AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚುವರಿ ಅಕ್ಕಿ ಪೂರೈಸಲು ಕೇಂದ್ರ ನಿರಾಕರಣೆ, ಸರ್ಕಾರದ ನಡೆ ಖಂಡಿಸಿ ನಾಳೆ ಕಾಂಗ್ರೆಸ್ ಪ್ರತಿಭಟನೆ: ಡಿಸಿಎಂ ಡಿಕೆ ಶಿವಕುಮಾರ್

ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊರೆತ ಉಂಟಾಗಿದೆ. ಹೆಚ್ಚುವರಿ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ನಿರಾಕರಣೆ ಮಾಡುತ್ತಿದ್ದು, ಈ ಹಿನ್ನಲೆ ಕೇಂದ್ರದ ನಡೆ ಖಂಡಿಸಿ ನಾಳೆ ಕಾಂಗ್ರೆಸ್​ ಪ್ರತಿಭಟನೆ ನಡೆಸಲಿದೆ ಎಂದು ಬೆಂಗಳೂರಿನ ಸದಾಶಿವನಗರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಹೆಚ್ಚುವರಿ ಅಕ್ಕಿ ಪೂರೈಸಲು ಕೇಂದ್ರ ನಿರಾಕರಣೆ, ಸರ್ಕಾರದ ನಡೆ ಖಂಡಿಸಿ ನಾಳೆ ಕಾಂಗ್ರೆಸ್ ಪ್ರತಿಭಟನೆ: ಡಿಸಿಎಂ ಡಿಕೆ ಶಿವಕುಮಾರ್
ಡಿಸಿಎಂ ಡಿ.ಕೆ.ಶಿವಕುಮಾರ್
Follow us
ಗಂಗಾಧರ​ ಬ. ಸಾಬೋಜಿ
|

Updated on: Jun 19, 2023 | 3:00 PM

ಬೆಂಗಳೂರು: ಹೆಚ್ಚುವರಿ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ನಿರಾಕರಣೆ ಮಾಡುತ್ತಿದ್ದು, ಹಾಗಾಗಿ ಕೇಂದ್ರದ ನಡೆ ಖಂಡಿಸಿ ನಾಳೆ ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ಮಾಡುತ್ತೇವೆ. ನಾನು ನಗರದ ಪ್ರತಿಭಟನೆಯಲ್ಲಿ ಭಾಗಿಯಾಗುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದರು. ಸದಾಶಿವನಗರದಲ್ಲಿ ಮಾತನಾಡಿದ ಅವರು, ನಾಳೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುತ್ತೇವೆ. ಬಡವರಿಗೆ ಅಕ್ಕಿ ನೀಡದೆ ಕೇಂದ್ರವು ತೊಂದರೆ ನೀಡಲು ಹೊರಟಿದೆ. ಅಕ್ಕಿ ನೀಡಲು ನಿಯಮ, ಪದ್ಧತಿ ಇದೆ, ಪುಕ್ಕಟೆ ಏನು ಕೊಡಲ್ಲ ಎಂದಿದ್ದಾರೆ.

ಹೈಕಮಾಂಡ್​ ಭೇಟಿಗೆ ಎಲ್ಲಾ ಸಚಿವರು ಸಮಯ ಕೇಳಿದ್ದೇವೆ. ಸಮಯ ನೀಡಿದರೆ ಎಲ್ಲಾ ಸಚಿವರು ಹೈಕಮಾಂಡ್ ಭೇಟಿಯಾಗುತ್ತೇವೆ. ಹೈಕಮಾಂಡ್ ಭೇಟಿ ವೇಳೆ ಗ್ರೂಪ್​​ ಫೋಟೋ ಇದೆ ಎಂದು ಹೇಳಿದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಅಕ್ಕಿ ಇಲ್ಲ, ಇದ್ದರೆ ಕೊಡಿಸಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಬಡವರಿಗೆ ದ್ರೋಹ ಮಾಡುವ ಪಾರ್ಟಿ

ಅಕ್ಕಿ ಕೊಡುತ್ತೇವೆಂದಿದ್ದ FCI ನಂತರ ಸಾಧ್ಯವಿಲ್ಲವೆಂದು ಪತ್ರ ಬರೆದಿತ್ತು. ಇದರೊಂದಿಗೆ ಕೇಂದ್ರ ಸರ್ಕಾರದ ದ್ವೇಷದ ರಾಜಕಾರಣ ಮಾಡುತ್ತಿದೆ. ಭಾರತೀಯ ಜನತಾ ಪಕ್ಷ ಬಡವರ ಹೊಟ್ಟೆ ಮೇಲೆ ಹೊಡೆದಿದೆ. ಬಿಜೆಪಿ ಬಡವರಿಗೆ ದ್ರೋಹ ಮಾಡುವ ಪಾರ್ಟಿ. ಭಾರತೀಯ ಜನತಾ ಪಕ್ಷದ ನಿರ್ಧಾರಕ್ಕೆ ನಾವು ಧಿಕ್ಕಾರ ಹೇಳಬೇಕು. ಹೀಗಾಗಿ ಕೇಂದ್ರ ಸರ್ಕಾರ, ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Anna Bhagya: ರಾಜ್ಯದಲ್ಲಿ ಅಕ್ಕಿ ಇದ್ದರೇ ಟೆಂಡರ್​ ಮೂಲಕ ಖರೀದಿ: ಸಿಎಂ ಸಿದ್ದರಾಮಯ್ಯ

ಜೂನ್ 12ರಂದು 2 ಲಕ್ಷ ಮೆಟ್ರಿಕ್ ಟನ್ ಅಕ್ಕಿ ನೀಡುತ್ತೇವೆ ಎಂದು ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ ಹೇಳಿತ್ತು. ಆಮೇಲೆ ಮತ್ತೊಂದು ಪತ್ರ ಬರೆದು ಕೊಡಲು ಆಗುವುದಿಲ್ಲ ಎಂದು ಹೇಳಿದ್ದಾರೆ. ಇದರೊಂದಿಗೆ ಬಿಜೆಪಿ ದ್ವೇಷದ ರಾಜಕೀಯ ಮಾಡುತ್ತಿದೆ. ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ ಎಂದಿದ್ದರು.

ಆರ್​.ಅಶೋಕ್ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಟಾಂಗ್

ಸಂಸದ ಡಿ.ಕೆ.ಸುರೇಶ್ ರಾಜಕೀಯದ ಬಗ್ಗೆ ವೈರಾಗ್ಯದ ಮಾತು ವಿಚಾರವಾಗಿ ಮಾತನಾಡಿದ ಅವರು, ಡಿ.ಕೆ.ಸುರೇಶ್​​ ಪ್ರಜ್ಞಾವಂತ, ಅನುಭವಿ ನಾಯಕ. ಅವರು ಯಾವುದೇ ವೈರಾಗ್ಯ ಇಲ್ಲ. ಆರ್​.ಅಶೋಕ್ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ ಅದನ್ನು ನೋಡಲಿ. ಮೊದಲು ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಿ ಎಂದು ಟಾಂಗ್​ ಕೊಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕಾನೂನು ಪ್ರಕ್ರಿಯೆ ಮೂಲಕ ಜನಾರ್ಧನ ರೆಡ್ಡಿಗೆ ರಿಲೀಫ್: ಶ್ರೀರಾಮುಲು
ಕಾನೂನು ಪ್ರಕ್ರಿಯೆ ಮೂಲಕ ಜನಾರ್ಧನ ರೆಡ್ಡಿಗೆ ರಿಲೀಫ್: ಶ್ರೀರಾಮುಲು
ವಿಡಿಯೋ ಮಾಡೋದು ನಿಲ್ಲಿಸು; ಡ್ರಗ್ ಪಾರ್ಟಿ ವೇಳೆ ಪೊಲೀಸರಿಗೆ ಮಂಗ್ಲಿ ಆವಾಜ್
ವಿಡಿಯೋ ಮಾಡೋದು ನಿಲ್ಲಿಸು; ಡ್ರಗ್ ಪಾರ್ಟಿ ವೇಳೆ ಪೊಲೀಸರಿಗೆ ಮಂಗ್ಲಿ ಆವಾಜ್
ಮಂತ್ರಿ ಸ್ಥಾನ ಒಲ್ಲೆಯೆನ್ನಲು ನಾನೇನು ಸನ್ಯಾಸಿಯೇ? ಬಸವರಾಜು, ಶಾಸಕ
ಮಂತ್ರಿ ಸ್ಥಾನ ಒಲ್ಲೆಯೆನ್ನಲು ನಾನೇನು ಸನ್ಯಾಸಿಯೇ? ಬಸವರಾಜು, ಶಾಸಕ
ಇಬ್ಬರು ಬೇರೆ ಬೇರೆ ಜಾತಿಯವರು; ಯುವತಿ ಎಸ್​ಸಿಯಾದರೆ ಯುವಕ ಗೌಡಾಸ್!
ಇಬ್ಬರು ಬೇರೆ ಬೇರೆ ಜಾತಿಯವರು; ಯುವತಿ ಎಸ್​ಸಿಯಾದರೆ ಯುವಕ ಗೌಡಾಸ್!
ಸಂಸದ ಇ ತುಕಾರಾಂ ಮತ್ತು ಶಾಸಕ ಭರತ್ ರೆಡ್ಡಿ ಮನಗಳ ಮೇಲೂ ಈಡಿ ದಾಳಿ
ಸಂಸದ ಇ ತುಕಾರಾಂ ಮತ್ತು ಶಾಸಕ ಭರತ್ ರೆಡ್ಡಿ ಮನಗಳ ಮೇಲೂ ಈಡಿ ದಾಳಿ
ಹನುಮಾನ್ ಭಕ್ತರೊಬ್ಬರ ಅಂತ್ಯಕ್ರಿಯೆಗೆ ಬಂದ ಕೋತಿ
ಹನುಮಾನ್ ಭಕ್ತರೊಬ್ಬರ ಅಂತ್ಯಕ್ರಿಯೆಗೆ ಬಂದ ಕೋತಿ
ಶ್ರೀಕಾಂತ್ ಮತ್ತವನ ತಂಡದಿಂದ ಮಚ್ಚಿನಿಂದ ಹಲ್ಲೆ, ಹಂತಕರು ಪರಾರಿ
ಶ್ರೀಕಾಂತ್ ಮತ್ತವನ ತಂಡದಿಂದ ಮಚ್ಚಿನಿಂದ ಹಲ್ಲೆ, ಹಂತಕರು ಪರಾರಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ