AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಅಧಿಕಾರ ಖಚಿತ: ಸಿದ್ದರಾಮಯ್ಯ ವಿಶ್ವಾಸ

ಬಿಜೆಪಿಯವರು ಗಂಡಸರು ಎಂಬುದನ್ನು ತೋರಿಸಲಿ. ಪಾದಪೂಜೆ ಮಾಡಿ ಕನಕಪುರಕ್ಕೆ ಸ್ವಾಗತಿಸುವೆ ಎಂದಿದ್ದೇನೆ. ಯೋಜನೆ ಅನುಷ್ಠಾನ ಮಾಡಲಿ ಎಂಬುದೇ ನಮ್ಮ ಒತ್ತಾಯ. ನಮ್ಮದು ನೀರಿಗಾಗಿ ನಡಿಗೆ, ರಾಜಕಾರಣಕ್ಕಾಗಿ ಅಲ್ಲ ಎಂದು ಡಿಕೆ ಸುರೇಶ್ ಹೇಳಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಅಧಿಕಾರ ಖಚಿತ: ಸಿದ್ದರಾಮಯ್ಯ ವಿಶ್ವಾಸ
ಸಿದ್ದರಾಮಯ್ಯ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on:Jan 11, 2022 | 3:30 PM

ರಾಮನಗರ: ರಾಮನಗರದಲ್ಲಷ್ಟೇ ಅಲ್ಲ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್​ಗೆ ಅಧಿಕಾರ ಸಿಗಲಿದೆ. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಅಧಿಕಾರ ಖಚಿತ ಎಂದು ಟಿವಿ9ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಯುವಕರ ಹುಮ್ಮಸ್ಸಿನಿಂದ ನನಗೂ ಹುಮ್ಮಸ್ಸು ಬಂದಿದೆ. ಹೋರಾಟ ಅಂದರೆ ನಾನು ಯಾವತ್ತೂ ಯುವಕನೇ. ರೇಣುಕಾಚಾರ್ಯ ಕ್ಷಮೆ ಕೇಳಿದ್ರೆ ಮುಗಿದುಹೋಗಿಬಿಡುತ್ತಾ. ನಮ್ಮ ಹೋರಾಟ ತಡೆಗಟ್ಟೋಕೆ ಏನೇ ಷಡ್ಯಂತ್ರ ಮಾಡಲಿ, ಬೆಂಗಳೂರಿನವರೆಗೂ ಪಾದಯಾತ್ರೆ ಯಶಸ್ವಿಯಾಗಿ ತಲುಪುತ್ತೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಚಿವ ಡಾ.ಅಶ್ವತ್ಥ್ ನಾರಾಯಣರಿಂದ ಸವಾಲು ವಿಚಾರವಾಗಿ ರಾಮನಗರದಲ್ಲಿ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಯೋಜನೆ ಅನುಷ್ಠಾನ ಮಾಡಿ ಗಂಡಸ್ತನ ತೋರಿಸಲಿ. ಬಿಜೆಪಿಯವರು ಗಂಡಸರು ಎಂಬುದನ್ನು ತೋರಿಸಲಿ. ಪಾದಪೂಜೆ ಮಾಡಿ ಕನಕಪುರಕ್ಕೆ ಸ್ವಾಗತಿಸುವೆ ಎಂದಿದ್ದೇನೆ. ಯೋಜನೆ ಅನುಷ್ಠಾನ ಮಾಡಲಿ ಎಂಬುದೇ ನಮ್ಮ ಒತ್ತಾಯ. ನಮ್ಮದು ನೀರಿಗಾಗಿ ನಡಿಗೆ, ರಾಜಕಾರಣಕ್ಕಾಗಿ ಅಲ್ಲ ಎಂದು ಹೇಳಿದ್ದಾರೆ.

ಗಂಡಸ್ತನದ ಬಗ್ಗೆ ಕೇಳುವವರು ದೆಹಲಿಯಲ್ಲಿ ತೋರಿಸಲಿ. ಪ್ರಧಾನಿ ಬಳಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಚರ್ಚಿಸಲಿ. ನಮ್ಮ ವಿರುದ್ಧ ಇನ್ನೂ ನೂರು ಪ್ರಕರಣ ದಾಖಲಿಸಲಿ. ಅಶ್ವತ್ಥ್ ನಾರಾಯಣ ಮನೆಗೆ ಹೋಗಬೇಕೆಂದರೆ ಹೋಗುವೆ. ಪೊಲೀಸ್ ಸ್ಟೇಷನ್‌ಗೆ ಬರಬೇಕಾ, ಅರೆಸ್ಟ್ ಮಾಡಿಸಲಿ. ಮಂತ್ರಿಗಿರಿ ಉಳಿಸಿಕೊಳ್ಳಲು ಸುದ್ದಿಗೋಷ್ಠಿ ಮಾಡಿದ್ದಾರೆ ಎಂದು ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ.

ಇದನ್ನೂ ಓದಿ: ‘ಸರ್ಕಾರವೇ ಮೇಕೆದಾಟು ಪಾದಯಾತ್ರೆಯಲ್ಲಿ ಕೊರೊನಾ ಹಬ್ಬಿಸುತ್ತಿದೆ; ಡಿಕೆ ಶಿವಕುಮಾರ್ ಬಳಿ ಸೋಂಕಿತನನ್ನು ಕಳಿಸಲಾಗಿದೆ’

ಇದನ್ನೂ ಓದಿ: Mekedatu Padayatra Live: ಮೂರನೇ ದಿನ ತೆರೆದ ವಾಹನದಲ್ಲಿ ಸಾಗಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ; ಪಾದಯಾತ್ರೆಯ ಕ್ಷಣ ಕ್ಷಣದ ಅಪ್​ಡೇಟ್ ಇಲ್ಲಿದೆ

Published On - 3:27 pm, Tue, 11 January 22

Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?