AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ರೌಡಿ ಮೋರ್ಚಾ ಸೇರಲು ಬೇಡಿಕೆ ಹೆಚ್ಚುತ್ತಿದೆಯಂತೆ! ಬಿಜೆಪಿ ವಿರುದ್ಧ ಟ್ವೀಟ್ ದಾಳಿ ಮುಂದುವರೆಸಿದ ಕಾಂಗ್ರೆಸ್

ಬಿಜೆಪಿ ನಾಯಕರು ರೌಡಿಶೀಟರ್​ಗಳೊಂದಿಗೆ ವೇದಿಕೆಯಲ್ಲಿ ಕಾಣಿಸಿಕೊಂಡ ವಿಚಾರ ಭಾರೀ ಚರ್ಚೆಗೆ ಎಡೆ ಮಾಡಿದೆ. ಕಳೆದ ಕೆಲವು ದಿನಗಳಿಂದ ಬಿಜೆಪಿ ಕಾಂಗ್ರೆಸ್ ನಡುವೆ ಕೆಸರೆರೆಚಾಟ ನಡೆಯುತ್ತಿದೆ. ಇಂದು ಕೂಡ ಕಾಂಗ್ರೆಸ್ ಈ ಬಗ್ಗೆ ಸರಣಿ ಟ್ವೀಟ್ ಮಾಡುವ ಮೂಲಕ ವಾಗ್ದಾಳಿ ನಡೆಸಿದೆ.

ಬಿಜೆಪಿ ರೌಡಿ ಮೋರ್ಚಾ ಸೇರಲು ಬೇಡಿಕೆ ಹೆಚ್ಚುತ್ತಿದೆಯಂತೆ! ಬಿಜೆಪಿ ವಿರುದ್ಧ ಟ್ವೀಟ್ ದಾಳಿ ಮುಂದುವರೆಸಿದ ಕಾಂಗ್ರೆಸ್
ಬಿಜೆಪಿ ಮತ್ತು ಕಾಂಗ್ರೆಸ್
TV9 Web
| Edited By: |

Updated on:Dec 05, 2022 | 2:28 PM

Share

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ರಾಜ್ಯ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಯಾತ್ರೆಗಳ ಮೂಲಕ ಜನರನ್ನು ತಲುಪುವ ಪ್ರಯತ್ನಗಳನ್ನು ಮಾಡುತ್ತಿವೆ. ಆದ್ರೆ ಬಿಜೆಪಿ ನಾಯಕರು ರೌಡಿಶೀಟರ್​ಗಳೊಂದಿಗೆ ವೇದಿಕೆಯಲ್ಲಿ ಕಾಣಿಸಿಕೊಂಡ ವಿಚಾರ ಭಾರೀ ಚರ್ಚೆಗೆ ಎಡೆ ಮಾಡಿದೆ. ಇದೇ ವಿಚಾರವಾಗಿ ಕಳೆದ ಕೆಲವು ದಿನಗಳಿಂದ ಬಿಜೆಪಿ ಕಾಂಗ್ರೆಸ್ ನಡುವೆ ಕೆಸರೆರೆಚಾಟ ನಡೆಯುತ್ತಿದೆ. ಇಂದು ಕೂಡ ಕಾಂಗ್ರೆಸ್ ಈ ಬಗ್ಗೆ ಸರಣಿ ಟ್ವೀಟ್ ಮಾಡುವ ಮೂಲಕ ವಾಗ್ದಾಳಿ ನಡೆಸಿದೆ.

ಬಿಜೆಪಿ ರೌಡಿ ಮೋರ್ಚಾ ಸೇರಲು ಬೇಡಿಕೆ ಹೆಚ್ಚುತ್ತಿದೆ

ಮುಂಬರುವ ಚುನಾವಣೆಗೆ ಬಿಜೆಪಿ ರೌಡಿ ಮೋರ್ಚಾ ಸೇರಲು ಬೇಡಿಕೆ ಹೆಚ್ಚುತ್ತಿದೆ. ಒಬ್ಬರ ಮೇಲೆ ಒಬ್ಬರಂತೆ ಬಿಜೆಪಿ ನಾಯಕರು ರೌಡಿಗಳ ಸಮರ್ಥನೆಗೆ ಇಳಿದಿರುವಾಗ ರೌಡಿಗಳಿಗೂ ಬಿಜೆಪಿ ಮೇಲೆ ಪ್ರೇಮ ಉಕ್ಕಿ ಹರಿಯುತ್ತಿದೆ. ಬಿಜೆಪಿ ರೌಡಿ ಮೋರ್ಚಾದ ಉದ್ಘಾಟನೆ ಯಾವಾಗ? ಉದ್ಘಾಟನೆಗೆ ಅಮಿತ್ ಶಾ ಬರುವರೇ, ಅಥವಾ ಬೊಮ್ಮಾಯಿಯವರೇ ಟೇಪ್ ಕಟ್ ಮಾಡುತ್ತಾರಾ? ಎಂದು ಕಾಂಗ್ರೆಸ್ ಟೀಕೆ ಮಾಡಿದೆ.

ಪ್ರಜಾಪ್ರಭುತ್ವ ಹಾಗೂ ಸಾಂವಿಧಾನಿಕ ಆಶಯಗಳನ್ನು ಮುಗಿಸಲೆಂದೇ ಬಿಜೆಪಿ ರೌಡಿ ಮೋರ್ಚಾ ಕಟ್ಟುತ್ತಿದೆ. ಸಾಂವಿಧಾನಿಕ ಆಶಯದ ಮಾದರಿಯಲ್ಲಿ ಪ್ರತಿಭಟಿಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಲು ಬಿಜೆಪಿಯ ರೌಡಿ ಮೋರ್ಚಾ ಪಡೆ ಮುಂದಾಗಿದೆ. ಇಂತಹ ಹಲ್ಲೆಗಳನ್ನು ಹೆಚ್ಚಿಸಲೆಂದೇ ರೌಡಿ ಮೋರ್ಚಾ ಕಟ್ಟುತ್ತಿದ್ದೀರಾ?

ರೌಡಿಗಳನ್ನು ರೌಡಿಗಳೆನ್ನಬೇಡಿ. ಇದು ಮಾಜಿ ರೌಡಿ ಶೀಟರ್ ಸಿಟಿ ರವಿ ಫಾರ್ಮಾನು. ರೌಡಿ ಮೋರ್ಚಾದ ತಯಾರಿ ನಡೆಸಿರುವ ಬಿಜೆಪಿ ಈಗ ರೌಡಿಗಳ ಪರವಾಗಿ ನಿರ್ಲಜ್ಜವಾಗಿ ಸಮರ್ಥನೆಗೆ ಇಳಿದಿದೆ, ತಾವೂ ರೌಡಿಗಳಾಗಿದ್ದೆವು ಎಂಬುದನ್ನೂ ಒಪ್ಪುತ್ತಿದ್ದಾರೆ. “ರೌಡಿಗಳಿಂದ, ರೌಡಿಗಳಿಗಾಗಿ, ರೌಡಿಗಳಿಗೋಸ್ಕರ” ಇದು ಬಿಜೆಪಿಯ ಹೊಸ ದ್ಯೇಯವಾಕ್ಯ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಪರೋಡಿಗಳಿಂದ ರೌಡಿಗಳ ಸಮರ್ಥನೆ

ಬಿಜೆಪಿ ಸೇರಿದರೆ ಸಮಾಜಘಾತುಕರಿಗೂ ಸಮಾಜ ಸೇವಕರ ಬಿರುದು ನೀಡಲಾಗುತ್ತದೆ ಎಂಬುದಕ್ಕೆ ಸಂಸದ ಪ್ರತಾಪ್ ಸಿಂಹ ಅವರ ರೌಡಿಗಳ ಪರ ಸಮರ್ಥನೆಯೇ ಸಾಕ್ಷಿ. ಕೊಲೆ, ಸುಲಿಗೆ, ದರೋಡೆ ಮಾಡಿದವರಿಗೆ ರೆಡ್ ಕಾರ್ಪೆಟ್ ಹಾಕುತ್ತಿರುವ ಬಿಜೆಪಿ ನಿರ್ಲಜ್ಜತನದ ಪರಮಾವಧಿಯನ್ನು ತಲುಪಿದೆ. ಬಿಜೆಪಿಯ ಅಸಲಿ ಸಂಸ್ಕೃತಿ ಬೆತ್ತಲಾಗಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ.

ಬಿಜೆಪಿ ಮುಂದೆ ಭಯೋತ್ಪಾದಕರನ್ನೂ ಸೇರಿಸಿಕೊಳ್ಳಲಿದೆ

ಇನ್ನು ಮತ್ತೊಂದೆಡೆ ಬಿಜೆಪಿಗೆ ರೌಡಿ ಶೀಟರ್‌ಗಳ ಸೇರ್ಪಡೆ ಆರೋಪ ವಿಚಾರಕ್ಕೆ ಸಂಬಂಧಿಸಿ ಟ್ವೀಟ್ ಮೂಲಕ ಡಾ ಎಚ್​ಸಿ ಮಹದೇವಪ್ಪ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಮುಂದೆ ಭಯೋತ್ಪಾದಕರನ್ನೂ ಸೇರಿಸಿಕೊಳ್ಳಲಿದೆ ಎಂದು ಟ್ವೀಟ್ ಮೂಲಕ ಗಂಭೀರ ಅರೋಪ ಮಾಡಿದ್ದಾರೆ.

ಬಿಜೆಪಿ ಏನೇನೂ ಸಮರ್ಥನೆ ನೀಡಿ 30 – 40 ಕೊಲೆ ಮಾಡಿರುವ ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದೆ. ಭಯೋತ್ಪಾದಕರನ್ನು ಪಕ್ಷಕ್ಕೆ ಸೇರಿಸಿಕೊಂಡು ದೇಶಪ್ರೇಮಿಗಳು ಅನ್ನಬಹುದು. ಸಿ.ಟಿ. ರವಿ ಪದೇ ಪದೇ ಇಸ್ಲಾಂಬಾದ್‌ನಲ್ಲಿ ನಮ್ಮ ಧ್ವಜ ಹಾರಿಸುತ್ತೇವೆ ಅನ್ನುತ್ತಾರೆ. ಇದೆಲ್ಲಾ ನೋಡಿದರೆ ಭಯೋತ್ಪಾದಕರನ್ನು ಸೇರಿಸಿಕೊಳ್ಳೋದು ಖಚಿತ ಎಂದು ಟ್ವೀಟ್ ಮಾಡಿದ್ದಾರೆ.

Published On - 12:01 pm, Mon, 5 December 22

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ