Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದೊಳಗೆ ನುಗ್ಗಿ ಜೆಡಿಎಸ್ ಭದ್ರಕೋಟೆಯನ್ನ ಛಿದ್ರ ಗೊಳಿಸಿದ ಕಾಂಗ್ರೆಸ್​ ಮುಂದಿದೆ ಮತ್ತೊಂದು ಟಾರ್ಗೆಟ್

ಜೆಡಿಎಸ್ ಭದ್ರಕೋಟೆ ಮಂಡ್ಯಕ್ಕೆ ನುಗ್ಗಿ ಕಾಂಗ್ರೆಸ್ ಕಮಾಲ್ ಮಾಡಿದೆ. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್​ ಭದ್ರಕೋಟೆಯನ್ನು ಛಿದ್ರಗೊಳಿಸಿದೆ. ಇದೀಗ ಮತ್ತೊಂದು ಅಧಿಕಾರದ ಮೇಲೆ ಕೈ ಪಡೆ ಕಣ್ಣಿಟ್ಟಿದೆ.

ಮಂಡ್ಯದೊಳಗೆ ನುಗ್ಗಿ ಜೆಡಿಎಸ್ ಭದ್ರಕೋಟೆಯನ್ನ ಛಿದ್ರ ಗೊಳಿಸಿದ ಕಾಂಗ್ರೆಸ್​ ಮುಂದಿದೆ ಮತ್ತೊಂದು ಟಾರ್ಗೆಟ್
ಕಾಂಗ್ರೆಸ್- ಜೆಡಿಎಸ್
Follow us
ರಮೇಶ್ ಬಿ. ಜವಳಗೇರಾ
|

Updated on: May 25, 2023 | 6:52 AM

ಮಂಡ್ಯ: ಸಕ್ಕರೆ ನಾಡು ಮಂಡ್ಯ (Mandya) ಜಿಲ್ಲೆಯಲ್ಲಿ ಜೆಡಿಎಸ್ (JDS)​ ಭದ್ರಕೋಟೆಯನ್ನು ಕಾಂಗ್ರೆಸ್ ಛಿದ್ರಗೊಳಿಸಿದೆ. ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ಮಂಡ್ಯ ಜಿಲ್ಲೆಯ 7 ಕ್ಷೇತ್ರಗಳ ಪೈಕಿ ಸ್ಪರ್ಧಿಸಿದ್ದ 6 ಕ್ಷೇತ್ರಗಳಲ್ಲಿ 5ರಲ್ಲಿ ಗೆದ್ದಿದೆ. ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್​ ಜಿಲ್ಲೆಯ 7ಕ್ಕೆ 7 ಕ್ಷೇತ್ರಗಳಲ್ಲಿ ಗೆದ್ದು ಬೀಗಿತ್ತು. ಆದರೆ ಕೆಆರ್​ ಪೇಟೆ ಶಾಸಕ ಬಿಜೆಪಿ ಸೇರಿದ್ದರಿಂದ ಉಪಚುನಾವಣೆಯಲ್ಲಿ ಒಂದು ಕ್ಷೇತ್ರ ಕಳೆದುಕೊಂಡಿತ್ತು. ಆದರೆ ಈ ಬಾರಿ ಕಾಂಗ್ರೆಸ್​ ಮಂಡ್ಯ ಜಿಲ್ಲೆಯಲ್ಲಿ ಅಭೂತಪರ್ವ ಯಶಸ್ಸು ಸಾಧಿಸಿದೆ. ಕಾಂಗ್ರೆಸ್ ಸ್ಪರ್ಧಿಸಿದ್ದ 6 ಕ್ಷೇತ್ರಗಳಲ್ಲಿ 5ರಲ್ಲಿ ಗೆಲುವಿನ ನಗೆ ಬೀರಿ ಜೆಡಿಎಸ್​ ಪಕ್ಷವನ್ನು ಧೂಳೀಪಟ ಮಾಡಿದೆ. ಜೆಡಿಎಸ್​ ಭದ್ರಕೋಟೆಯೊಳಗೆ ನುಗ್ಗಿ ಕಮಾಲ್ ಮಾಡಿರುವ ಕಾಂಗ್ರೆಸ್​ ಮುಂದೆ ಮತ್ತೊಂದು ಟಾರ್ಗೆಟ್ ಇದೆ.

ಇದನ್ನೂ ಓದಿ: ಹೊಸ ಟ್ರೆಂಡ್ ಸೃಷ್ಠಿಸಿದ ಮಂಡ್ಯದ ಮನ್ಮೂಲ್: ಮಂಡ್ಯದ ಬೆಲ್ಲದ ಬರ್ಫಿಗೆ ಭಾರಿ ಡಿಮ್ಯಾಂಡ್ ಮಾರಾಯ್ರೆ

ಹೌದು… ಜೆಡಿಎಸ್ ಭದ್ರಕೋಟೆಯನ್ನು ಬೇಧಿಸಿರುವ ಕಾಂಗ್ರೆಸ್​ಗೆ ಮುಂದಿನ ಟಾರ್ಗೆಟ್ ಮನ್ಮೂಲ್. ಜೆಡಿಎಸ್ ತೆಕ್ಕೆಯಲ್ಲಿರುವ ಮನ್ಮೂಲ್ಅನ್ನು ಸಹ ಶತಾಯ ಗತಾಯವಾಗಿ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಕಾಂಗ್ರೆಸ್​ ಕಸರತ್ತು ನಡೆಸಿದೆ. ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬರುತ್ತಿದ್ದಂತೆ ಫುಲ್ ಆಕ್ಟೀವ್ ಆದ ಕೈ ಪಡೆ, ಮನ್ಮುಲ್ ಆಡಳಿತ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್, ಆಪರೇಷನ್ ಹಸ್ತಕ್ಕೆ ಮಾಸ್ಟರ್ ಪ್ಲಾನ್ ಮಾಡಿದೆ

ಈಗಾಗಲೇ ಆಪರೇಷನ್ ಹಸ್ತಕ್ಕೆ ಸಕಲ ಸಿದ್ದತೆ ನಡೆಸಿರುವ ಜಿಲ್ಲೆಯ ಕೈ ನಾಯಕರು, ಹಿರಿಯ ನಾಯಕರಿಂದ ಗ್ರೀನ್ ಸಿಗ್ನಲ್ ದೊರೆಯುತ್ತಿದ್ದಂತೆ ಆಪರೇಷನ್ ಹಸ್ತಕ್ಕೆ ಅಧಿಕೃತ ಚಾಲನೆ ನೀಡಲಿದ್ದಾರೆ. ಮನ್ಮುಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ.ಆರ್ ರಾಮಚಂದ್ರು ಮಂಡ್ಯದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಜಿತ ಗೊಂಡಿದ್ದರು.

12 ನಿರ್ದೇಶಕರು ಹಾಗೂ 4 ಸರ್ಕಾರದ ನಾಮ ನಿರ್ದೇಶಿತರಿರುವ ಮನ್ಮೂಲ್ ಆಡಳಿತ ಮಂಡಳಿ ತೆಕ್ಕೆಗೆ ತೆಗೆದುಕೊಳ್ಳಲು 9 ಮಂದಿ ನಿರ್ದೇಶಕರ ಬೆಂಬಲ ಬೇಕು. ಸದ್ಯ 12 ಜನ ನಿರ್ದೇಶಕರಲ್ಲಿ ಜೆಡಿಎಸ್ ಬೆಂಬಲಿತರು 7 ಜನ, ಕಾಂಗ್ರೆಸ್ ಬೆಂಬಲಿತರು 3 ಜನ ಹಾಗೂ 2 ಬಿಜೆಪಿ ಬೆಂಬಲಿತರಿದ್ದಾರೆ. 3 ಜನ ನಿರ್ದೇಶಕರು ಸೇರಿ ನಾಮನಿರ್ದೇಶನದ 4 ಜನರ ಬೆಂಬಲ ಕಾಂಗ್ರೆಸ್ ಗೆ ಲಭಿಸಲಿದೆ. ಇನ್ನು ಇಬ್ಬರನ್ನ ಆಪರೇಷನ್ ಹಸ್ತ ನಡೆಸಲು ಕಾಂಗ್ರೆಸ್ ಚಿಂತನೆ ನಡೆಸಿದ್ದು, ಒಂದು ವೇಳೆ ಇಬ್ಬರು ನಿರ್ದೇಶಕರ ಆಪರೇಷನ್ ಸಕ್ಸಸ್ ಆದರೆ ಅದ್ಯಕ್ಷ ಗಾದಿ ಕೈ ನಾಯಕರ ಪಾಲಾಗುವುದು ಗ್ಯಾರಂಟಿ. ಇನ್ನು ಆಡಳಿತರೂಢ ಕಾಂಗ್ರೆಸ್​ಗೆ ಜೆಡಿಎಸ್​ ಹೇಗೆ ಪ್ರತಿರೋಧವಾಗಿ ನಿಲ್ಲಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ