AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಗಮ ಮಂಡಳಿ ನೇಮಕಾತಿ ಸಭೆ ಅಪೂರ್ಣ: ಸಿಎಂ, ಡಿಸಿಎಂ ಮಧ್ಯೆ ಮೂಡದ ಒಮ್ಮತ

ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಕುತೂಹಲ ಹುಟ್ಟುಹಾಕಿದೆ. ರಾಜ್ಯ ಕಾಂಗ್ರೆಸ್​ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೆವಾಲಾ ನೇತೃತ್ವದಲ್ಲಿ ಮಂಗಳವಾರ ತಡರಾತ್ರಿವರೆಗು ತಾಜ್ ವೆಸ್ಟ್ ಎಂಡ್ ಹೋಟೆಲ್​​ನಲ್ಲಿ ಸಭೆ ನಡೆದರೂ ಪಟ್ಟಿ ಇನ್ನೂ ಅಂತಿಮಗೊಂಡಿಲ್ಲ. ಈ ಹಿನ್ನೆಲೆ ಸುರ್ಜೆವಾಲಾ ನ.28 ರಂದು ರಾಜ್ಯಕ್ಕೆ ಮತ್ತೆ ಬರುವ ಸಾಧ್ಯತೆ ಇದೆ.

ನಿಗಮ ಮಂಡಳಿ ನೇಮಕಾತಿ ಸಭೆ ಅಪೂರ್ಣ: ಸಿಎಂ, ಡಿಸಿಎಂ ಮಧ್ಯೆ ಮೂಡದ ಒಮ್ಮತ
ಡಿಕೆ ಶಿವಕುಮಾರ್​, ಸಿದ್ದರಾಮಯ್ಯ
ಪ್ರಸನ್ನ ಗಾಂವ್ಕರ್​
| Edited By: |

Updated on: Nov 22, 2023 | 10:23 AM

Share

ಬೆಂಗಳೂರು ನ.22: ನಿಗಮ-ಮಂಡಳಿಗಳಿಗೆ (Corporation-Board) ಅಧ್ಯಕ್ಷರ ನೇಮಕ ವಿಚಾರವಾಗಿ ಮಂಗಳವಾರ (ನ.22) ರಾತ್ರಿ ತಾಜ್ ವೆಸ್ಟ್ ಎಂಡ್ ಹೋಟೆಲ್​ನಲ್ಲಿ ರಾಜ್ಯ ಕಾಂಗ್ರೆಸ್​ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೆವಾಲಾ (Randeep Singh Surjewala) ನೇತೃತ್ವದಲ್ಲಿ ಸಭೆ ನಡೆದಿತ್ತು. ಈ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ (DK Shivakumar) ಭಾಗಿಯಾಗಿದ್ದರು. ತಡರಾತ್ರಿವರೆಗು ನಡೆದ ಸಭೆ ಅಪೂರ್ಣಗೊಂಡಿದೆ ಎಂದು ಮೂಲಗಳು ತಿಳಿಸಿವೆ. ಹೌದು ಅಧ್ಯಕ್ಷರ ನೇಮಕ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಒಮ್ಮತಕ್ಕೆ ಬಂದಿಲ್ಲ. ಹೀಗಾಗಿ ರಣದೀಪ​ ಸುರ್ಜೆವಾಲಾ ಮತ್ತೊಮ್ಮೆ ಸಭೆ ನಡೆಸಲು ತೀರ್ಮಾನಿಸಿದ್ದಾರೆ.

ಈ ಸಂಬಂಧ ಸುರ್ಜೇವಾಲ ನವೆಂಬರ್​ 28ರಂದು ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಇನ್ನು ಮಂಗಳವಾರ ನಡೆದ ಸಭೆಯಲ್ಲಿ ಹಲವು ನಾಯಕರ ಹೆಸರು ಪ್ರಸ್ತಾಪವಾಗಿದ್ದು, ಶಾರ್ಟ್ ಲಿಸ್ಟ್ ಮಾಡಲಾಗಿದೆ. ಈ ಪಟ್ಟಿಯನ್ನು ತೆರಳಿರುವ ಸುರ್ಜೆವಾಲಾ ಎಐಸಿಸಿ ನಾಯಕರೊಂದಿಗೆ ಚರ್ಚಿಸಲಿದ್ದಾರೆ. ನಂತರ ರಾಜ್ಯಕ್ಕೆ ಆಗಮಿಸಿ ಅಂತಿಮ ತೀರ್ಮಾನ ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: ಸಂಭಾವ್ಯರಿಗೆ ಕರೆ ಮಾಡಿ ವಿಚಾರಿಸುತ್ತಿರುವ ಸುರ್ಜೇವಾಲ, ಇಲ್ಲಿದೆ ಪಟ್ಟಿ

ಸಂಭಾವ್ಯರ ಪಟ್ಟಿ ಹೀಗಿದೆ

  • ಪಿ.ಎಂ ನರೇಂದ್ರ ಸ್ವಾಮಿ
  • ರಮೇಶ್ ಬಾಬು ಬಂಡಿಸಿದ್ದೇಗೌಡ
  • ಅನಿಲ್ ಚಿಕ್ಕಮಾದು
  • ಟಿ.ಡಿ ರಾಜೇಗೌಡ
  • ಶಿವಲಿಂಗೇಗೌಡ
  • ಬಿ.ಕೆ ಸಂಗಮೇಶ್
  • ಬಂಗಾರಪೇಟೆ ನಾರಾಯಣಸ್ವಾಮಿ
  • ಕೆ.ವೈ ನಂಜೇಗೌಡ
  • ಬಿ.ಆರ್ ಪಾಟೀಲ್
  • ಗಣೇಶ್ ಹುಕ್ಕೇರಿ
  • ಮಹಾಂತೇಶ್ ಕೌಜಲಗಿ
  • ಯಶವಂತ್ ರಾಯ್ ಗೌಡ ಪಾಟೀಲ್
  • ಬಿ.ಜಿ ಗೋವಿಂದಪ್ಪ
  • ರಾಘವೇಂದ್ರ ಹಿಟ್ನಾಳ್
  • ರಘುಮೂರ್ತಿ
  • ಭೀಮಣ್ಣ ನಾಯ್ಕ್
  • ಸತೀಶ್ ಸೈಲ್
  • ಪ್ರಸಾದ್ ಅಬ್ಬಯ್ಯ
  • ಜಿ.ಟಿ ಪಾಟೀಲ್
  • ಡಿ.ಆರ್ ಪಾಟೀಲ್
  • ಬಸನಗೌಡ ತುರುವಿಹಾಳ್

ಎಷ್ಟು ಮಂದಿಗೆ ಅವಕಾಶ?: ಸರ್ಕಾರದ ಅಧೀನದಲ್ಲಿ ಒಟ್ಟಾರೆ 85 ನಿಗಮಗಳಿದ್ದು, ಅಲ್ಲಿಗೆ ನೇಮಕ ಮಾಡುವ ಪೂರ್ಣ ಅಧಿಕಾರ ಸರ್ಕಾರಕ್ಕಿದೆ. ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ನಿರ್ದೇಶಕರನ್ನು ನೇಮಕ ಮಾಡಲಾಗುತ್ತದೆ. ಎಲ್ಲ ರಾಜಕೀಯ ಪಕ್ಷಗಳು ತಮ್ಮ ಅಧಿಕಾರದ ಸರದಿ ಬಂದಾಗ ನೇಮಕಗಳನ್ನು ಮಾಡುತ್ತವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?