ಟು ವಂಚಿಸಿತ್ತು , ವಿ. ಸೋಮಣ್ಣರನ್ನು ವ್ಯವಸ್ಥಿತವಾಗಿ ಸೋಲಿನ ಹೊಂಡಕ್ಕೆ ತಳ್ಳಲಾಗಿತ್ತು, ಲಕ್ಷ್ಮಣ್ ಸವದಿಯವರನ್ನು ಮೂಲೆಗುಂಪು ಮಾಡಿ ಕೂರಿಸಲಾಗಿತ್ತು, ಈಗ ಸಿಎಂ ಆಗಿದ್ದ ಬೊಮ್ಮಾಯಿಯವರು ಆಟಕ್ಕೂ ಇಲ್ಲ, ಲೆಕ್ಕಕ್ಕೂ ಇಲ್ಲದಂತೆ ನಿರ್ಲಕ್ಷಿಸಲಾಗಿದೆ.

ಇದೇ ಮಾದರಿಯಲ್ಲಿ ವಿಜಯೇಂದ್ರರನ್ನು ಕೂಡ ಬಳಸಿ ಬೀಸಾಡಲು ತಂದಿರುವ ಹೊಸ “ಹರಕೆಯ ಕುರಿ” ಅಷ್ಟೇ ಎಂದು ಟ್ವೀಟ್​ ಮಾಡುವ ಮೂಲಕ ಬಿಜೆಪಿ ವಿರುದ್ದ ಟಾಂಗ್​ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್