AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರ ಉದ್ಘಾಟನೆಗೆ ದಿನಗಣನೆ: ಸಂಭ್ರಮ ಕೆಡಿಸಲು ಕಾಂಗ್ರೆಸ್​ ಕುತಂತ್ರ, ಬಿಜೆಪಿ ಆರೋಪ

ರಾಮಮಂದಿರ ನಿರ್ಮಾಣದ ವಿಚಾರವಾಗಿ ರಾಜ್ಯ ರಾಜಕೀಯದಲ್ಲಿ ಆರೋಪ ಪ್ರತ್ಯಾರೋಪಗಳು ನಡೆಯುತ್ತಿವೆ. ಇದೀಗ ರಾಮಮಂದಿರ ಉದ್ಘಾಟನೆ ಸಂಭ್ರಮವನ್ನು ಕೆಡಿಸಲು ಕುತಂತ್ರಗಳನ್ನ ಹೆಣೆಯುತ್ತಿದೆ ಎಂದು ಕಾಂಗ್ರೆಸ್​ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಆರೋಪ ಮಾಡಿದೆ.

ರಾಮ ಮಂದಿರ ಉದ್ಘಾಟನೆಗೆ ದಿನಗಣನೆ: ಸಂಭ್ರಮ ಕೆಡಿಸಲು ಕಾಂಗ್ರೆಸ್​ ಕುತಂತ್ರ, ಬಿಜೆಪಿ ಆರೋಪ
ಪ್ರಾತಿನಿಧಿಕ ಚಿತ್ರ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Jan 06, 2024 | 4:34 PM

Share

ಬೆಂಗಳೂರು, ಜನವರಿ 06: ಅಯೋಧ್ಯೆಯಲ್ಲಿ ರಾಮಮಂದಿರ (Ram Mandir) ಉದ್ಘಾಟನೆಗೆ ದಿನಗಣನೆ ಶುರುವಾಗಿದೆ. ಜ.22ರಂದು ಶ್ರೀರಾಮ ಮಂದಿರದ ಉದ್ಘಾಟನೆ ಆಗುತ್ತಿದೆ. ಇಡೀ ದೇಶ ಈ ಸಂಭ್ರಮದಲ್ಲಿದೆ. ರಾಮಮಂದಿರ ನಿರ್ಮಾಣದ ವಿಚಾರವಾಗಿ ರಾಜ್ಯ ರಾಜಕೀಯದಲ್ಲಿ ಆರೋಪ ಪ್ರತ್ಯಾರೋಪಗಳು ನಡೆಯುತ್ತಿವೆ. ಇದೀಗ ರಾಮಮಂದಿರ ಉದ್ಘಾಟನೆ ಸಂಭ್ರಮವನ್ನು ಕೆಡಿಸಲು ಕುತಂತ್ರಗಳನ್ನ ಹೆಣೆಯುತ್ತಿದೆ ಎಂದು ಕಾಂಗ್ರೆಸ್​ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಆರೋಪ ಮಾಡಿದೆ.

ಈ ಕುರಿತಾಗಿ ಟ್ವೀಟ್​ ಮಾಡಿರುವ ರಾಜ್ಯ ಬಿಜೆಪಿ, ಪ್ರಭು ಶ್ರೀರಾಮ ಮಂದಿರದ ಉದ್ಘಾಟನೆ ಜನವರಿ 22 ರಂದು ಅದ್ಧೂರಿಯಾಗಿ ಆಗುತ್ತಿದೆ. ಇಡೀ ದೇಶವೇ ಸಂಭ್ರಮದಲ್ಲಿರುವಾಗ, ಕಾಂಗ್ರೆಸ್​ ಸರ್ಕಾರ ರಾಜ್ಯದಲ್ಲಿ ಸಂಭ್ರಮವನ್ನು ಕೆಡಿಸಲು ಹೆಣಿಯುತ್ತಿರುವ ಕುತಂತ್ರಗಳು:

  • ಅಯೋಧ್ಯಗೆ ಹೋಗುವವರಿಗೆ ಗೋಧ್ರಾ ಬೆದರಿಕೆ
  • ಶುಭ ಘಳಿಗೆ ವೇಳೆ ಸುಳ್ಳು ಸುದ್ಧಿ ಹಬ್ಬಿಸುವುದು
  • ರಾಮ ಭಕ್ತರು ಸಂಭ್ರಮಿಸದಂತೆ 144 ಸೆಕ್ಷನ್‌ ಜಾರಿ
  • ರಾಜ್ಯಾದ್ಯಂತ 22 ರಂದು ವಿದ್ಯುತ್‌ ಸ್ಥಗಿತ
  • ಮನೆ ಮನೆಯ ಟಿವಿ ಕೇಬಲ್‌ ಸಂಪರ್ಕ ತಪ್ಪಿಸುವುದು

ರಾಮ ಬಂಟ ಹನುಮನ ನಾಡಿನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರದ ದುರಾಡಳಿತಕ್ಕೆ, ಕುತಂತ್ರಕ್ಕೆ, ರಾಜ್ಯದ ಜನರು ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠಕಲಿಸಲಿರುವುದು ಅಷ್ಟೇ ಸತ್ಯ ಎಂದು ಕಿಡಿಕಾರಿದೆ.

ಬಿಜೆಪಿ ಟ್ವೀಟ್​

ಅಧಿಕಾರಕ್ಕೆ ಬಂದ ಕಾಂಗ್ರೆಸ್​ ರಾಜ್ಯದಲ್ಲಿ ಹಿಂದೂಗಳನ್ನು ಸಂಪೂರ್ಣವಾಗಿ ಹತ್ತಿಕ್ಕುತ್ತಿರುವ ಪರಿ.  ಮತಾಂತರ ನಿಷೇಧ ಕಾಯ್ದೆ ವಾಪಸ್​, ದೇವಾಲಯಗಳು ಮುಜರಾಯಿ ಸುಪರ್ದಿಗೆ, ದೇವಸ್ಥಾನಗಳ ಹಣ ಮೌಲ್ವಿಗಳ ಆತ್ಮ ತೃಪ್ತಿಗೆ, ಕೋಲಾರ, ಶಿವಮೊಗ್ಗ, ಉಡುಪಿಯಲ್ಲಿ ಕೋಮುಗಲಭೆ, ದತ್ತ ಪೀಠ, ರಾಮ ಮಂದಿರ ಭಕ್ತರ ಕೇಸ್‌ ಓಪನ್, ಬೀದಿಗೆ ಬಂದ ‌PFI ಗೂಂಡಾಗಳು – ಹಿಂದೂಗಳೇ ಟಾರ್ಗೆಟ್, ಮತ್ತೆ ಜಾತಿಗಳ ನಡುವೆ ಕಂದಕ ಸೃಷ್ಟಿಸಿ ಧರ್ಮ ವಿಭಜನೆ.

ಇದನ್ನೂ ಓದಿ: ‘ನಾನೊಬ್ಬ ಕರಸೇವಕ, ನನ್ನನ್ನೂ ಬಂಧಿಸಿ’ ಅಭಿಯಾನ ಆರಂಭ: ಸುನೀಲ್‍ ಕುಮಾರ್

ಸಿಎ ಸಿದ್ದರಾಮಯ್ಯ ಅವರ ಸೊಕ್ಕು ಇಳಿಸಲು ಜನರಿಗೆ ಇರುವ ಒಂದೇ ಒಂದು ಅವಕಾಶವೆಂದರೆ 2024 ಲೋಕಸಭಾ ಚುನಾವಣೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!