AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಗ್ಗಟ್ಟಿನ ಮಂತ್ರ ರವಾನಿಸಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಮುಂದಿನ ಹಾದಿ ಹೆಚ್ಚು ಸವಾಲಿನಿಂದ ಕೂಡಿದೆ ಎಂದರು!

Sonia Gandhi: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲ ಹಂತಗಳಲ್ಲಿ ಒಗ್ಗಟ್ಟು ಅಗತ್ಯ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಹೇಳಿದ್ದಾರೆ. ಈ ಮೂಲಕ ಜಿ-23 ಭಿನ್ನಮತೀಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಸುಳಿವು ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಪುನಶ್ಚೇತನಕ್ಕೆ ಏನೆಲ್ಲಾ ಅಗತ್ಯ ಇದೆಯೋ ಅದನ್ನೆಲ್ಲಾ ಮಾಡಲು ತಾವು ಬದ್ದ ಎಂದು ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ಪುನಶ್ಚೇತನ ಕಾಂಗ್ರೆಸ್ ಗೆ ಮಾತ್ರವಲ್ಲ, ಪ್ರಜಾಪ್ರಭುತ್ವ ಹಾಗೂ ಸಮಾಜಕ್ಕೂ ಅಗತ್ಯ ಎಂದು ಸೋನಿಯಾಗಾಂಧಿ ಪ್ರತಿಪಾದಿಸಿದ್ದಾರೆ.

ಒಗ್ಗಟ್ಟಿನ ಮಂತ್ರ ರವಾನಿಸಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಮುಂದಿನ ಹಾದಿ ಹೆಚ್ಚು ಸವಾಲಿನಿಂದ ಕೂಡಿದೆ ಎಂದರು!
ಒಗ್ಗಟ್ಟಿನ ಮಂತ್ರ ರವಾನಿಸಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕಾಂಗ್ರೆಸ್ ಮುಂದಿನ ಹಾದಿ ಹೆಚ್ಚು ಸವಾಲಿನಿಂದ ಕೂಡಿದೆ ಎಂದರು!
S Chandramohan
| Updated By: ಸಾಧು ಶ್ರೀನಾಥ್​|

Updated on:Apr 05, 2022 | 4:17 PM

Share

ಕಾಂಗ್ರೆಸ್ ಪಕ್ಷದಲ್ಲಿ (Congress) ಎಲ್ಲ ಹಂತಗಳಲ್ಲಿ ಒಗ್ಗಟ್ಟು ಅಗತ್ಯ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. ಈ ಮೂಲಕ ಜಿ-23 ಭಿನ್ನಮತೀಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಸುಳಿವು ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಪುನಶ್ಚೇತನಕ್ಕೆ ಏನೆಲ್ಲಾ ಅಗತ್ಯ ಇದೆಯೋ ಅದನ್ನೆಲ್ಲಾ ಮಾಡಲು ತಾವು ಬದ್ದ ಎಂದು ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ಪುನಶ್ಚೇತನ ಕಾಂಗ್ರೆಸ್ ಗೆ ಮಾತ್ರವಲ್ಲ, ಪ್ರಜಾಪ್ರಭುತ್ವ ಹಾಗೂ ಸಮಾಜಕ್ಕೂ ಅಗತ್ಯ ಎಂದು ಸೋನಿಯಾಗಾಂಧಿ ಪ್ರತಿಪಾದಿಸಿದ್ದಾರೆ (AICC chairperson Sonia Gandhi).

ಕಾಂಗ್ರೆಸ್ ಮುಂದಿನ ಹಾದಿ ಹೆಚ್ಚು ಸವಾಲಿನಿಂದ ಕೂಡಿದೆ -ಸೋನಿಯಾ ಗಾಂಧಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಂದು ಪಕ್ಷದ ಸಂಸದರ ಸಭೆಯಲ್ಲಿ ಪಕ್ಷದ ಪಂಚ ರಾಜ್ಯ ಚುನಾವಣಾ ಸೋಲುನ್ನು “ಆಘಾತಕಾರಿ ಮತ್ತು ನೋವಿನ” ಚುನಾವಣಾ ಸೋಲುಗಳು ಎಂದಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ “ಎಲ್ಲಾ ಹಂತಗಳಲ್ಲಿ ಒಗ್ಗಟ್ಟು” ಅಗತ್ಯ ಎಂದು ಒತ್ತಿ ಹೇಳಿದ್ದಾರೆ.

ಕಾಂಗ್ರೆಸ್ ಅನ್ನು ಪುನರುಜ್ಜೀವನಗೊಳಿಸಲು ಕಠಿಣ ಕ್ರಮಗಳಿಗೆ ಕರೆ ನೀಡುತ್ತಿರುವ “G-23″ ಅಥವಾ 23 ಭಿನ್ನಮತೀಯರ ಗುಂಪಿಗೆ ಸಂದೇಶವನ್ನು ಕಳುಹಿಸಲು ಸೋನಿಯಾ ಗಾಂಧಿ, ಪಕ್ಷವನ್ನು ಹೇಗೆ ಬಲಪಡಿಸುವುದು ಎಂಬುದರ ಕುರಿತು ನಾನು ಅನೇಕ ಸಲಹೆಗಳನ್ನು ಸ್ವೀಕರಿಸಿದ್ದೇನೆ ಮತ್ತು ತಾನು ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು.

ಇತ್ತೀಚಿನ ಚುನಾವಣಾ ಫಲಿತಾಂಶಗಳಲ್ಲಿ ನೀವು ಎಷ್ಟು ನಿರಾಶೆಗೊಂಡಿದ್ದೀರಿ ಎಂದು ನನಗೆ ಚೆನ್ನಾಗಿ ತಿಳಿದಿದೆ. ಪಂಚ ರಾಜ್ಯ ಚುನಾವಣೆ ಸೋಲು ಆಘಾತಕಾರಿ ಮತ್ತು ನೋವುಂಟು ಮಾಡಿದೆ” ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯಲ್ಲಿ ಶ್ರೀಮತಿ ಸೋನಿಯಾ ಗಾಂಧಿ ಹೇಳಿದರು. ದೆಹಲಿಯ ಸಂಸತ್‌ ಭವನದ ಸೆಂಟ್ರಲ್ ಹಾಲ್ ನಲ್ಲಿ ಕಾಂಗ್ರೆಸ್ ಪಕ್ಷದ ಸಂಸದೀಯ ಸಭೆ ನಡೆದಿದೆ.

ನಮ್ಮ ಸಮರ್ಪಣೆ ಮತ್ತು ದೃಢತೆ, ನಮ್ಮ ಚೈತನ್ಯವು ತೀವ್ರ ಪರೀಕ್ಷೆಯಲ್ಲಿದೆ. ನಮ್ಮ ವಿಶಾಲ ಸಂಘಟನೆಯ ಎಲ್ಲಾ ಹಂತಗಳಲ್ಲಿ ಏಕತೆಯು ಅತ್ಯುನ್ನತ ಪ್ರಾಮುಖ್ಯತೆಯನ್ನು ಹೊಂದಿದೆ ಮತ್ತು ನನ್ನ ಪರವಾಗಿ ಮಾತನಾಡುತ್ತಾ, ಅದನ್ನು ಖಚಿತಪಡಿಸಿಕೊಳ್ಳಲು ಅಗತ್ಯವಿರುವ ಎಲ್ಲವನ್ನೂ ಮಾಡಲು ನಾನು ನಿರ್ಧರಿಸಿದ್ದೇನೆ ಎಂದು ಸೋನಿಯಾಗಾಂಧಿ ಹೇಳಿದ್ದಾರೆ.

ಕಳೆದ ತಿಂಗಳು ಐದು ರಾಜ್ಯಗಳ ಚುನಾವಣೆಯ ಫಲಿತಾಂಶದ ನಂತರ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಯನ್ನು ಉಲ್ಲೇಖಿಸಿದರು. ಕಾಂಗ್ರೆಸ್ ಪಂಜಾಬ್ ಅನ್ನು ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಕಳೆದುಕೊಂಡು ಮೂರು ರಾಜ್ಯಗಳಲ್ಲಿ ಪುನರಾಗಮನ ಮಾಡಲು ವಿಫಲವಾದ ನಂತರ, ನಾಯಕತ್ವ ಬದಲಾವಣೆಯ ಕೂಗಿನ ನಡುವೆ ನಡೆದ ಸಭೆಯಲ್ಲಿ ಶ್ರೀಮತಿ ಸೋನಿಯಾ ಗಾಂಧಿ ಅವರು ರಾಜೀನಾಮೆ ನೀಡಲು ಮುಂದಾಗಿದ್ದರು.

ರಾಜೀನಾಮೆ ಪ್ರಸ್ತಾಪವನ್ನು CWC ಯಿಂದ ತಿರಸ್ಕರಿಸಿದರೂ, “G-23″ ಮತ್ತು ಅದನ್ನು ಬೆಂಬಲಿಸುವವರು ದೊಡ್ಡ ಬದಲಾವಣೆಗಳಿಗೆ ಒತ್ತಾಯಿಸುತ್ತಿದ್ದಾರೆ. CWC ಯಲ್ಲಿ ನಮ್ಮ ಕಾರ್ಯಕ್ಷಮತೆಯನ್ನು ಪರಿಶೀಲಿಸಲು ಒಮ್ಮೆ ಭೇಟಿಯಾದೆವು. ನಾನು ಇತರ ಸಹೋದ್ಯೋಗಿಗಳನ್ನು ಭೇಟಿ ಮಾಡಿದ್ದೇನೆ. ನಮ್ಮ ಸಂಘಟನೆಯನ್ನು ಹೇಗೆ ಬಲಪಡಿಸಬೇಕು ಎಂಬುದರ ಕುರಿತು ನಾನು ಅನೇಕ ಸಲಹೆಗಳನ್ನು ಸ್ವೀಕರಿಸಿದ್ದೇನೆ. ಅನೇಕರು ಸಂಬಂಧಪಟ್ಟಂತೆ ಸಲಹೆ ನೀಡಿದ್ದಾರೆ. ನಾನು ಸಲಹೆಗಳ ಮೇಲೆ ಕೆಲಸ ಮಾಡುತ್ತಿದ್ದೇನೆ” ಎಂದು ಶ್ರೀಮತಿ ಸೋನಿಯಾಗಾಂಧಿ ಇಂದು ಹೇಳಿದರು.

ಚಿಂತನಾ ಶಿಬಿರ ಅಥವಾ ಆತ್ಮಾವಲೋಕನ ಸಭೆಯನ್ನು ಆಯೋಜಿಸುವುದು ಸಿಡಬ್ಲ್ಯೂಸಿಯಲ್ಲಿ ತೆಗೆದುಕೊಂಡ ನಿರ್ಧಾರಗಳಲ್ಲಿ ಒಂದಾಗಿದೆ. ಇದು “ಅತ್ಯಂತ ಅಗತ್ಯ” ಎಂದು ಅವರು ಹೇಳಿದರು. ಅಲ್ಲಿ ಹೆಚ್ಚಿನ ಸಂಖ್ಯೆಯ ಸಹೋದ್ಯೋಗಿಗಳು ಮತ್ತು ಪಕ್ಷದ ಪ್ರತಿನಿಧಿಗಳ ಅಭಿಪ್ರಾಯಗಳನ್ನು ಕೇಳಲಾಗುತ್ತದೆ. ನಾವು ಎದುರಿಸುತ್ತಿರುವ ಸವಾಲುಗಳನ್ನು ಹೇಗೆ ಉತ್ತಮವಾಗಿ ಎದುರಿಸಬೇಕು ಎಂಬುದರ ಕುರಿತು ನಮ್ಮ ಪಕ್ಷವು ತೆಗೆದುಕೊಳ್ಳಬೇಕಾದ ತುರ್ತು ಕ್ರಮಗಳ ಬಗ್ಗೆ ಸ್ಪಷ್ಟ ಮಾರ್ಗಸೂಚಿಯನ್ನು ಮುಂದಿಡಲು ಅವರು ಕೊಡುಗೆ ನೀಡುತ್ತಾರೆ ಎಂದು ಸೋನಿಯಾಗಾಂಧಿ ಹೇಳಿದ್ದರು.

ಮುಂದಿನ ಹಾದಿಯು “ಹಿಂದಿಗಿಂತಲೂ ಹೆಚ್ಚು ಸವಾಲಿನಿಂದ ಕೂಡಿದೆ” ಎಂದು ಕರೆದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ “ನಮ್ಮ ಪುನರುಜ್ಜೀವನವು ನಮಗೆ ಮಾತ್ರ ಪ್ರಾಮುಖ್ಯತೆಯ ವಿಷಯವಲ್ಲ , ಇದು ವಾಸ್ತವವಾಗಿ, ನಮ್ಮ ಪ್ರಜಾಪ್ರಭುತ್ವಕ್ಕೆ ಮತ್ತು ನಮ್ಮ ಸಮಾಜಕ್ಕೆ ಅತ್ಯಗತ್ಯವಾಗಿದೆ ಎಂದು ಹೇಳಿದರು. ಭಾರತದ ಆಲಿಪ್ತ ನೀತಿಯು ನಮ್ಮ ವಿದೇಶಾಂಗ ನೀತಿಯ ತಳಹದಿ. ಆದರೇ, ಆಲಿಪ್ತ ನೀತಿಯನ್ನು ಇದುವರೆಗೂ ಸಾಕಷ್ಟು ಟೀಕಿಸಲಾಗಿತ್ತು. ಆದರೇ, ಈಗ ಆಲಿಪ್ತ ನೀತಿಯನ್ನು ಆ ರೀತಿ ಟೀಕಿಸದೇ ಒಪ್ಪಿಕೊಂಡಿದ್ದಾರೆ. ಇದು ಸಂತೋಷದ ವಿಷಯ ಎಂದು ರಷ್ಯಾ-ಉಕ್ರೇನ್ ಯುದ್ದದ ವಿಷಯದಲ್ಲಿ ಭಾರತ ಸರ್ಕಾರವು ಆಲಿಪ್ತ ನೀತಿಯನ್ನು ಅನುಸರಿಸಿದ್ದನ್ನು ಸೋನಿಯಾಗಾಂಧಿ ಪ್ರಸ್ತಾಪಿಸಿದರು.

ಸಭೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ರಾಹುಲ್ ಗಾಂಧಿ ಕೂಡ ಉಪಸ್ಥಿತರಿದ್ದರು.

Published On - 4:16 pm, Tue, 5 April 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?