AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಡಿಯೂರಪ್ಪ ವಿರೋಧಿ ಬಣದಿಂದ ಸ್ವಾತಂತ್ರ್ಯದ ಬಾವುಟ! ಸಂದರ್ಭಕ್ಕೆ ತಕ್ಕಂತೆ ಪದ-ಪದವಿ ಪೋಣಿಸುವುದಾದರೆ ಅದು ಹೀಗಾಗಬಹುದೇ?

bs yediyurappa: ರಾಜ್ಯಕ್ಕೆ ಅರುಣ್ ಸಿಂಗ್ ಭೇಟಿಗೂ ಮೊದಲೇ ಸಂಘ ಪರಿವಾರದ ನಾಯಕರಿಂದಲೂ ಮಾಹಿತಿ ಸಂಗ್ರಹಗೊಂಡಿತ್ತು. ಅರುಣ್ ಸಿಂಗ್ ಭೇಟಿ ಕಾಲಕ್ಕೆ ಇನ್ನೂ ಕೆಲ ಶಾಸಕರಿಂದಲೂ ಮಾಹಿತಿ ಪೂರೈಕೆಯಾಗಿದೆ.  ಅರುಣ್ ಸಿಂಗ್ ರಾಜ್ಯ ಭೇಟಿ ಅಭಿಪ್ರಾಯ ಸಂಗ್ರಹವೂ ನಾಯಕತ್ವದ ಬದಲಾವಣೆ ಭಾಗವೇ ಆಗಿತ್ತು ಎಂಬುದು ಕುತೂಹಲಕಾರಿಯಾಗಿದೆ.

ಯಡಿಯೂರಪ್ಪ ವಿರೋಧಿ ಬಣದಿಂದ ಸ್ವಾತಂತ್ರ್ಯದ ಬಾವುಟ! ಸಂದರ್ಭಕ್ಕೆ ತಕ್ಕಂತೆ ಪದ-ಪದವಿ ಪೋಣಿಸುವುದಾದರೆ ಅದು ಹೀಗಾಗಬಹುದೇ?
ಕೊನೆಗೂ ಯಡಿಯೂರಪ್ಪ ಕೆಳಗಿಳಿಸುವಲ್ಲಿ ಯಶಸ್ಸು ಪಡೆದ ವಿರೋಧಿ ಬಣ; ಸ್ವಾತಂತ್ರ್ಯ ದಿನಾಚರಣೆಗೆ ಹೊಸ ಸಿಎಂ
TV9 Web
| Edited By: |

Updated on:Jul 26, 2021 | 4:03 PM

Share

ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿ ಸ್ಥಾನದಿಂದ ಬಿ ಎಸ್​ ಯಡಿಯೂರಪ್ಪ ಅವರನ್ನು ಕೆಳಗಿಳಿಸುವಲ್ಲಿ ವಿರೋಧಿ ಬಣ ಕೊನೆಗೂ ಯಶಸ್ಸು ಸಾಧಿಸಿದೆ. ಅದೂ ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆ ವೇಳೆಗೆ ಹೊಸ ಸಿಎಂ ಇರ್ತಾರೆ ಎಂದೇ ಬಿಂಬಿಸಿಕೊಂಡು ಬಂದಿದ್ದ ವಿರೋಧಿ ಪಡೆ ಮೇಲುಗೈ ಸಾಧಿಸಿದೆ. 

ಗಮನಾರ್ಹವೆಂದ್ರೆ ಕೇವಲ ವಯೋ ಸಹಜ ಕಾರಣಗಳನ್ನು ಮಾತ್ರ ಯಡಿಯೂರಪ್ಪ ವಿರುದ್ದ ಬಳಸಲ್ಪಟ್ಟಿಲ್ಲ. ಬದಲಿಗೆ ಯಡಿಯೂರಪ್ಪ ಹೊರತುಪಡಿಸಿ, ಅವರ ಕುಟುಂಬಸ್ಥರ ದಾಖಲೆಗಳನ್ನೂ ಸಹ ಬಿಎಸ್ವೈ ವಿರೋಧಿ ಬಣ  ಹೈಕಮಾಂಡ್ ನಾಯಕರಿಗೆ ತಲುಪಿಸಿತ್ತು.

ಸಿಎಂ‌ ಪುತ್ರ ವಿಜಯೇಂದ್ರಗೆ ಸಂಬಂಧಪಟ್ಟ ದಾಖಲೆಗಳನ್ನು ಸಂಗ್ರಹಿಸಿ ಹೈಕಮಾಂಡ್ ಗೆ ರವಾನೆಯಾಗಿದೆ. ಸಿಎಂ ಯಡಿಯೂರಪ್ಪ ಅವರ ದಿನಚರಿಯ ವಿವರಗಳನ್ನು ಕೂಡ ವಿರೋಧಿ ಟೀಂ ಸಂಗ್ರಹಿಸಿ, ಹೈಕಮಾಂಡ್ ಗಮನಕ್ಕೆ ತಂದಿತ್ತು.

ಯಡಿಯೂರಪ್ಪ ತಾವೇ ಐದಕ್ಕೂ ಹೆಚ್ಚು ಪ್ರಮುಖ ಖಾತೆಗಳನ್ನು ಇಟ್ಟುಕೊಂಡಿರುವ ಬಗ್ಗೆ ಸವಿವರ ತಲುಪಿಯಾಗಿತ್ತು. ಪ್ರತಿ ಇಲಾಖೆಯಲ್ಲೂ ವಿಜಯೇಂದ್ರ ಹಸ್ತಕ್ಷೇಪ, ಟೆಂಡರ್ ಪ್ರಕ್ರಿಯೆಗಳಲ್ಲಿ ವಿಜಯೇಂದ್ರ ಮೂಗು ತೂರಿಸುವುದು, ಈ ಎಲ್ಲ ವಿಚಾರಗಳನ್ನು ದಾಖಲೆ ಸಮೇತ ಕೊಂಡೊಯ್ದು ಹೈಕಮಾಂಡ್ ನಾಯಕರಿಗೆ ಅದೇ ಟೀಂ ತಲುಪಿಸಿತ್ತು.

ರಾಜ್ಯಕ್ಕೆ ಅರುಣ್ ಸಿಂಗ್ ಭೇಟಿಗೂ ಮೊದಲೇ ಸಂಘ ಪರಿವಾರದ ನಾಯಕರಿಂದಲೂ ಮಾಹಿತಿ ಸಂಗ್ರಹಗೊಂಡಿತ್ತು. ಅರುಣ್ ಸಿಂಗ್ ಭೇಟಿ ಕಾಲಕ್ಕೆ ಇನ್ನೂ ಕೆಲ ಶಾಸಕರಿಂದಲೂ ಮಾಹಿತಿ ಪೂರೈಕೆಯಾಗಿದೆ.  ಅರುಣ್ ಸಿಂಗ್ ರಾಜ್ಯ ಭೇಟಿ ಅಭಿಪ್ರಾಯ ಸಂಗ್ರಹವೂ ನಾಯಕತ್ವದ ಬದಲಾವಣೆ ಭಾಗವೇ ಆಗಿತ್ತು ಎಂಬುದು ಕುತೂಹಲಕಾರಿಯಾಗಿದೆ. ಕೊನೆಗೂ ತಮ್ಮ ಪ್ರಯತ್ನದಲ್ಲಿ ಯಡಿಯೂರಪ್ಪ ವಿರೋಧಿ ಬಣ ಯಶಸ್ಸು ಕಂಡಿದೆ.

ಈ ಸಂದರ್ಭಕ್ಕೆ ತಕ್ಕಂತೆ ಪದ- ಪದವಿ ಪೋಣಿಸುವುದಾದರೆ ಅದು ಹೀಗಾಗಬಹುದೇ?  ನಾಳೆ ಯಾರ ‘ಜೋಶ್‘ ಉಳಿಯುತ್ತದೋ..? ಯಾರಿಗೆ ಸಿಗುತ್ತೋ ‘ಬೆಲ್ಲ‘ದ ಹೋಳಿಗೆ..? ಯಾರು ‘ಸೀಟಿ‘ ಹೊಡೆಯುತ್ತಾರೋ…? ಯಾರಾಗುತ್ತಾರೋ ಕರ್ನಾಟಕದ ‘ಮುರುಗೇಶ‘… ಯಾರ ಯತ್ನಾ(ಳ) ಫಲ ಕೊಡುತ್ತದೋ ಗೊತ್ತಿಲ್ಲ.. ಒಟ್ನಲ್ಲಿ ಯಾರೇ ಆದರೂ ‘ಸಂತೋಷ…’

ಬಿ.ಎಸ್. ಯಡಿಯೂರಪ್ಪ ಬಿಜೆಪಿಯ ಆಧಾರ ಸ್ತಂಭವಿದ್ದಂತೆ; ಬಿಎಸ್‌ವೈ ರಾಜೀನಾಮೆಯಿಂದ ನಮ್ಮ ಬಲ ಕುಸಿದ ಭಾವನೆ: ಚಿತ್ರದುರ್ಗದಲ್ಲಿ ಬಿಜೆಪಿ ಶಾಸಕ

(corruption allegations team opposite to bs yediyurappa successful in pulling him down timely)

Published On - 3:41 pm, Mon, 26 July 21

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ