ರಾಮ ಮಂದಿರ ಉದ್ಘಾಟನೆಗೆ ದಿನಗಣನೆ: ಸಂಭ್ರಮ ಕೆಡಿಸಲು ಕಾಂಗ್ರೆಸ್​ ಕುತಂತ್ರ, ಬಿಜೆಪಿ ಆರೋಪ

| Updated By: ಗಂಗಾಧರ​ ಬ. ಸಾಬೋಜಿ

Updated on: Jan 06, 2024 | 4:34 PM

ರಾಮಮಂದಿರ ನಿರ್ಮಾಣದ ವಿಚಾರವಾಗಿ ರಾಜ್ಯ ರಾಜಕೀಯದಲ್ಲಿ ಆರೋಪ ಪ್ರತ್ಯಾರೋಪಗಳು ನಡೆಯುತ್ತಿವೆ. ಇದೀಗ ರಾಮಮಂದಿರ ಉದ್ಘಾಟನೆ ಸಂಭ್ರಮವನ್ನು ಕೆಡಿಸಲು ಕುತಂತ್ರಗಳನ್ನ ಹೆಣೆಯುತ್ತಿದೆ ಎಂದು ಕಾಂಗ್ರೆಸ್​ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಆರೋಪ ಮಾಡಿದೆ.

ರಾಮ ಮಂದಿರ ಉದ್ಘಾಟನೆಗೆ ದಿನಗಣನೆ: ಸಂಭ್ರಮ ಕೆಡಿಸಲು ಕಾಂಗ್ರೆಸ್​ ಕುತಂತ್ರ, ಬಿಜೆಪಿ ಆರೋಪ
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು, ಜನವರಿ 06: ಅಯೋಧ್ಯೆಯಲ್ಲಿ ರಾಮಮಂದಿರ (Ram Mandir) ಉದ್ಘಾಟನೆಗೆ ದಿನಗಣನೆ ಶುರುವಾಗಿದೆ. ಜ.22ರಂದು ಶ್ರೀರಾಮ ಮಂದಿರದ ಉದ್ಘಾಟನೆ ಆಗುತ್ತಿದೆ. ಇಡೀ ದೇಶ ಈ ಸಂಭ್ರಮದಲ್ಲಿದೆ. ರಾಮಮಂದಿರ ನಿರ್ಮಾಣದ ವಿಚಾರವಾಗಿ ರಾಜ್ಯ ರಾಜಕೀಯದಲ್ಲಿ ಆರೋಪ ಪ್ರತ್ಯಾರೋಪಗಳು ನಡೆಯುತ್ತಿವೆ. ಇದೀಗ ರಾಮಮಂದಿರ ಉದ್ಘಾಟನೆ ಸಂಭ್ರಮವನ್ನು ಕೆಡಿಸಲು ಕುತಂತ್ರಗಳನ್ನ ಹೆಣೆಯುತ್ತಿದೆ ಎಂದು ಕಾಂಗ್ರೆಸ್​ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಆರೋಪ ಮಾಡಿದೆ.

ಈ ಕುರಿತಾಗಿ ಟ್ವೀಟ್​ ಮಾಡಿರುವ ರಾಜ್ಯ ಬಿಜೆಪಿ, ಪ್ರಭು ಶ್ರೀರಾಮ ಮಂದಿರದ ಉದ್ಘಾಟನೆ ಜನವರಿ 22 ರಂದು ಅದ್ಧೂರಿಯಾಗಿ ಆಗುತ್ತಿದೆ. ಇಡೀ ದೇಶವೇ ಸಂಭ್ರಮದಲ್ಲಿರುವಾಗ, ಕಾಂಗ್ರೆಸ್​ ಸರ್ಕಾರ ರಾಜ್ಯದಲ್ಲಿ ಸಂಭ್ರಮವನ್ನು ಕೆಡಿಸಲು ಹೆಣಿಯುತ್ತಿರುವ ಕುತಂತ್ರಗಳು:

  • ಅಯೋಧ್ಯಗೆ ಹೋಗುವವರಿಗೆ ಗೋಧ್ರಾ ಬೆದರಿಕೆ
  • ಶುಭ ಘಳಿಗೆ ವೇಳೆ ಸುಳ್ಳು ಸುದ್ಧಿ ಹಬ್ಬಿಸುವುದು
  • ರಾಮ ಭಕ್ತರು ಸಂಭ್ರಮಿಸದಂತೆ 144 ಸೆಕ್ಷನ್‌ ಜಾರಿ
  • ರಾಜ್ಯಾದ್ಯಂತ 22 ರಂದು ವಿದ್ಯುತ್‌ ಸ್ಥಗಿತ
  • ಮನೆ ಮನೆಯ ಟಿವಿ ಕೇಬಲ್‌ ಸಂಪರ್ಕ ತಪ್ಪಿಸುವುದು

ರಾಮ ಬಂಟ ಹನುಮನ ನಾಡಿನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರದ ದುರಾಡಳಿತಕ್ಕೆ, ಕುತಂತ್ರಕ್ಕೆ, ರಾಜ್ಯದ ಜನರು ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠಕಲಿಸಲಿರುವುದು ಅಷ್ಟೇ ಸತ್ಯ ಎಂದು ಕಿಡಿಕಾರಿದೆ.

ಬಿಜೆಪಿ ಟ್ವೀಟ್​

ಅಧಿಕಾರಕ್ಕೆ ಬಂದ ಕಾಂಗ್ರೆಸ್​ ರಾಜ್ಯದಲ್ಲಿ ಹಿಂದೂಗಳನ್ನು ಸಂಪೂರ್ಣವಾಗಿ ಹತ್ತಿಕ್ಕುತ್ತಿರುವ ಪರಿ.  ಮತಾಂತರ ನಿಷೇಧ ಕಾಯ್ದೆ ವಾಪಸ್​, ದೇವಾಲಯಗಳು ಮುಜರಾಯಿ ಸುಪರ್ದಿಗೆ, ದೇವಸ್ಥಾನಗಳ ಹಣ ಮೌಲ್ವಿಗಳ ಆತ್ಮ ತೃಪ್ತಿಗೆ, ಕೋಲಾರ, ಶಿವಮೊಗ್ಗ, ಉಡುಪಿಯಲ್ಲಿ ಕೋಮುಗಲಭೆ, ದತ್ತ ಪೀಠ, ರಾಮ ಮಂದಿರ ಭಕ್ತರ ಕೇಸ್‌ ಓಪನ್, ಬೀದಿಗೆ ಬಂದ ‌PFI ಗೂಂಡಾಗಳು – ಹಿಂದೂಗಳೇ ಟಾರ್ಗೆಟ್, ಮತ್ತೆ ಜಾತಿಗಳ ನಡುವೆ ಕಂದಕ ಸೃಷ್ಟಿಸಿ ಧರ್ಮ ವಿಭಜನೆ.

ಇದನ್ನೂ ಓದಿ: ‘ನಾನೊಬ್ಬ ಕರಸೇವಕ, ನನ್ನನ್ನೂ ಬಂಧಿಸಿ’ ಅಭಿಯಾನ ಆರಂಭ: ಸುನೀಲ್‍ ಕುಮಾರ್

ಸಿಎ ಸಿದ್ದರಾಮಯ್ಯ ಅವರ ಸೊಕ್ಕು ಇಳಿಸಲು ಜನರಿಗೆ ಇರುವ ಒಂದೇ ಒಂದು ಅವಕಾಶವೆಂದರೆ 2024 ಲೋಕಸಭಾ ಚುನಾವಣೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.