AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ರೌಡಿ ಮೋರ್ಚಾ ಸೇರಲು ಬೇಡಿಕೆ ಹೆಚ್ಚುತ್ತಿದೆಯಂತೆ! ಬಿಜೆಪಿ ವಿರುದ್ಧ ಟ್ವೀಟ್ ದಾಳಿ ಮುಂದುವರೆಸಿದ ಕಾಂಗ್ರೆಸ್

ಬಿಜೆಪಿ ನಾಯಕರು ರೌಡಿಶೀಟರ್​ಗಳೊಂದಿಗೆ ವೇದಿಕೆಯಲ್ಲಿ ಕಾಣಿಸಿಕೊಂಡ ವಿಚಾರ ಭಾರೀ ಚರ್ಚೆಗೆ ಎಡೆ ಮಾಡಿದೆ. ಕಳೆದ ಕೆಲವು ದಿನಗಳಿಂದ ಬಿಜೆಪಿ ಕಾಂಗ್ರೆಸ್ ನಡುವೆ ಕೆಸರೆರೆಚಾಟ ನಡೆಯುತ್ತಿದೆ. ಇಂದು ಕೂಡ ಕಾಂಗ್ರೆಸ್ ಈ ಬಗ್ಗೆ ಸರಣಿ ಟ್ವೀಟ್ ಮಾಡುವ ಮೂಲಕ ವಾಗ್ದಾಳಿ ನಡೆಸಿದೆ.

ಬಿಜೆಪಿ ರೌಡಿ ಮೋರ್ಚಾ ಸೇರಲು ಬೇಡಿಕೆ ಹೆಚ್ಚುತ್ತಿದೆಯಂತೆ! ಬಿಜೆಪಿ ವಿರುದ್ಧ ಟ್ವೀಟ್ ದಾಳಿ ಮುಂದುವರೆಸಿದ ಕಾಂಗ್ರೆಸ್
ಬಿಜೆಪಿ ಮತ್ತು ಕಾಂಗ್ರೆಸ್
TV9 Web
| Edited By: |

Updated on:Dec 05, 2022 | 2:28 PM

Share

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ರಾಜ್ಯ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಯಾತ್ರೆಗಳ ಮೂಲಕ ಜನರನ್ನು ತಲುಪುವ ಪ್ರಯತ್ನಗಳನ್ನು ಮಾಡುತ್ತಿವೆ. ಆದ್ರೆ ಬಿಜೆಪಿ ನಾಯಕರು ರೌಡಿಶೀಟರ್​ಗಳೊಂದಿಗೆ ವೇದಿಕೆಯಲ್ಲಿ ಕಾಣಿಸಿಕೊಂಡ ವಿಚಾರ ಭಾರೀ ಚರ್ಚೆಗೆ ಎಡೆ ಮಾಡಿದೆ. ಇದೇ ವಿಚಾರವಾಗಿ ಕಳೆದ ಕೆಲವು ದಿನಗಳಿಂದ ಬಿಜೆಪಿ ಕಾಂಗ್ರೆಸ್ ನಡುವೆ ಕೆಸರೆರೆಚಾಟ ನಡೆಯುತ್ತಿದೆ. ಇಂದು ಕೂಡ ಕಾಂಗ್ರೆಸ್ ಈ ಬಗ್ಗೆ ಸರಣಿ ಟ್ವೀಟ್ ಮಾಡುವ ಮೂಲಕ ವಾಗ್ದಾಳಿ ನಡೆಸಿದೆ.

ಬಿಜೆಪಿ ರೌಡಿ ಮೋರ್ಚಾ ಸೇರಲು ಬೇಡಿಕೆ ಹೆಚ್ಚುತ್ತಿದೆ

ಮುಂಬರುವ ಚುನಾವಣೆಗೆ ಬಿಜೆಪಿ ರೌಡಿ ಮೋರ್ಚಾ ಸೇರಲು ಬೇಡಿಕೆ ಹೆಚ್ಚುತ್ತಿದೆ. ಒಬ್ಬರ ಮೇಲೆ ಒಬ್ಬರಂತೆ ಬಿಜೆಪಿ ನಾಯಕರು ರೌಡಿಗಳ ಸಮರ್ಥನೆಗೆ ಇಳಿದಿರುವಾಗ ರೌಡಿಗಳಿಗೂ ಬಿಜೆಪಿ ಮೇಲೆ ಪ್ರೇಮ ಉಕ್ಕಿ ಹರಿಯುತ್ತಿದೆ. ಬಿಜೆಪಿ ರೌಡಿ ಮೋರ್ಚಾದ ಉದ್ಘಾಟನೆ ಯಾವಾಗ? ಉದ್ಘಾಟನೆಗೆ ಅಮಿತ್ ಶಾ ಬರುವರೇ, ಅಥವಾ ಬೊಮ್ಮಾಯಿಯವರೇ ಟೇಪ್ ಕಟ್ ಮಾಡುತ್ತಾರಾ? ಎಂದು ಕಾಂಗ್ರೆಸ್ ಟೀಕೆ ಮಾಡಿದೆ.

ಪ್ರಜಾಪ್ರಭುತ್ವ ಹಾಗೂ ಸಾಂವಿಧಾನಿಕ ಆಶಯಗಳನ್ನು ಮುಗಿಸಲೆಂದೇ ಬಿಜೆಪಿ ರೌಡಿ ಮೋರ್ಚಾ ಕಟ್ಟುತ್ತಿದೆ. ಸಾಂವಿಧಾನಿಕ ಆಶಯದ ಮಾದರಿಯಲ್ಲಿ ಪ್ರತಿಭಟಿಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಲು ಬಿಜೆಪಿಯ ರೌಡಿ ಮೋರ್ಚಾ ಪಡೆ ಮುಂದಾಗಿದೆ. ಇಂತಹ ಹಲ್ಲೆಗಳನ್ನು ಹೆಚ್ಚಿಸಲೆಂದೇ ರೌಡಿ ಮೋರ್ಚಾ ಕಟ್ಟುತ್ತಿದ್ದೀರಾ?

ರೌಡಿಗಳನ್ನು ರೌಡಿಗಳೆನ್ನಬೇಡಿ. ಇದು ಮಾಜಿ ರೌಡಿ ಶೀಟರ್ ಸಿಟಿ ರವಿ ಫಾರ್ಮಾನು. ರೌಡಿ ಮೋರ್ಚಾದ ತಯಾರಿ ನಡೆಸಿರುವ ಬಿಜೆಪಿ ಈಗ ರೌಡಿಗಳ ಪರವಾಗಿ ನಿರ್ಲಜ್ಜವಾಗಿ ಸಮರ್ಥನೆಗೆ ಇಳಿದಿದೆ, ತಾವೂ ರೌಡಿಗಳಾಗಿದ್ದೆವು ಎಂಬುದನ್ನೂ ಒಪ್ಪುತ್ತಿದ್ದಾರೆ. “ರೌಡಿಗಳಿಂದ, ರೌಡಿಗಳಿಗಾಗಿ, ರೌಡಿಗಳಿಗೋಸ್ಕರ” ಇದು ಬಿಜೆಪಿಯ ಹೊಸ ದ್ಯೇಯವಾಕ್ಯ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಪರೋಡಿಗಳಿಂದ ರೌಡಿಗಳ ಸಮರ್ಥನೆ

ಬಿಜೆಪಿ ಸೇರಿದರೆ ಸಮಾಜಘಾತುಕರಿಗೂ ಸಮಾಜ ಸೇವಕರ ಬಿರುದು ನೀಡಲಾಗುತ್ತದೆ ಎಂಬುದಕ್ಕೆ ಸಂಸದ ಪ್ರತಾಪ್ ಸಿಂಹ ಅವರ ರೌಡಿಗಳ ಪರ ಸಮರ್ಥನೆಯೇ ಸಾಕ್ಷಿ. ಕೊಲೆ, ಸುಲಿಗೆ, ದರೋಡೆ ಮಾಡಿದವರಿಗೆ ರೆಡ್ ಕಾರ್ಪೆಟ್ ಹಾಕುತ್ತಿರುವ ಬಿಜೆಪಿ ನಿರ್ಲಜ್ಜತನದ ಪರಮಾವಧಿಯನ್ನು ತಲುಪಿದೆ. ಬಿಜೆಪಿಯ ಅಸಲಿ ಸಂಸ್ಕೃತಿ ಬೆತ್ತಲಾಗಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ.

ಬಿಜೆಪಿ ಮುಂದೆ ಭಯೋತ್ಪಾದಕರನ್ನೂ ಸೇರಿಸಿಕೊಳ್ಳಲಿದೆ

ಇನ್ನು ಮತ್ತೊಂದೆಡೆ ಬಿಜೆಪಿಗೆ ರೌಡಿ ಶೀಟರ್‌ಗಳ ಸೇರ್ಪಡೆ ಆರೋಪ ವಿಚಾರಕ್ಕೆ ಸಂಬಂಧಿಸಿ ಟ್ವೀಟ್ ಮೂಲಕ ಡಾ ಎಚ್​ಸಿ ಮಹದೇವಪ್ಪ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಮುಂದೆ ಭಯೋತ್ಪಾದಕರನ್ನೂ ಸೇರಿಸಿಕೊಳ್ಳಲಿದೆ ಎಂದು ಟ್ವೀಟ್ ಮೂಲಕ ಗಂಭೀರ ಅರೋಪ ಮಾಡಿದ್ದಾರೆ.

ಬಿಜೆಪಿ ಏನೇನೂ ಸಮರ್ಥನೆ ನೀಡಿ 30 – 40 ಕೊಲೆ ಮಾಡಿರುವ ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದೆ. ಭಯೋತ್ಪಾದಕರನ್ನು ಪಕ್ಷಕ್ಕೆ ಸೇರಿಸಿಕೊಂಡು ದೇಶಪ್ರೇಮಿಗಳು ಅನ್ನಬಹುದು. ಸಿ.ಟಿ. ರವಿ ಪದೇ ಪದೇ ಇಸ್ಲಾಂಬಾದ್‌ನಲ್ಲಿ ನಮ್ಮ ಧ್ವಜ ಹಾರಿಸುತ್ತೇವೆ ಅನ್ನುತ್ತಾರೆ. ಇದೆಲ್ಲಾ ನೋಡಿದರೆ ಭಯೋತ್ಪಾದಕರನ್ನು ಸೇರಿಸಿಕೊಳ್ಳೋದು ಖಚಿತ ಎಂದು ಟ್ವೀಟ್ ಮಾಡಿದ್ದಾರೆ.

Published On - 12:01 pm, Mon, 5 December 22

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ