AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಅಧಿಕಾರ ಖಚಿತ: ಸಿದ್ದರಾಮಯ್ಯ ವಿಶ್ವಾಸ

ಬಿಜೆಪಿಯವರು ಗಂಡಸರು ಎಂಬುದನ್ನು ತೋರಿಸಲಿ. ಪಾದಪೂಜೆ ಮಾಡಿ ಕನಕಪುರಕ್ಕೆ ಸ್ವಾಗತಿಸುವೆ ಎಂದಿದ್ದೇನೆ. ಯೋಜನೆ ಅನುಷ್ಠಾನ ಮಾಡಲಿ ಎಂಬುದೇ ನಮ್ಮ ಒತ್ತಾಯ. ನಮ್ಮದು ನೀರಿಗಾಗಿ ನಡಿಗೆ, ರಾಜಕಾರಣಕ್ಕಾಗಿ ಅಲ್ಲ ಎಂದು ಡಿಕೆ ಸುರೇಶ್ ಹೇಳಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಅಧಿಕಾರ ಖಚಿತ: ಸಿದ್ದರಾಮಯ್ಯ ವಿಶ್ವಾಸ
ಸಿದ್ದರಾಮಯ್ಯ (ಸಂಗ್ರಹ ಚಿತ್ರ)
TV9 Web
| Edited By: |

Updated on:Jan 11, 2022 | 3:30 PM

Share

ರಾಮನಗರ: ರಾಮನಗರದಲ್ಲಷ್ಟೇ ಅಲ್ಲ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್​ಗೆ ಅಧಿಕಾರ ಸಿಗಲಿದೆ. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಅಧಿಕಾರ ಖಚಿತ ಎಂದು ಟಿವಿ9ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಯುವಕರ ಹುಮ್ಮಸ್ಸಿನಿಂದ ನನಗೂ ಹುಮ್ಮಸ್ಸು ಬಂದಿದೆ. ಹೋರಾಟ ಅಂದರೆ ನಾನು ಯಾವತ್ತೂ ಯುವಕನೇ. ರೇಣುಕಾಚಾರ್ಯ ಕ್ಷಮೆ ಕೇಳಿದ್ರೆ ಮುಗಿದುಹೋಗಿಬಿಡುತ್ತಾ. ನಮ್ಮ ಹೋರಾಟ ತಡೆಗಟ್ಟೋಕೆ ಏನೇ ಷಡ್ಯಂತ್ರ ಮಾಡಲಿ, ಬೆಂಗಳೂರಿನವರೆಗೂ ಪಾದಯಾತ್ರೆ ಯಶಸ್ವಿಯಾಗಿ ತಲುಪುತ್ತೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಚಿವ ಡಾ.ಅಶ್ವತ್ಥ್ ನಾರಾಯಣರಿಂದ ಸವಾಲು ವಿಚಾರವಾಗಿ ರಾಮನಗರದಲ್ಲಿ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಯೋಜನೆ ಅನುಷ್ಠಾನ ಮಾಡಿ ಗಂಡಸ್ತನ ತೋರಿಸಲಿ. ಬಿಜೆಪಿಯವರು ಗಂಡಸರು ಎಂಬುದನ್ನು ತೋರಿಸಲಿ. ಪಾದಪೂಜೆ ಮಾಡಿ ಕನಕಪುರಕ್ಕೆ ಸ್ವಾಗತಿಸುವೆ ಎಂದಿದ್ದೇನೆ. ಯೋಜನೆ ಅನುಷ್ಠಾನ ಮಾಡಲಿ ಎಂಬುದೇ ನಮ್ಮ ಒತ್ತಾಯ. ನಮ್ಮದು ನೀರಿಗಾಗಿ ನಡಿಗೆ, ರಾಜಕಾರಣಕ್ಕಾಗಿ ಅಲ್ಲ ಎಂದು ಹೇಳಿದ್ದಾರೆ.

ಗಂಡಸ್ತನದ ಬಗ್ಗೆ ಕೇಳುವವರು ದೆಹಲಿಯಲ್ಲಿ ತೋರಿಸಲಿ. ಪ್ರಧಾನಿ ಬಳಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಚರ್ಚಿಸಲಿ. ನಮ್ಮ ವಿರುದ್ಧ ಇನ್ನೂ ನೂರು ಪ್ರಕರಣ ದಾಖಲಿಸಲಿ. ಅಶ್ವತ್ಥ್ ನಾರಾಯಣ ಮನೆಗೆ ಹೋಗಬೇಕೆಂದರೆ ಹೋಗುವೆ. ಪೊಲೀಸ್ ಸ್ಟೇಷನ್‌ಗೆ ಬರಬೇಕಾ, ಅರೆಸ್ಟ್ ಮಾಡಿಸಲಿ. ಮಂತ್ರಿಗಿರಿ ಉಳಿಸಿಕೊಳ್ಳಲು ಸುದ್ದಿಗೋಷ್ಠಿ ಮಾಡಿದ್ದಾರೆ ಎಂದು ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ.

ಇದನ್ನೂ ಓದಿ: ‘ಸರ್ಕಾರವೇ ಮೇಕೆದಾಟು ಪಾದಯಾತ್ರೆಯಲ್ಲಿ ಕೊರೊನಾ ಹಬ್ಬಿಸುತ್ತಿದೆ; ಡಿಕೆ ಶಿವಕುಮಾರ್ ಬಳಿ ಸೋಂಕಿತನನ್ನು ಕಳಿಸಲಾಗಿದೆ’

ಇದನ್ನೂ ಓದಿ: Mekedatu Padayatra Live: ಮೂರನೇ ದಿನ ತೆರೆದ ವಾಹನದಲ್ಲಿ ಸಾಗಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ; ಪಾದಯಾತ್ರೆಯ ಕ್ಷಣ ಕ್ಷಣದ ಅಪ್​ಡೇಟ್ ಇಲ್ಲಿದೆ

Published On - 3:27 pm, Tue, 11 January 22

Follow Us
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ